ಹುಲಸೂರ | ಸೌಹಾರ್ದತೆ, ಸಹಿಷ್ಣುತೆ ಲೋಕದ ಚಾಲಕ ಶಕ್ತಿಗಳು : ತಹಸೀಲ್ದಾರ್ ಶಿವಾನಂದ ಮೇತ್ರೆ

Date:

ಬಹುತ್ವ ಹಾಗೂ ಬಹುಸಂಸ್ಕೃತಿಯ ನಮ್ಮ ದೇಶದ ನಾಡಿಮಿಡಿತಗಳು. ಸಾಮಾಜಿಕ ಸೌಹಾರ್ದತೆ ಹಾಗೂ ಧಾರ್ಮಿಕ ಸಹಿಷ್ಣುತೆ ಇಡೀ ಲೋಕದ ಚಾಲಕ ಶಕ್ತಿಗಳಾವೆ ಎಂದು ಹುಲಸೂರ ತಹಸೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು.

‌ಹುಲಸೂರ ತಾಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಧೂಳಪ್ಪ ಭರಮಶೆಟ್ಟೆ ಅವರ ತೋಟದಲ್ಲಿ ಎಳ್ಳ ಅಮಾವಾಸ್ಯೆ ಪ್ರಯುಕ್ತ ಬಸವಕಲ್ಯಾಣದ ಡಾ.ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದಿಂದ ಶುಕ್ರವಾರ ಹಮ್ಮಿಕೊಂಡಿದ್ದ ‘ರಂಗಭೂಮಿ, ಸಮಾಜ ಮತ್ತು ರಾಜಕಾರಣ’ ಕುರಿತ ಪ್ರತಿಷ್ಠಾನದ 95ನೇ ಉಪನ್ಯಾಸ ಸಮಾರಂಭವನ್ನು ಸಾಹಿತ್ಯ ಕೃತಿಗಳು ಓದುಗರಿಗೆ ನೀಡಿ, ಸಮಾರಂಭ ಉದ್ಘಾಟಿಸಿ ಮಾತನಾಡಿ, ʼಮಾನವೀಯತೆ ಎಲ್ಲವನ್ನೂ ಮೀರಿದ ತತ್ವವಾಗಿದೆ ಮತ್ತು ಸತ್ವವೂ ಆಗಿದೆʼ ಎಂದರು.

ಪತ್ರಕರ್ತ ಮಾಣಿಕ ಭುರೆ ಮಾತನಾಡಿ, ಪ್ರತಿಯೊಂದು ಪ್ರಭುತ್ವಗಳು ಸೈದ್ಧಾಂತಿಕ ವಿಚಾರಗಳಿಗೆ ಬದ್ಧವಾಗಿರುತ್ತವೆ. ಜನಪರ ಚಿಂತನೆ ಮತ್ತು ಪ್ರಗತಿಪರತೆಯ ವಿವೇಚನೆಗಳು ಮನುಷ್ಯ ಲೋಕವನ್ನು ಹೆಚ್ಚು ಎಚ್ಚರದಿಂದ ಇಟ್ಟಿವೆ. ಭಾವನಾತ್ಮಕ ಸಂಗತಿಗಳಿಗಿಂತ ಬೌದ್ಧಿಕ ಮತ್ತು ಭೌತಿಕ ಬೆಳವಣಿಗೆಗೆ ಅಧಿಕಾರ ಕೇಂದ್ರಗಳು ಆದ್ಯತೆ ಕೊಡಬೇಕು. ಆ ಮುಖಾಂತರ ಸಾಮಾಜಿಕ ಏಳಿಗೆ ಸಾಧ್ಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿಯ ರಂಗಕರ್ಮಿ ಉಮೇಶ ಪಾಟೀಲ ಮಾತನಾಡಿ, ʼಸಮಾಜದ ಸಂಕೀರ್ಣತೆಗಳು, ಸಮಕಾಲೀನ ಸಂದಿಗ್ಧತೆಗಳು, ಮನುಷ್ಯನ ಆತಂಕಗಳು ರಂಗಭೂಮಿ ತನ್ನ ಪ್ರದರ್ಶನದ ಸ್ವರೂಪದಲ್ಲಿ ಅನಾವರಣ ಮಾಡುತ್ತ ಬಂದಿದೆ. ಎಲ್ಲ ಕಾಲಕ್ಕೂ ಕಾಡಿದ ಕಾಮ, ಸಂಪತ್ತು ಮತ್ತು ಅಧಿಕಾರದ ದಾಹ, ಅಧಿಕಾರದ ಬೆನ್ನಟ್ಟಿ ನಡೆಸಿದ ಹಿಂಸೆ, ಕ್ರೌರ್ಯ, ಮಹಿಳೆಯರ ಮತ್ತು ದುರ್ಬಲರ ಅಸಹಾಯಕತೆ ಇಂಥ ಹಲವು ಸಂಗತಿಗಳ ಬಗೆಗೆ ರಂಗಭೂಮಿ ನಿರಂತರ ಮಾತನಾಡುತ್ತ ಬಂದಿದೆʼ ಎಂದರು.

ಬಸವಕಲ್ಯಾಣದ ಐಡಿಯಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮುಜಾಹಿದ್ ಪಾಶಾ ಖುರೇಷಿ ಮಾತನಾಡಿ, ʼನಾಟಕ ಮತ್ತು ರಂಗಭೂಮಿ ಸಮಾಜವನ್ನು ಜಾಗ್ರತವಾಗಿಡುವ ಕಲಾ ಮಾಧ್ಯಮವಾಗಿವೆ. ಎದೆಯಿಂದ ಎದೆಗೆ ಮಾನವೀಯತೆಯ ಸೇತುವೆ ಕಟ್ಟುವ ಕಲೆ ಎಲ್ಲಾ ಕಾಲಕ್ಕೂ ಜೀವಂತವಾಗಿರುತ್ತದೆʼ ಎಂದರು.

WhatsApp Image 2025 12 19 at 10.21.02 PM
ಎಳ್ಳ ಅಮವಾಸ್ಯೆ ಅಂಗವಾಗಿ ಹೊಲದಲ್ಲಿ ಭಜ್ಜಿ, ರೊಟ್ಟಿ ಸವಿದರು.

ಅಧ್ಯಕ್ಷತೆ ವಹಿಸಿದ್ದ ಜಿಪಂ ಮಾಜಿ ಸದಸ್ಯ ಮಲ್ಲಪ್ಪ ಧಬಾಲೆ ಮಾತನಾಡಿ, ʼಈ ಕಾಲಕ್ಕೆ ರಾಜಕಾರಣದ ಪರಿಭಾಷೆ ಬದಲಾಗಿದೆ. ತತ್ವ ಸಿದ್ಧಾಂತಗಳ ಬದ್ಧತೆಗಿಂತ ಅಧಿಕಾರದ ಆಮಿಷ ಹೆಚ್ಚಾಗಿದೆ. ಭಾವನಾತ್ಮಕ ಸಂಗತಿಗಳೇ ಆಗಲಿ, ಸಂವೇದನೆ ರಹಿತ ಸಂಗತಿಗಳೇ, ಜಾತಿ, ಧರ್ಮದಂಥ ಸಂಗತಿಗಳೇ ಆಗಲಿ ರಾಜಕೀಯ ಅಧಿಕಾರದ ಪರಿಕರಗಳಾಗಿ ಬಳಕೆಯಾಗುತ್ತಿವೆʼ ಎಂದರು.

ಬಸವಕಲ್ಯಾಣ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಮಾತನಾಡಿ, ʼಮನುಷ್ಯನ ಬಿಕ್ಕಟ್ಟಿನ ಸಂದರ್ಭದಲ್ಲಿ ಸೃಜನಶೀಲತೆ ಸದಾ ಹೊಸ ದಾರಿ ತೋರುತ್ತ ಬಂದಿದೆ. ಸಾಹಿತ್ಯ, ನಾಟಕ, ರಂಗಭೂಮಿ , ಸಿನಿಮಾಗಳು ಪ್ರಭುತ್ವ, ಲೋಕವನ್ನು ನಿರಂತರ ವಿಮರ್ಶಿಸುತ್ತ ಬಂದಿವೆ. ಗ್ರೀಕ್ ನಾಟಕಗಳಿಂದ ಕನ್ನಡದ ರಂಗಭೂಮಿಯವರೆಗೆ ಎಲ್ಲಾ ಕಾಲದಲ್ಲಿಯೂ ನಾಟಕ ಮತ್ತು ರಂಗಭೂಮಿ ಪ್ರಜ್ಞೆಯಾಗಿ ಮನುಷ್ಯನೊಟ್ಟಿಗೆ ಇದೆʼ ಎಂದರು.

ಮುಖಂಡ ವಿಜಯಕುಮಾರ ಪಾಟೀಲ ಶಿವಪುರ, ಪತ್ರಕರ್ತ ಬಸವಕುಮಾರ ಕವಟೆ ಮಾತನಾಡಿದರು. ರಂಗಕರ್ಮಿ ಉಮೇಶ ಪಾಟೀಲ ಅವರು ತಾವು ಬರೆದ ‘ಟ್ಯಾಬ್ಲೆಟ್’ ನಾಟಕದ ವಾಚಸಿ, ಏಕಪಾತ್ರಾಭಿನಯಲ್ಲಿ ಅಭಿನಯಿಸಿದ್ದು ಗಮನ ಸೆಳೆಯಿತು.

ಇದನ್ನೂ ಓದಿ : ಬೀದರ್‌ | ದ್ವಿಚಕ್ರ ವಾಹನಕ್ಕೆ ಕೆಕೆಆರ್‌ಟಿಸಿ ಬಸ್‌ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಪತ್ರಕರ್ತ ನಾಗಪ್ಪ ನಿಣ್ಣೆ, ಶಿಕ್ಷಕ ಎಂಡಿ. ಅಲ್ತಾಫ್, ಧೂಳಪ್ಪ ಭರಮಶೆಟ್ಟೆ, ದತ್ತಾತ್ರಿ ರಾಘೋ, ಕಂಟೆಪ್ಪ ಮೇತ್ರೆ, ಸತೀಶ್ ಹಿರೇಮಠ, ಬಸವರಾಜ ಬಿರಾದಾರ ಖಂಡಾಳ, ಪ್ರಭಾಕರ ನೌಗಿರೆ, ಡಾ. ಪ್ರವೀಣ ದಸ್ತಾಪುರೆ, ಅಂಬರೀಶ್ ಮಹಾಲಿಂಗ, ಕಾಶಿನಾಥ ಬಿರಾದಾರ, ಜಗನ್ನಾಥ ಭೋಪಳೆ, ಸಿದ್ರಾಮ ಕಾವಳೆ, ನಾಗಪ್ಪ ನಿಣ್ಣೆ, ದಯಾನಂದ ಭರಮಶೆಟ್ಟೆ, ಸಿದ್ದರಾಮ ಖ್ಯಾಡೆ ಮೊದಲಾದವರಿದ್ದರು. ಪ್ರತಿಷ್ಠಾನದ ನಿರ್ದೇಶಕ ಡಾ.ಶಿವಾಜಿ ಮೇತ್ರೆ ಸ್ವಾಗತಿಸಿದರು. ಗಂಗಾಧರ ಸಾಲಿಮಠ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...