ಬೀದರ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಅಡುಗೆ ಅನಿಲ ಸಿಲಿಂಡರ್ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರು ಗಾಬರಿಗೊಳ್ಳಬಾರದು ಹಾಗೂ ಅನಗತ್ಯವಾಗಿ ಹೆಚ್ಚುವರಿ ಸಿಲಿಂಡರ್ ಸಂಗ್ರಹಿಸಬಾರದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ʼಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೂಡಬಾರದು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಮುಂಚಿತವಾಗಿ ಬುಕ್ಕಿಂಗ್ ಮಾಡುತ್ತಿರುವುದರಿಂದ ಐವಿಆರ್ಎಸ್ ಮತ್ತು ಮಿಸ್ಡ್ ಕಾಲ್ ವ್ಯವಸ್ಥೆಯಲ್ಲಿ ದಟ್ಟಣೆ ಉಂಟಾಗಿದೆ. ಆದ್ದರಿಂದ IOCL, HPCL ಮತ್ತು BPCL ತೈಲ ಕಂಪನಿಗಳ ವಾಟ್ಸಾಪ್ ಸಂಖ್ಯೆಗಳ ಮೂಲಕವೂ ಗ್ಯಾಸ್ ಬುಕ್ಕಿಂಗ್ ಮಾಡಬಹುದುʼ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ʼಮಾರ್ಚ್ 11ರಂದು ಜಿಲ್ಲೆಯಲ್ಲಿ ಗ್ಯಾಸ್ ಏಜೆನ್ಸಿದಾರರು ಮತ್ತು ಹೋಟೆಲ್ ಉದ್ಯಮಿದಾರರ ಸಭೆ ನಡೆಸಲಾಗಿದ್ದು, ವಾಣಿಜ್ಯ ಸಿಲಿಂಡರ್ಗಳ ಲಭ್ಯತೆ ಕುರಿತು ಚರ್ಚೆ ನಡೆಯಿತು. ಹೋಟೆಲ್ಗಳಲ್ಲಿ ಅಗತ್ಯದ ಪ್ರಮಾಣದಲ್ಲಿ ಮಾತ್ರ ಸಿಲಿಂಡರ್ ಬಳಸಬೇಕು ಹಾಗೂ ಏಜೆನ್ಸಿಗಳಲ್ಲಿ ಲಭ್ಯವಿರುವ ವಾಣಿಜ್ಯ ಸಿಲಿಂಡರ್ಗಳನ್ನು ಅಗತ್ಯಕ್ಕೆ ಅನುಗುಣವಾಗಿ ಸರಬರಾಜು ಮಾಡುವಂತೆ ಸೂಚಿಸಲಾಗಿದೆʼ ಎಂದರು.
ಇದನ್ನೂ ಓದಿ : ಬೀದರ್ | ಎಸ್ಎಸ್ಎಲ್ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಯಾರೂ ಅನಗತ್ಯವಾಗಿ ಸಿಲಿಂಡರ್ ಸಂಗ್ರಹಣೆ ಅಥವಾ ಮಾರ್ಗಾಂತರ ಮಾಡಬಾರದು. ಇಂತಹ ಪ್ರಕರಣಗಳು ಕಂಡುಬಂದರೆ ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಕ್ರಮ ಕೈಗೊಳ್ಳಲಾಗುವುದುʼ ಎಂದು ಎಚ್ಚರಿಸಿದ ಅವರು, ಜಿಲ್ಲೆಯಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದ ಕಾರಣ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಡಿಸಿ ಶಿಲ್ಪಾ ಶರ್ಮಾ ಅವರು ಸ್ಪಷ್ಟಪಡಿಸಿದ್ದಾರೆ.





