ಬೀದರ್‌ ನಗರದ ಓಲ್ಡ್ ಸಿಟಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ

Date:

ಬಡವರಿಗೆ, ಕೂಲಿ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‌ ಅನುಕೂಲವಾಗಲಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು.

ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದ ಓಲ್ಡ್ ಸಿಟಿಯ ನೂರು ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ, ಉಪಹಾರ ಸೇವಿಸಿ ಮಾತನಾಡಿದರು.

ʼಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಆಶಯದಂತೆ ಹಾಗೂ ಯಾರು ಹಸುವಿನಿಂದ ಇರಬಾರದೆಂಬ ಕಾರಣಕ್ಕೆ ನಗರ ಪ್ರದೇಶದ ಜನರಿಗೆ ರಿಯಾಯಿತಿ ದರದಲ್ಲಿ ಆಹಾರ ನೀಡುವ ಉದ್ದೇಶದಿಂದ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದೆ. ನಗರದ ಓಲ್ಡ್ ಸಿಟಿಯ ಜನರಿಗೆ, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಬರುವ ಜನರಿಗೆ ಈ ಕ್ಯಾಂಟಿನ್ ಉಪಯುಕ್ತವಾಗಲಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬೀದರ ನಗರದಲ್ಲಿ 3 ಹೊಸ ಇಂದಿರಾ ಕ್ಯಾಂಟಿನ್ ಆರಂಭವಾಗಲಿವೆ. ನಗರದ ಸಮಸ್ಯೆಗಳನ್ನು ಗುರುತಿಸಿ, ಅದಕ್ಕೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕೈಗೊಳ್ಳಲಾಗುವುದು. ರಸ್ತೆ, ಚರಂಡಿ ದುರಸ್ತಿಗೆ ₹150 ಕೋಟಿ ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ನಗರೋತ್ಥಾನ ಯೋಜನೆಯಡಿ ₹50 ಕೋಟಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಬಿ-ಖಾತಾದ ಉಪಯೋಗ ಜನರು ಪಡೆದುಕೊಳ್ಳಬೇಕು’ ಎಂದರು.

ಇದನ್ನೂ ಓದಿ : ಬೀದರ್‌ | ದಲಿತ ಸಂಘರ್ಷ ಸಮಿತಿಯಿಂದ ʼಮನುಸ್ಮೃತಿ ದಹನ ದಿನʼ ಆಚರಣೆ

ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶಿವರಾಜ್ ರಾಥೋಡ್ ಸೇರಿದಂತೆ ನಗರಸಭೆಯ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...