ಬೀದರ್‌ | ಈದಿನ ಫಲಶೃತಿ: ಭರದಿಂದ ಸಾಗಿದ ಕಮಲನಗರ ಬಸ್‌ ನಿಲ್ದಾಣ ದುರಸ್ತಿ ಕಾರ್ಯ

Date:

ಬೀದರ್‌ ಜಿಲ್ಲೆಯ ಕಮಲನಗರ ಪಟ್ಟಣದ ಮದನೂರ ರಸ್ತೆಯಲ್ಲಿರುವ ಬಸ್‌ ನಿಲ್ದಾಣದ ದುರಸ್ತಿ ಕಾರ್ಯ ಭರದಿಂದ ಸಾಗಿದೆ.

ಈ ಬಗ್ಗೆ ಈದಿನ.ಕಾಮ್‌ ನಲ್ಲಿ ಕಳೆದ ಅಕ್ಟೋಬರ್‌ 5ರಂದು ʼಬಳಕೆಯಾಗದೇ ಪಾಳುಬಿದ್ದಿದೆ ಕಮಲನಗರ ಬಸ್ ನಿಲ್ದಾಣʼ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿತ್ತು. ವರದಿಗೆ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ಅಧಿಕಾರಿಗಳು ಪಾಳು ಬಿದ್ದ ಬಸ್‌ ನಿಲ್ದಾಣ ಕಟ್ಟಡದ ರಿಪೇರಿ ಕಾರ್ಯ ಕೈಗೆತ್ತಿಕೊಂಡಿದ್ದಾರೆ.

ಸುಮಾರು 15 ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಬಸ್‌ ನಿಲ್ದಾಣ ಬಳಕೆಯಾಗದೇ ಹಾಳು ಕೊಂಪೆಯಾಗಿತ್ತು. ತಾಲ್ಲೂಕು ಕೇಂದ್ರ ಘೋಷಣೆಯಾಗಿ ಐದು ವರ್ಷಗಳೇ ಕಳೆದಿವೆ, ಆದರೂ ಸಾರ್ವಜನಿಕರಿಗೆ ಸುಸಜ್ಜಿತ ಬಸ್‌ ನಿಲ್ದಾಣವಿಲ್ಲ. ಇದ್ದ ಬಸ್‌ ನಿಲ್ದಾಣ ಆವರಣದಲ್ಲಿ ಗಿಡ-ಗಂಟಿಗಳು ಬೆಳೆದಿವೆ, ಕಟ್ಟಡದ ಕಿಡಿಕಿ, ಬಾಗಿಲು ಪುಡಿಯಾಗಿ ಇದ್ದೂ ಇಲ್ಲದಂತಾಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
KAMALANAGAR BUS STAND 21 1
ಅ.5 ರಂದು ʼಈದಿನ.ಕಾಮ್‌ʼ ನಲ್ಲಿ ಪ್ರಕಟಿತ ವರದಿ

“ಬಸ್‌ ನಿಲ್ದಾಣ ಆವರಣದಲ್ಲಿ ಬೆಳೆದಿದ್ದ ಗಿಡ-ಗಂಟಿಗಳು ತೆಗೆದು ಸ್ವಚ್ಛಗೊಳಿಸಲಾಗಿದೆ. ಕಾಂಪೌಂಡ್‌ ಸೇರಿದಂತೆ ನಿಲ್ದಾಣದಲ್ಲಿನ ಕೋಣೆಗಳಿಗೆ ಬಣ್ಣ ಬಳಿಯುವ ಕಾರ್ಯ ಮುಗಿದಿದ್ದು. ಓರ್ವ ಕಂಟ್ರೊಲರಿಗೆ ನೇಮಕ ಮಾಡಲಾಗಿದೆ. ಕಿಟಿಕಿಗಳಿಗೆ ಹೊಸ ಗ್ಲಾಸ್‌ ಅಳವಡಿಕೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರ ಕೆಲಸಗಳು ಬಾಕಿ ಉಳಿದಿವೆ, ಇನ್ನೊಂದು ವಾರದಲ್ಲಿ ದುರಸ್ತಿ ಕಾರ್ಯ ಸಂಪೂರ್ಣ ಮುಗಿಯುತ್ತದೆ. ಕಳೆದ ಎರಡು ವಾರದಿಂದ ಔರಾದ ಬಸ್‌ ಘಟಕದ ಎಲ್ಲಾ ಬಸ್‌ ಕಮಲನಗರ ಬಸ್ ನಿಲ್ದಾಣಕ್ಕೆ ತೆರಳುತ್ತಿವೆ. ಮುಂದಿನ ದಿನಗಳಲ್ಲಿ ಸಾರಿಗೆ ಇಲಾಖೆಯ ಎಲ್ಲಾ ಬಸ್‌ ಕಮಲನಗರ ನಿಲ್ದಾಣಕ್ಕೆ ಬರುವಂತೆ ಸೂಚಿಸಲಾಗುವುದು ಎಂದು ಔರಾದ ತಾಲೂಕು ಘಟಕ ವ್ಯವಸ್ಥಾಪಕ ಎಸ್. ಟಿ.ರಾಠೋಡ್, ಈದಿನ.ಕಾಮ್ ದೊಂದಿಗೆ ಮಾತನಾಡಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಗವಿಕಲರ ನಿಧಿ ಸಮಪರ್ಕವಾಗಿ ಬಳಕೆಗೆ ಆಗ್ರಹ

ಸುಮಾರು ವರ್ಷಗಳಿಂದ ಪಾಳು ಬಿದ್ದಿದ್ದ ಕಮಲನಗರ ಬಸ್‌ ನಿಲ್ದಾಣ ಕುರಿತು ಈದಿನ.ಕಾಮ್‌ ಪ್ರಕಟಿಸಿದ ವಿಶೇಷ ವರದಿಗೆ ಸಾರಿಗೆ ಇಲಾಖೆ ಅಧಿಕಾರಿಗಳು ದುರಸ್ತಿ ಕಾರ್ಯ ಮಾಡುವ ಮೂಲಕ ಬಸ್‌ ನಿಲ್ದಾಣಕ್ಕೆ ಕಳೆ ತಂದಂತಾಗಿದೆ. ಜನಸಂಖ್ಯೆ ಹೆಚ್ಚಾದ ಪರಿಣಾಮ ವಾಹನ ಸಂಚಾರವೂ ದಟ್ಟಣೆಯಾಗಿದೆ. ಎಲ್ಲಾ ಮಾರ್ಗದ ಬಸ್‌ ಗಳು ಬಸ್‌ ನಿಲ್ದಾಣಕ್ಕೆ ಬರುವಂತಾದರೆ ಸಾರ್ವಜನಿಕರಿಗೆ ಅನುಕೂಲ ಆಗುತ್ತದೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...