ಬೀದರ್‌ | ಬಸವತತ್ವ ಹೇಳಬೇಕೆಂದರೆ ಹೆದರಿಕೆ ಆಗುತ್ತಿದೆ: ನಿಜಗುಣಾನಂದ ಸ್ವಾಮೀಜಿ

Date:

ಬಸವಣ್ಣನವರ ವೈಚಾರಿಕತೆ ತತ್ವ ಬಗ್ಗೆ ಮಾತನಾಡುವರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತಿದೆ. ಇಂದು ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದಂತಾಗಿದೆ. ಬಸವತತ್ವದ ಬಗ್ಗೆ ಮಾತನಾಡಬೇಕಾದರೆ ಹೆದರಿಕೆ ಆಗುತ್ತಿದೆ ಎಂದು ಬೈಲೂರು ಮಠದ ನಿಜಗುಣಾನಂದ ಸ್ವಾಮಿಜಿ ಕಳವಳ ವ್ಯಕ್ತಪಡಿಸಿದರು.

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ವಿಶ್ವ ಬಸವ ಧರ್ಮ ಟ್ರಸ್ಟ್ ಆಯೋಜಿಸಿದ್ದ 44ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವದಲ್ಲಿ ‘ಅನುಭವ ಮಂಟಪ ಮತ್ತು ಮಹಿಳಾ ಮಿಸಲಾತಿ’ ಕುರಿತು ಅವರು ಮಾತನಾಡಿದರು.

“ಬಸವತತ್ವ ಹೇಳಿದರೆ ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಆದರೆ ಯಾವುದೇ ಬೆದರಿಕೆಗಳಿಗೆ ಬಗ್ಗದೆ ಲಿಂಗಾಯತ ಧರ್ಮ ಉಳಿಸಿಕೊಂಡು ಹೋಗಬೇಕಾಗಿದೆ. ನಾನು ಮೂವತ್ತು ವರ್ಷಗಳಿಂದ ಪ್ರವಚನ ಹೇಳುತ್ತಿದ್ದೇನೆ. ಆದರೆ ಯಾವತ್ತೂ ಹೆದರಿಕೆಯಾಗಲಿಲ್ಲ. ಇಂದು ಭಯವಾಗುತ್ತಿದೆ. ಬಸವಣ್ಣನವರ ವೈಚಾರಿಕತೆ ಹೇಳುವವರ ಬಾಯಿಗೆ ಬೀಗ ಹಾಕುವ ಹುನ್ನಾರ ನಡೆಯುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸವ ಧರ್ಮಕ್ಕೆ ಅನ್ಯರಿಂದ ಆತಂಕವಿಲ್ಲ. ಲಿಂಗಾಯತರಲ್ಲಿನ ವೀರಶೈವ ಮನಸ್ಥಿತಿಯ ಜನರಿಂದಲೇ ಲಿಂಗಾಯತ ಧರ್ಮಕ್ಕೆ ಕಂಟಕವಿದೆ. ಆದ್ದರಿಂದ ಮೊದಲು ವೈದಿಕ ಆಚರಣೆಯಿಂದ ಹೊರಬರುವಂತೆ ನಮ್ಮವರನ್ನು ಜಾಗೃತಿಗೊಳಿಸಬೇಕೆಂದು” ಕರೆ ನೀಡಿದರು.

ಡಾ ಬಸವಲಿಂಗ ಪಟ್ಟದೇವರು ಮಾತನಾಡಿ, “ಬಸವಕಲ್ಯಾಣ ದಿಂದ 12ನೇ ಶತಮಾನದಲ್ಲಿ ಶರಣರು ಕಲ್ಯಾಣದಿಂದ ಉಳವಿಗೆ ಹೋಗಿದ್ದರು, ಆದರೆ ಇಂದು ಶರಣರು ಉಳವಿಯಿಂದ ಬಸವಕಲ್ಯಾಣ ಅನುಭವ ಮಂಟಪ ಉತ್ಸವಕ್ಕೆ ಪಾದಯಾತ್ರೆ ಮುಖಾಂತರ ಬಂದಿದ್ದಾರೆ. ಈ ಶ್ರೇಯಸ್ಸು ಬಸವಾನಂದ ಸ್ವಾಮೀಜಿಗಳಿಗೆ ಸಲ್ಲುತ್ತದೆ. ಪ್ರತಿ ವರ್ಷದ ಅನುಭವ ಮಂಟಪ ಉತ್ಸವಕ್ಕೆ ಉಳವಿಯಿಂದ ಶರಣರು ಬರಬೇಕೆಂದು” ಹೇಳಿದರು.

ಈ ಸುದ್ದಿ ಓದಿದ್ದೀರಾ? ಒಂದು ಕಾರಣಕ್ಕೆ ಸಾಯೋಣ ಅಂತ ಬಂದಿದ್ವಿ ಅಂದ್ರು ಇಳಿ ವಯಸ್ಸಿನವರು: ಪ್ರೊ.ಬಿಳಿಮಲೆ ಕಂಡಂತೆ ದೆಹಲಿ ರೈತ ಹೋರಾಟ

ಕಾರ್ಯಕ್ರಮದಲ್ಲಿ ಹಿರೇಮಠದ ಗುರುಬಸವ ಪಟ್ಟದ್ದೇವರು, ಚಂದ್ರಕಾಂತ ಬೆಲ್ಲದ, ಪ್ರೊ. ಶಿವಗಂಗಾ ರುಮ್ಮಾ, ರಾಜಶೇಖರ ಸೋಲಾಪುರೆ, ಮಲ್ಲಿಕಾರ್ಜುನ ಗುಂಗೆ ಸೇರಿದಂತೆ ಪೂಜ್ಯರು, ಗಣ್ಯರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...