ಬೀದರ್‌ | ಜಾಗತೀಕರಣದ ಪ್ರಭಾವ ಕನ್ನಡ ಭಾಷೆಗೆ ಕಂಟಕ: ಸುರೇಶ ಚನ್ನಶೆಟ್ಟಿ

Date:

ಕನ್ನಡ ಭಾಷೆ ತನ್ನದೇ ಆದ ಐಹಿಹಾಸಿಕ ಪರಂಪರೆ ಹೊಂದಿದೆ. ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಕನ್ನಡ ನೆಲಕ್ಕಿದೆ. ಆದರೆ, ಇಂದಿನ ಜಾಗತೀಕರಣದ ಕರಿನೆರಳಿನಲ್ಲಿ ಕನ್ನಡ ಭಾಷೆ ಅಳಿವಿನ ಅಂಚಿಗೆ ಬಂದಿರುವುದು ಆತಂಕ ತರಿಸಿದೆ ಎಂದು ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಕಳವಳ ವ್ಯಕ್ತಪಡಿಸಿದರು.

ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು 294ನೇ ಶರಣ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಕನ್ನಡ ಉಳಿದರೇ ನಮ್ಮ ಸಂಸ್ಕೃತಿ ಉಳಿಯುತ್ತದೆ. ಹಾಗಾಗಿ ನಮ್ಮ ಮನೆಯಿಂದಲೇ ಕನ್ನಡ ಭಾಷೆ ಬೆಳೆಸಿ ಉಳಿಸುವ ಕೆಲಸ ಆಗಬೇಕು. ಮಕ್ಕಳಿಗೆ ಕಡ್ಡಾಯವಾಗಿ ಕನ್ನಡ ಕಲಿಸಿದರೇ ನಮ್ಮತನ ಉಳಿಯಲು ಸಾಧ್ಯ. ನಿಜಾಂನ ಆಡಳಿತದಲ್ಲಿ ಕನ್ನಡ ಮಾತನಾಡಿದರೆ ಅಪರಾಧ ಎಂಬ ಸಂದಿಗ್ಥ ಸ್ಥಿತಿಯಲ್ಲಿ ಚನ್ನಬಸವ ಪಟ್ಟದ್ದೇವರು ಹೊರಗಡೆ ಉರ್ದು ನಾಮಫಲಕ ಹಾಕಿ ಒಳಗಡೆ ಕನ್ನಡ ಕಲಿಸಿರುವುದು ನಮ್ಮೆಲ್ಲರಿಗೆ ಆದರ್ಶವಾಗಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಿರಿಯ ಸಾಹಿತಿ ಡಾ.ಸೋಮನಾಥ ನುಚ್ಚಾ ಮಾತನಾಡಿ, “ಗಡಿಯಲ್ಲಿ ಡಾ.ಚನ್ನಬಸವ ಪಟ್ಟದ್ದೇವರ ನೇತೃತ್ವದಲ್ಲಿ ನಡೆದ ಚಳವಳಿ, ಹೋರಾಟದ ಪರಿಣಾಮ ಈ ನೆಲ ಅಖಂಡ ಕರ್ನಾಟಕದಲ್ಲಿ ಉಳಿದಿದೆ. ಕನ್ನಡ ಭಾಷೆಗೆ ಐತಿಹಾಸಿಕ ಹಿನ್ನೆಲೆ ಇದೆ. ಎಲ್ಲರೂ ಹೆಚ್ಚಾಗಿ ಕನ್ನಡ ಬಳಸುವ ಮೂಲಕ ಭಾಷೆ ಬೆಳವಣಿಗೆಗೆ ಮುಂದಾಗಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾನ್ನಿಧ್ಯ ವಹಿಸಿದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, “ಡಾ.ಚನ್ನಬಸವ ಪಟ್ಟದ್ದೇವರು ಬಸವತತ್ವ-ಕನ್ನಡವನ್ನು ಎರಡು ಕಣ್ಣುಗಳಂತೆ ಕಂಡಿದ್ದರು. ಈ ಭಾಗದಲ್ಲಿ ಬಸವತತ್ವ ಪ್ರಚಾರ, ಪ್ರಸಾರದ
ಜತೆಗೆ ಕನ್ನಡ ಭಾಷೆ ರಕ್ಷಣೆಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಪೂಜ್ಯರ ಚಿಂತನೆ, ಆದರ್ಶ ನಮ್ಮೆಲ್ಲರಿಗೂ ದಾರಿದೀಪವಾಗಿವೆ” ಎಂದರು.

ರಾಜ್ಯ ಕಸಾಪ ಮಹಿಳಾ ಪ್ರತಿನಿಧಿ ಮಲ್ಲಮ್ಮಾ ಆರ್.ಪಾಟೀಲ್ ಅನುಭಾವ ನೀಡಿದರು. ಶಂಕರಲಿಂಗ ಸ್ವಾಮೀಜಿ ಸಮ್ಮುಖ ವಹಿಸಿದರು.

ಸಾಧಕರಿಗೆ ಸನ್ಮಾನ:

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕರವೇ ಸ್ವಾಭಿಮಾನಿ ಬಣ ಕಲಬುರಗಿ ವಿಭಾಗೀಯ ಉಸ್ತುವಾರಿ ಅಧ್ಯಕ್ಷ ಸಂಗಮೇಶ ಗುಮ್ಮೆ, ಪತ್ರಕರ್ತ ಪ್ರದೀಪ ಬಿರಾದಾರ್, ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ಸಂಗಮೇಶ್ವರ ಜ್ಯಾಂತೆ ಮತ್ತು ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಶಾಂತಾ ಶರಣಪ್ಪ ಬೇಲೂರೆ, ಡಾ.ಮಹಾದೇವಮ್ಮಾ ತಾಯಿ ಅವರನ್ನು ಶ್ರೀಮಠದ ಪರವಾಗಿ
ಸನ್ಮಾನಿಸಿ, ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಜಾತಿ ಸಮೀಕ್ಷೆಯ ಪರ-ವಿರೋಧಗಳ ಸುತ್ತಮುತ್ತ…

ಈ ಸಂದರ್ಭದಲ್ಲಿ ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರುಗಳಾದ ಜೈರಾಜ ಕೊಳ್ಳಾ, ಸಂತೋಷ ಬಿಜಿ ಪಾಟಿಲ್, ಗಣೇಶ ಪಾಟೀಲ್, ಸಂಜುಕುಮಾರ ನಾವದಗಿ, ಸತೀಶ ಮಡಿವಾಳ, ರಾಜಕುಮಾರ ಡಾವರಗಾಂವ, ಬಸವರಾಜ ಸಂಪಂಗೆ, ಅನಿಲ ಹಾಲೇಪುರಗೆ, ಸುದೀಪ ತೂಗಾಂವೆ, ದಯಾನಂದ ಸಜ್ಜನಶೆಟ್ಟಿ, ಮಾಳಸ್ಕಾಂತ ವಾಘೆ, ಭದ್ರೇಶ ಸ್ವಾಮಿ, ಸುನಿತಾ ಮಮ್ಮಾ, ಚಂದ್ರಕಲಾ ಡಿಗ್ಗೆ ಸೇರಿದಂತೆ ಹಲವರು ಇದ್ದರು. ದೀಪಕ ಠಮಕೆ ನಿರೂಪಿಸಿ, ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...