ಕಮಲನಗರ | ರಮಾಬಾಯಿ ಅಂಬೇಡ್ಕರ್‌ ತ್ಯಾಗದ ಜೀವನ ಸಮಾಜಕ್ಕೆ ಪ್ರೇರಣೆ : ರೋಹಿದಾಸ ಡೋಂಗ್ರೆ

Date:

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ದೇಶ ಕಟ್ಟುವ ಕಾರ್ಯಕ್ಕೆ ಬೆನ್ನೆಲಬಾಗಿ ನಿಂತು, ನಿರಂತರವಾಗಿ ಶ್ರಮವಹಿಸಿದ ಅವರ ಪತ್ನಿ ಮಾತೆ ರಮಾಬಾಯಿ ಅಂಬೇಡ್ಕರ್‌ ಅವರ ತ್ಯಾಗಮಯಿ ಜೀವನ ಸಮಾಜಕ್ಕೆ ಪ್ರೇರಣೆಯಾಗಿದೆ ಎಂದು ಶಿಕ್ಷಕ ರೋಹಿದಾಸ್‌ ಡೋಂಗ್ರೆ ಹೇಳಿದರು.

ಕಮಲನಗರ ತಾಲೂಕಿನ ಬೆಳಕುಣಿ (ಭೋ) ಗ್ರಾಮದ ಪಂಚಶೀಲ ಬುದ್ಧ ವಿಹಾರದಲ್ಲಿ ಆಯೋಜಿಸಿದ ಮಾತಾ ರಮಾಬಾಯಿ ಭೀಮರಾವ್ ಅಂಬೇಡ್ಕರ್ ಅವರ 128ನೇ ಜನ್ಮದಿನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ʼಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು-ಬರಹ-ಹೋರಾಟದ ಬದುಕಿಗೆ ರಮಾಬಾಯಿ ಅವರ ತ್ಯಾಗ ಅನನ್ಯ. ಎಂಥ ಕಠಿಣ ಪರಿಸ್ಥಿತಿಗಳ ನಡುವೆಯೂ ಕುಟುಂಬವನ್ನು ಮುನ್ನಡೆಸಿ, ಶಿಕ್ಷಣ ಮತ್ತು ಸಮಾನತೆಯ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಿದ ರಮಾಬಾಯಿ ಅವರ ಜೀವನ ಸ್ಪೂರ್ತಿದಾಯಕʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಧಮ್ಮ ವಂದನಾ ಮಂತ್ರಗಳ ಪಠಣದೊಂದಿಗೆ ಕಾರ್ಯಕ್ರಮಕ್ಕೆ ಆಧ್ಯಾತ್ಮಿಕ ಸ್ವರೂಪ ನೀಡಲಾಯಿತು. ಗ್ರಾಮದ ಮುಖಂಡರು, ಮಹಿಳೆಯರು, ಮಕ್ಕಳು ಭಾಗವಹಿಸಿದರು.

ಮಾತಾ ರಮಾಬಾಯಿ ಅಂಬೇಡ್ಕರ್ ಅವರ ಸ್ಮರಣಾರ್ಥವಾಗಿ ಸಿದ್ಧಾಂತ್ ಗಾಯನ ತಂಡದಿಂದ ಭಜನೆ ಹಾಗೂ ಸ್ಮರಣಾರ್ಥ ಗೀತ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಭಜನೆಗಳು ಹಾಗೂ ಧಮ್ಮಗೀತೆಗಳ ಮೂಲಕ ಸಮಾರಂಭವು ಭಕ್ತಿಭಾವದಿಂದ ಜರುಗಿತು.

ಇದನ್ನೂ ಓದಿ : ಬೀದರ್‌ | ಯುಜಿಸಿ ನಿಯಮಾವಳಿ ಶೀಘ್ರ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಕಾರ್ಯಕ್ರಮದಲ್ಲಿ ತಾನಾಜಿ ಕಂಬ್ಳೆ, ಖಂಡು ಗಾಯಕವಾಡ, ಭೀಮರಾವ್ ರಾಣಡೆ, ಯಾದವ ರಾನಡೆ, ಮಹೇಶ ಡೋಂಗ್ರೆ ವಿಜಯ್ ಡೋಂಗ್ರೆ, ಕೇವಲಬಾಯಿ ಕಾಂಬಳೆ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...