ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದಲ್ಲಿರುವ ಹುಮನಾಬಾದ್ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕ ಕೂಡಲೇ ಸ್ಥಳಾಂತರಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಸಂಬಂಧ ಗ್ರಾಮದ ಮುಖಂಡರು ಸೋಮವಾರ ಹುಮನಾಬಾದ್ ಪುರಸಭೆಯ ಮುಖ್ಯಾಧಿಕಾರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಕಚೇರಿ ಅಧಿಕಾರಿ ಸುಭಾಷ್ ಶಿವಪೂಜೆ ಅವರಿಗೆ ಸಲ್ಲಿಸಿದರು.
ʼಸಿಂಧನಕೇರಾ ಗ್ರಾಮದ ಕೂಗಳತೆ ದೂರದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕ ಯಾವುದೇ ವೈಜ್ಞಾನಿಕ ಮಾನದಂಡಗಳನ್ನು ಅನುಸರಿಸುತ್ತಿಲ್ಲ. ಇದರಿಂದ ಗ್ರಾಮದ ಸುತ್ತಮುತ್ತಲಿನ ಪ್ರದೇಶ ಮಾಲಿನ್ಯ ಹರಡುತ್ತಿದೆ ಎಂದು ದೂರಿದ್ದಾರೆ.
‘ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಘಟಕದಿಂದ ಗ್ರಾಮಸ್ಥರಿಗೆ ಡೆಂಗ್ಯೂ, ಚರ್ಮರೋಗ, ಆನೆಕಾಲು , ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ರೋಗಿಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಹಲವು ಇಲಾಖೆ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ’ ಎಂದು ಮುಖಂಡರು ಹಾಗೂ ಆಕ್ರೋಶ ಹೊರಹಾಕಿದರು.
ಸಾರ್ವಜನಿಕರ ಆರೋಗ್ಯ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿರುವ ತ್ಯಾಜ್ಯ ವಿಲೇವಾರಿ ಘಟಕ ಕೂಡಲೇ ಸ್ಥಳಾಂತರ ಮಾಡಬೇಕು. ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವುದು ಅಥವಾ ಪುರಸಭೆ ಅಧಿಕಾರಿಗಳ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ : ಬೀದರ್ | ಬಹುತ್ವ, ಸೌಹಾರ್ದತೆ ಭಾರತದ ನಾಡಿಮಿಡಿತ : ಭೀಮಾಶಂಕರ ಬಿರಾದರ್
ಈ ಸಂದರ್ಭದಲ್ಲಿ ಪ್ರಮುಖರಾದ ಭೀಮರೆಡ್ಡಿ, ಅರವಿಂದ್ ಜೋಗಿರೆ, ಫೀರ್ದೋಸ್, ಶಿವಕುಮಾರ್ ಮೇತ್ರೆ, ಅಮನ್ ಸುಲ್ತಾನಿ, ರಾಕೇಶ್ ಕೇಳ್ಕೆರಾ, ಯುವರಾಜ್ ಐಹೊಳ್ಳಿ ಇದ್ದರು.




