ಬೀದರ್‌ | ಓಟಿಗಾಗಿ ಗ್ಯಾರಂಟಿ, ಜನಸಾಮಾನ್ಯರ ಕಲ್ಯಾಣಕ್ಕಾಗಿ ಅಲ್ಲ: ಕೋಡಿಹಳ್ಳಿ ಚಂದ್ರಶೇಖರ

Date:

ದೇಶದ ರೈತರಿಗೆ ಮಾರಕವಾದ ಕಾನೂನು ರದ್ದು ಮಾಡಲು ಈ ಹಿಂದೆ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯನವರು ನಮ್ಮ ಹೋರಾಟಕ್ಕೆ ಬೆಂಬಲಿಸಿ ಭಾಗವಹಿಸಿದ್ದರು. ಆದರೆ, ಪ್ರಸ್ತುತ ಸಿದ್ದರಾಮಯ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆಕ್ರೋಶ ವ್ಯಕ್ತಪಡಿಸಿದರು

ಈ ಕುರಿತು ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, “ರೈತರ ಭೂಮಿಯನ್ನು ವ್ಯಾಪಾರೀಕರಣ ಮಾಡುವ ಉದ್ದೇಶಕ್ಕಾಗಿ ರಾಜ್ಯದಲ್ಲಿರುವ ವಿಷಕಾರಿ ಕೃಷಿ ಕಾನೂನು ರದ್ದು ಮಾಡಬೇಕು. ಭೂಸುಧಾರಣಾ 1961ರ ಕಾಯ್ದೆ ರದ್ದುಪಡಿಸಿ 2020ರ ಕಾಯ್ದೆ ಜಾರಿಗೆ ಬಂದ ಮೇಲೆ ರೈತರಿಗೆ ಕೃಷಿ ಭೂಮಿ ಕೈತಪ್ಪಿ ಹೋಗುತ್ತಿದೆ. ಇದರಿಂದ ರಾಜ್ಯ ಸರ್ಕಾರ ಖಜಾನೆಗೆ ನೋಂದಣಿ ಶುಲ್ಕ 25 ಸಾವಿರದಿಂದ 30 ಸಾವಿರ ಕೋಟಿಗೆ ತಲುಪುತ್ತಿದೆ. ಅದ್ದರಿಂದ ರಾಜ್ಯ ಸರ್ಕಾರ ಹಣಕ್ಕೆ ಜೋತು ಬಿದ್ದಿದೆ” ಎಂದು ಕಿಡಿಕಾರಿದರು.

“2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಜಾರಿಗೆ ತಂದಾಗ ರೈತರೊಂದಿಗೆ ಧರಣಿ ನಡೆಸಿದ ಕಾಂಗ್ರೇಸ್‌ ನಾಯಕ ರಾಹುಲ್ ಗಾಂಧಿ ಈ ಕಾಯ್ದೆ ವಿರೋಧಿಸಿದರು. ಇಡೀ ದೇಶದಲ್ಲಿ ಬಿಜೆಪಿ ತಂದಿರುವ ಕೃಷಿ ಕಾಯ್ದೆ ವಾಪಸ್ ಪಡೆಯಲಾಗಿದೆ. ಆದರೆ ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ ಕೃಷಿ ಕಾಯ್ದೆ ಜಾರಿಗೆ ತಂದಿದೆ. ಆಗ ರಾಜ್ಯದಲ್ಲಿ ಕೃಷಿ ಕಾಯ್ದೆ ರದ್ದಾಗಲೆಂದು ನಡೆದ ರೈತರ ಚಳವಳಿಗಳಿಗೆ ಕಾಂಗ್ರೆಸ್‌ ಬೆಂಬಲಿಸಿತು. ಅಧಿಕಾರಕ್ಕೆ ಬರುವ ಮುನ್ನ ಈ ಕಾಯ್ದೆ ರದ್ದುಪಡಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಅದನ್ನು ರದ್ದುಗೊಳಿಸದೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಓಟಿಗಾಗಿ ಗ್ಯಾರಂಟಿ:

“ರಾಜ್ಯ ಕಾಂಗ್ರೆಸ್ ಕಳೆದ ಚುನಾವಣೆಯಲ್ಲಿ ಕೇವಲ ಓಟಿಗಾಗಿ ಗ್ಯಾರಂಟಿ ಜಾರಿಗೆ ತಂದಿದೆ. ಇವರಿಗೆ ರೈತರ ಅಭಿವೃದ್ಧಿ ಬಗ್ಗೆ, ಸಾಮಾನ್ಯ ಜನರ ಉದ್ಧಾರ ಬೇಕಾಗಿಲ್ಲ.ರಾಜ್ಯ ಸರ್ಕಾರ ರೈತರ ಬಾಯಿಗೆ ವಿಷ ಹಾಕುವ ಕೆಲಸ ಮಾಡುತ್ತಿದ್ದಾರೆ” ಎಂದು ಕೋಡಿಹಳ್ಳಿ ಆಕ್ಷೇಪಿಸಿದರು.

ನ.22ರಂದು ಹೈದರಾಬಾದ್‌ನಲ್ಲಿ ಧರಣಿ:

“ರಾಜ್ಯದಲ್ಲಿರುವ ರೈತ ವಿರೋಧಿ ಕಾನೂನು ಬಗ್ಗೆ ಬೇರೆ ರಾಜ್ಯದ ರೈತರಿಗೆ ತಿಳಿಸಿ ಅರಿವು ಮೂಡಿಸಲು ಪಕ್ಕದ ತೆಲಂಗಾಣ ರಾಜ್ಯದ ಹೈದ್ರಾಬಾದ್‌ನ ಇಂದಿರಾ ಪಾರ್ಕ್‌ನಲ್ಲಿ ನ.22ರಂದು ಪ್ರತಿಭಟನೆ ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಬರುವ ಬೆಳಗಾವಿ ಅಧಿವೇಶನದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ

ಪತ್ರಿಕಾ ಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ದಯಾನಂದ ಸ್ವಾಮಿ ಸಿರ್ಸಿ ಹಾಗೂ ಮಲ್ಲಿಕಾರ್ಜುನ ಚಕ್ಕಿ, ಶ್ರೀಮಂತ ಮಹಾದೇವ ನಾಗುರೆ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...