ಬೀದರ್‌ | ಮನರೇಗಾ ಕೂಲಿ ಕಾರ್ಮಿಕರಿಗೆ ಹೆಚ್ಚುವರಿ ಕೆಲಸ ನೀಡುವಂತೆ ಆಗ್ರಹ

Date:

ಮಾಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ 100 ರಿಂದ 150 ಮಾನವ ದಿನಗಳು ಹೆಚ್ಚುವರಿ ಕೆಲಸ ಒದಗಿಸುವಂತೆ ಗ್ರಾಮೀಣ ಕೂಲಿಕಾರರ ಸಂಘ ಬೀದರ್‌ ಜಿಲ್ಲಾ ಘಟಕ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ಶನಿವಾರ ಭಾಲ್ಕಿ ಪಟ್ಟಣದಲ್ಲಿ ಜರುಗಿದ ಮಾಜಿಸ ಸಚಿವ ಡಾ.ಭೀಮಣ್ಣಾ ಖಂಡ್ರೆಯವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಗ್ರಾಕೂಸ್ ಬೀದರ್‌ ಜಿಲ್ಲಾ ಸಂಚಾಲಕಿ ಸಪನಾ ದೀಪ‌ ನೇತ್ರತ್ವದಲ್ಲಿ ಸಿಎಂ ಅವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

“ಜಿಲ್ಲೆಯ 8 ತಾಲೂಕು ಈಗಾಗಲೇ ಬರಪೀಡಿತ ತಾಲೂಕು ಎಂದು ಘೋಷಣೆಯಾಗಿದೆ. ಮೊದಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡ ಕೂಲಿ ಕಾರ್ಮಿಕರು ಜಮೀನಿನಲ್ಲಿ ಯಾವುದೇ ಕೆಲಸವಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದು ನಗರಗಳಿಗೆ ಗುಳೆ ಹೋಗುವ ಯೋಚನೆಯಲ್ಲಿದ್ದಾರೆ. ಆದರೆ ಮನರೇಗಾ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು 100 ದಿನಗಳ ಕೂಲಿ ಕೆಲಸ ಪೂರ್ಣಗೊಂಡಿಲ್ಲ. ಮನರೇಗಾ ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವಿಫಲರಾಗಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಬಹುತೇಕ ತಾಲೂಕಿನಲ್ಲಿ ಬರ ಆವರಿಸಿದ ಹಿನ್ನಲೆಯಲ್ಲಿ ತಮ್ಮ ಸರ್ಕಾರ ಈಗಾಗಲೇ ಮನರೇಗಾ ಯೋಜನೆಯಡಿ 100 ರಿಂದ 150 ಮಾನವ ದಿನಗಳು ಹೆಚ್ಚುವರಿಯಾಗಿ ನೀಡಲು ನಿರ್ಧರಿಸಿದೆ. ಹೀಗಾಗಿ ಕೂಡಲೇ ಕೂಲಿಕಾರರ ಪರಿಸ್ಥಿತಿ ಮನವರಿಕೆ ಮಾಡಿಕೊಂಡು 100 ರಿಂದ 150 ಹೆಚ್ಚುವರಿ ಮಾನವ ದಿನಗಳು ಹೆಚ್ಚುವರಿಯಾಗಿ ಆದೇಶಿಸಿ ತಕ್ಷಣ ಜಾರಿಗೊಳಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ದುಡಿಯುವ ಕೈಗಳಿಗೆ ಕೆಲಸ ಕೊಡುವಂತೆ” ಸೂಚಿಸಬೇಕೆಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಬಿಜೆಪಿಗೆ ಭಾರೀ ಮುನ್ನಡೆ; ಲೋಕಸಭೆಯಲ್ಲೂ ಗೆಲ್ಲುತ್ತೇವೆ ಎನ್ನುತ್ತಿದೆ ಕೇಸರಿ ಪಡೆ

ಗ್ರಾಮೀಣ ಕೂಲಿಕಾರರ ಸಂಘದ ಜಿಲ್ಲಾ ಸಂಯೋಜಕಿ ಸಪನಾ ದೀಪ ಸೇರಿದಂತೆ ವಿವಿಧ ತಾಲೂಕಿನ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...