ಬೀದರ್‌ | ಈದಿನ ಫಲಶೃತಿ: ಶತಾಯುಷಿ ಅಜ್ಜಿ ಮನೆಗೆ ದೌಡಾಯಿಸಿದ ಅಧಿಕಾರಿಗಳ ತಂಡ; ಪಿಂಚಣಿ ಜಾರಿ ಭರವಸೆ

Date:

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಕಪಲಾಪುರ ಗ್ರಾಮದಲ್ಲಿ ಸುಮಾರು 110 ವಯಸ್ಸಿನ ಲಕ್ಷ್ಮಿಬಾಯಿ ಮಹಾಪುರೆ ಎಂಬ ಅಜ್ಜಿ ಮನೆಗೆ ಕಂದಾಯ ಇಲಾಖೆಯ ಉಪತಹಶೀಲ್ದಾರ್ ಸುನೀಲ್‌ ಸಿಂಧೆ, ಗ್ರಾಮ ಆಡಳಿತ ಅಧಿಕಾರಿ ಸೋಮಲಿಂಗ ಹಾಗೂ ಮತಗಟ್ಟೆ ಅಧಿಕಾರಿ ಶರಣಪ್ಪ ಅವರು ಭೇಟಿ ನೀಡಿ ಅಜ್ಜಿಯ ದಾಖಲೆಗಳು ಪರಿಶೀಲಿಸಿದರು.

ಈ ಕುರಿತು ʼಈದಿನ.ಕಾಮ್‌ʼ ನಲ್ಲಿ ನಿನ್ನೆ (ಜ.5) ರಂದು ʼಶತಾಯುಷಿ ಅಜ್ಜಿಗೆ ಶಾಪವಾಯ್ತು ವಯಸ್ಸು?; ವೃದ್ದಾಪ್ಯ ವೇತನಕ್ಕೆ ಅಧಿಕಾರಿಗಳ ಕತ್ತರಿʼ ಎಂಬ ಶೀರ್ಷಿಕೆಯಡಿ ವಿಸ್ತೃತ ವರದಿ ಪ್ರಕಟವಾಗಿತ್ತು. ಅಲ್ಲದೇ, ವಿಡಿಯೋ ವರದಿ ಕೂಡ ಯೂಟ್ಯೂಬ್‌ನಲ್ಲಿ ಪ್ರಕಟಿಸಿತ್ತು.

ಇದಕ್ಕೆ ಸ್ಪಂದಿಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಇಂದು ಕಪಲಾಪುರ ಗ್ರಾಮದ ಇಳಿವಯಸ್ಸಿನ ಲಕ್ಷ್ಮೀಬಾಯಿ ಅಜ್ಜಿಯ ಮನೆಗೆ ದೌಡಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಶತಾಯುಷಿ ಅಜ್ಜಿಗೆ ಶಾಪವಾಯ್ತ ವಯಸ್ಸು?; ವೃದ್ದಾಪ್ಯ ವೇತನಕ್ಕೆ ಅಧಿಕಾರಿಗಳ ಕತ್ತರಿ

“ಅಜ್ಜಿಗೆ 110 ವರ್ಷ ವಯಸ್ಸಾದರೂ ಅವರ ಹೆಸರಿಗೆ ಚುನಾವಣೆ ಮತದಾರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಬದುಕಿಗೆ ಯಾವುದೇ ದಾಖಲೆ ಇಲ್ಲ ಎಂಬುದು ಪರಿಶೀಲನೆ ಮೂಲಕ ಖಚಿತಪಡಿಸಿಕೊಂಡಿದ್ದಾರೆ. ಅಜ್ಜಿಯ ಕಿರಿಯ ಮಗ ದಶರಥ ಅವರ ಆಧಾರ್ ಕಾರ್ಡ್ ಮತ್ತು ಚುನಾವಣೆ ಚೀಟಿ ಆಧಾರದ ಮೇಲೆ ನಮೂನೆ-6ರಲ್ಲಿ ಲಕ್ಷ್ಮೀಬಾಯಿ ಅವರ ಹೆಸರು ನೋಂದಾಯಿಸಿಕೊಂಡಿದ್ದಾರೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಲಕ್ಷ್ಮೀಬಾಯಿ ಅಜ್ಜಿಯ ಚುನಾವಣೆ ಚೀಟಿ ಬಂದ ನಂತರ ಅವರಿಗೆ ಸಂಧ್ಯಾ ಸುರಕ್ಷಾ ಯೋಜನೆಯ ಪಿಂಚಣಿ ಜಾರಿ ಮಾಡಿ ಕೊಡುತ್ತೇವೆ” ಎಂದು ಅಧಿಕಾರಿಗಳು ಕುಟುಂಬಸ್ಥರಿಗೆ ಭರವಸೆ ನೀಡಿದ್ದಾರೆ.

ಲಕ್ಷ್ಮೀಬಾಯಿ ಅಜ್ಜಿಯ ಮೊಮ್ಮಗ ಅಂಬಾದಾಸ ಈದಿನ.ಕಾಮ್‌ ಜೊತೆಗೆ ಮಾತನಾಡಿ, “ಬದುಕಿಗೆ ಆಧಾರವಾಗಿ ಯಾವುದೇ ದಾಖಲೆ ಇಲ್ಲದೆ ದಿನಗಳು ದೂಡುತ್ತಿದ್ದ ಅಜ್ಜಿಯ ಬಗ್ಗೆ ʼಈದಿನ.ಕಾಮ್‌ʼ ವಿಶೇಷ ಕಾಳಜಿವಹಿಸಿ ವರದಿ ಪ್ರಕಟಿಸಿತು. ಅದರ ಫಲವಾಗಿ ಇಂದು ಅಧಿಕಾರಿಗಳು ನಮ್ಮ ಮನೆಗೆ ಭೇಟಿ ನೀಡಿ ಅಜ್ಜಿಯ ದಾಖಲೆ ನೋಂದಣಿ ಮಾಡಿಸಿ, ಶೀಘ್ರದಲ್ಲೇ ಪಿಂಚಣಿ ಜಾರಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ವರದಿ ಪ್ರಕಟಿಸಿದ ಈ ದಿನ.ಕಾಮ್‌ ಹಾಗೂ ಸ್ಪಂದಿಸಿದ ಕಂದಾಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುವೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...