ಬೀದರ್‌ | ಗ್ಯಾಸ್‌ ಸಿಲಿಂಡರ್‌ ಇ-ಕೆವೈಸಿಗೆ ಕೊನೆ ದಿನಾಂಕ ಇಲ್ಲ; ಇದು ಸುಳ್ಳು ಸುದ್ದಿ : ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

Date:

ಅಡುಗೆ ಅನಿಲ ಸಂಪರ್ಕ (ಎಲ್‌ಪಿಜಿ ಕನೆಕ್ಷನ್) ಹೊಂದಿದವರು ಡಿಸೆಂಬರ್‌ 31 ರೊಳಗೆ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಮತ್ತು ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ, ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕು ಮತ್ತು ಇ-ಕೆವೈಸಿ ಮಾಡಿಸಿದರೆ 500 ರೂ.ಗೆ ಸಿಲಿಂಡರ್ ನೀಡುತ್ತಾರೆ ಎಂಬುದು ಕೇವಲ ವದಂತಿ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಿಷಯ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ. ಇದು ಕೇವಲ ವದಂತಿಯಾಗಿದ್ದು, ಅಡುಗೆ ಅನಿಲ ಗ್ರಾಹಕರು ತಮ್ಮ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಇ-ಕೆವೈಸಿ ನೀಡಬಹುದಾಗಿದೆ. ಅದೂ ಸಹ ಉಚಿತ ಕಾರ್ಯವಾಗಿರುತ್ತದೆ. ಆದರೆ ಅದಕ್ಕೆ ಕೇಂದ್ರ ಸರ್ಕಾರವು ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ ಎಂದು ಹೇಳಿದ್ದಾರೆ.

“ಮೊದಲ ಆದ್ಯತೆಯಾಗಿ ಉಜ್ವಲ ಯೋಜನೆಯ ಗ್ಯಾಸ್ ಸಂಪರ್ಕ ಪಡೆದವರು ಇ-ಕೆವೈಸಿ ನೀಡಬೇಕಾಗಿದೆ. ಉಳಿದಂತೆ ಗ್ಯಾಸ್ ಸಂಪರ್ಕ ಹೊಂದಿದವರು ಆಧಾರ ಸಂಖ್ಯೆ ದಾಖಲೆಯೊಂದಿಗೆ ತಮ್ಮ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಇ-ಕೆವೈಸಿ ನೀಡಬಹುದಾಗಿದೆ, ಎಚ್‌ಪಿಸಿ, ಐಓಸಿ ಮತ್ತು ಬಿಪಿಸಿ ಕಂಪನಿಯ ಪೋರ್ಟಲ್‌ಗಳಲ್ಲಿ ಮತ್ತು ಆ್ಯಪ್ ಗಳಲ್ಲಿಯೂ ಸಹ ಇ-ಕೆವೈಸಿಯನ್ನು ಗ್ರಾಹಕರು ಸ್ವತಃ ಮಾಡಿಸಿಕೊಳ್ಳಬಹುದಾಗಿದೆ. ಸದರಿ ಇ-ಕೆವೈಸಿ ಕಾರ್ಯಕ್ಕೆ ಯಾವುದೇ ನಿರ್ದಿಷ್ಟ ಗಡುವು ಇರುವುದಿಲ್ಲ” ಎಂದರು.

ಸಾರ್ವಜನಿಕರು ಸದರಿ ಇ-ಕೆವೈಸಿ ಕಾರ್ಯಕ್ಕೆ ಯಾವುದೇ ಸರದಿ ಸಾಲುಗಳಲ್ಲಿ ನಿಂತುಕೊಂಡು ಆತಂಕಗೊಳಗಾಗದೇ ತಮ್ಮ ಅನುಕೂಲಕರ ಸಮಯದಲ್ಲಿ ಹೋಗಿ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು  ತಿಳಿಸಿದ್ದಾರೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...