ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ನಾನು ಒಮ್ಮೆಯೂ ನೋಡಿಲ್ಲ : ಸಾಗರ್‌ ಖಂಡ್ರೆ

Date:

ಭಗವಂತ ಖುಬಾ ಅವರು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ನಾನು ಕ್ಷೇತ್ರದ ಅನೇಕ ಗ್ರಾಮ ಪಂಚಾಯತ್‌ಗಳಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ ವೇಳೆ ಖುಬಾ ಅವರನ್ನು ಖುದ್ದಾಗಿ ಎಷ್ಟು ಸಲ ನೋಡಿದ್ದೀರಾ ಎಂದು ಪ್ರಶ್ನಿಸಿದಾಗ, ಅವರು ನಮ್ಮೂರಿಗೆ ಬಂದಿಲ್ಲ, ಅವರನ್ನು ನೋಡಿಲ್ಲ ಎಂದು ಹೇಳಿದ್ದಾರೆ. ನಿಜವಾಗಿಯೂ ನಾನು ಯಾವತ್ತೂ ಖೂಬಾ ಅವರನ್ನು ಖುದ್ದಾಗಿ ನೋಡಿಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಹೇಳಿದರು.

ಬೀದರ್‌ನಲ್ಲಿ ಬುಧವಾರ ಬೃಹತ್‌ ರೋಡ್‌ ಶೋ ಮೂಲಕ ನಾಮಪತ್ರ ಸಲ್ಲಿಸಿದ ಬಳಿಕ ನಗರದ ಗಣೇಶ ಮೈದಾನದಲ್ಲಿ ನಡೆಸ ಬೃಹತ್‌ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿ, “ಎರಡು ಸಲ ಬೇರೆಯವರ ಹೆಸರಿನಲ್ಲಿ ಗೆದ್ದು ಬಂದಿದ್ದೇನೆ. ಈ ಬಾರಿಯೂ ಅದೇ ನಾಮಬಲದಿಂದ ಗೆದ್ದು ಬರುವೆ, ಜನರಿಗೆ ಭೇಟಿಯಾಗುವ ಅವಶ್ಯಕತೆಯಿಲ್ಲ. ಕೆಲಸ ಮಾಡುವ ಅವಶ್ಯಕತೆಯಿಲ್ಲ ಎಂದು ಖೂಬಾ ಭಾವಿಸಿದ್ದಾರೆ” ಎಂದರು.

“ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಯಡಿ ಜಿಲ್ಲೆಯ ರೈತರು 15 ಕೋಟಿ ರೂ. ಪ್ರೀಮಿಯಂ ಹಣ ಕಟ್ಟಿದ್ದಾರೆ. ಆದರೆ ಬೆಳೆ ಹಾನಿಯಾದ ರೈತರಿಗೆ 80 ಲಕ್ಷ ಹಣ ಮಾತ್ರ ಬಂದಿದೆ. ಇನ್ನುಳಿದ ಹಣ ಎಲ್ಲಿ ಹೋಗಿದೆ? ನನ್ನ ಪ್ರಶ್ನೆಗೆ ಕೇಂದ್ರ ಸಚಿವ ಭಗವಂತ ಖೂಬಾ ಅವರು ಉತ್ತರಿಸಲಿ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 04 17 at 20.40.36
ಬಹಿರಂಗ ಪ್ರಚಾರ ಸಭೆಯಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.

“ಜಿಲ್ಲೆಯ ಯುವಕರಿಗೆ ಉದ್ಯೋಗವಿಲ್ಲ. ಈ ಬಾರಿ ನನ್ನನ್ನು ಸಂಸದನ್ನಾಗಿ ಆಯ್ಕೆ ಮಾಡಿದರೆ ಜಿಲ್ಲೆಗೆ ಐಟಿ ಕಂಪನಿ, ಕಾರ್ಖಾನೆ ಸ್ಥಾಪಿಸಿ ನಿರುದ್ಯೋಗ ಯುವಕರಿಗೆ ಕೆಲಸ ಕೊಡಿಸುವೆ. ರೈತರ ಅನುಕೂಲಕ್ಕಾಗಿ ನಿರಂತರ ವಿದ್ಯುತ್‌ ಪೂರೈಕೆ ಸೋಲಾರ್‌ ಪಾರ್ಕ್‌ ನಿರ್ಮಿಸುವೆ. ದಿನದ 24 ಗಂಟೆಯೂ ಜನರ ಸೇವೆಗಾಗಿ ಸಿದ್ಧನಿದ್ದೇನೆ. ಬಹುಶಃ ನಾನು ಗೆದ್ದರೆ ದೇಶದ ಅತ್ಯಂತ ಕಿರಿಯ ಸಂಸದ ಎಂಬ ಖ್ಯಾತಿ ಪಾತ್ರನಾಗುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂ. ವೇತನ!

“ನನಗೆ ಚಿಕ್ಕ ವಯಸ್ಸು, ಅನುಭವ ಕಡಿಮೆ ಇದೆ ಎಂದು ವಿರೋಧಿಗಳು ಹೇಳುತಿದ್ದಾರೆ. ಆದರೆ ಜನ ಸೇವೆಗೆ ಅನುಭವಕ್ಕಿಂತ ಇಚ್ಚಾಶಕ್ತಿ ಮುಖ್ಯ ಎಂಬುದು ನನ್ನ ಅಭಿಪ್ರಾಯ, ಅನುಭವ ಎಷ್ಟೇ ಇದ್ದರೂ ಇಚ್ಚಾಶಕ್ತಿ ಇಲ್ಲದಿದ್ದರೆ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಖೂಬಾ ಅವರನ್ನು ಚರ್ಚೆಗೆ ಆಹ್ವಾನಿಸಿದ್ದೆ, ಅವರು ನನ್ನ ಚಾಲೆಂಜ್‌ ಸ್ವೀಕರಿಸಲಿಲ್ಲ. ಚುನಾವಣೆ ಮುಗಿಯುವವರೆಗೆ ಖೂಬಾ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳುವೆ, ಅವುಗಳಿಗೆ ಉತ್ತರಿಸಬೇಕು” ಎಂದು ಸವಾಲು ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...