ಲೈನ್ ಮೆನ್‌ಗಳ ಕೊರತೆ | ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್‌ಗಳ ನೇಮಕ: ಸಚಿವ ಕೆ ಜೆ ಜಾರ್ಜ್‌

Date:

ರಾಜ್ಯದಲ್ಲಿ ಲೈನ್ ಮೆನ್‌ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್‌ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದರು.

ಬೀದರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪತಿನಿಧಿಗಳು ಮತ್ತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, “ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ಲೈನ್ ಮೆನ್ ಗಳ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ 3 ಸಾವಿರ ಲೈನ್ ಮನ್ ಗಳ ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು” ಎಂದರು.

“ಟ್ರಾನ್ಸ್ ಫಾರ್ಮರ್‌ಗಳ ರಿಪೇರಿ, ಅದರಲ್ಲೂ ಮುಖ್ಯವಾಗಿ ರೈತರಿಗೆ ವಿದ್ಯುತ್ ಪೂರೈಸುವ ಟ್ರಾನ್ಸ್ ಫಾರ್ಮರ್ ಗಳ ದುರಸ್ತಿ ಅಥವಾ ಬದಲಾವಣೆಗೆ ತುರ್ತು ಕ್ರಮ ಕೈಗೊಳ್ಳಬೇಕು. ವಿದ್ಯುತ್ ತಂತಿ, ಕಂಬಗಳ ದುರಸ್ತಿ ಸೇರಿದಂತೆ ವಿದ್ಯುತ್ ಪೂರೈಕೆಯಲ್ಲಿ ಆಗುವ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಬಗೆಹರಿಸಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷ ಬರಗಾಲವಿದ್ದರೂ ಬೇಸಿಗೆಯಲ್ಲಿ ಕೂಡ ಯಾವುದೇ ತೊಂದರೆಯಾಗದಂತೆ ಸಮರ್ಪಕವಾಗಿ ವಿದ್ಯುತ್ ಪೂರೈಸಲಾಗಿದ್ದು, ಈ ಬಾರಿಯೂ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಇಲಾಖೆಯು ಸನ್ನದ್ಧವಾಗಿದೆ. ವಿದ್ಯುತ್ ಸಂಬಂಧಿಸಿದಂತೆ ಕೆಲ ತಾಂತ್ರಿಕ ದೋಷಗಳು ಆಗಾಗ್ಗೆ ಕಂಡುಬರುತ್ತಿರುವುದರಿಂದ ಕೆಲವೊಮ್ಮೆ ಸಮಸ್ಯೆಗಳ ನಿವಾರಣೆಗೆ ಸಮಯ ಬೇಕಾಗುತ್ತದೆ. ಆದರೆ, ಈ ಎಲ್ಲಾ ಕಾರ್ಯವನ್ನು ಕಾಲಮಿತಿಯಲ್ಲಿ ಮುಗಿಸಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

“ರಾಜ್ಯದಲ್ಲಿ ಸದ್ಯ ದಿನಕ್ಕೆ 16 ರಿಂದ 17 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆಯಿದೆ. ಈ ವರ್ಷ ಯಾವುದೇ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಬೇಸಿಗೆಯಲ್ಲಿ ಬೇಡಿಕೆ ಹೆಚ್ಚಾದರೆ ವಿದ್ಯುತ್ ಖರೀದಿಗೂ ಸಿದ್ಧವಾಗಿದ್ದೇವೆ. ರಾಜ್ಯದಲ್ಲಿ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಕುರಿತು ಈ ಹಿಂದೆ ಸಲ್ಲಿಸಿದ್ದ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡಲಾಗುವುದು.ಅದಾದ ಬಳಿಕ ಹೊಸದಾಗಿ ಅಕ್ರಮ-ಸಕ್ರಮಕ್ಕೆ ಸಲ್ಲಿಸಿದ್ದ ಅರ್ಜಿಗಳ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಬೀದರ್ ಜಿಲ್ಲೆಯಲ್ಲಿ ಒಟ್ಟು 1,480 ಹೊಸ ಅರ್ಜಿಗಳು ಅಕ್ರಮ-ಸಕ್ರಮ ಯೋಜನೆಯಲ್ಲಿ ಸಲ್ಲಿಕೆಯಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುುದು” ಎಂದರು.

ಮೂರು ದಿನದಲ್ಲಿ ಪರಿಹಾರ ತಲುಪಿಸಿ

ಬೀದರ್ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ.ಖಂಡ್ರೆ ಮಾತನಾಡಿ, ಜಿಲ್ಲೆಯಲ್ಲಿ ವಿದ್ಯುತ್ ಅವಘಡದಲ್ಲಿ ಮರಣ ಹೊಂದಿದ 9 ಜನರ ಕುಟುಂಬಕ್ಕೆ ಈವರೆಗೂ ಪರಿಹಾರ ನೀಡಿದ ಬಗ್ಗೆ ಇಂಧನ ಸಚಿವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್, ಮಂದಿನ 3 ದಿನದೊಳಗಾಗಿ ಪರಿಹಾರ ತಲುಪಿಸುವಂತೆ ಕೆ.ಜೆ.ಜಾರ್ಜ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...