ಈದಿನ ಸಂದರ್ಶನ | ಬದ್ಧತೆ ಮೈಗೂಡಿಸಿಕೊಂಡು ಓದಿದರೆ ಕೋಚಿಂಗ್‌ ಅಗತ್ಯವಿಲ್ಲ

Date:

ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) 2023ನೇ ಸಾಲಿನಲ್ಲಿ ನಡೆಸಿದ್ದ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶದಲ್ಲಿ ಬೀದರ್‌ ನಗರದ ನಿವಾಸಿ ಮೊಹಮ್ಮುದ್ ಅಸೀಮ್‌ ಮುಜತಬಾ 481ನೇ ರ‍್ಯಾಂಕ್‌ ಪಡೆದಿದ್ದಾರೆ. ಅವರೊಂದಿಗೆ ʼಈದಿನ.ಕಾಮ್‌ʼ ಬೀದರ್‌ ಜಿಲ್ಲಾ ಸಂಯೋಜಕ ಬಾಲಾಜಿ ಕುಂಬಾರ ನಡೆಸಿದ ಸಂದರ್ಶನ ಇಲ್ಲಿದೆ.

ನಿಮ್ಮ ಮತ್ತು ನಿಮ್ಮ ಕುಟುಂಬದ ಬಗ್ಗೆ ಹೇಳಿ.

ನಾನು ಬೀದರ್‌ ನಗರದ ಗೋಲೆಖಾನಾ ನಿವಾಸಿ. ನನ್ನ ತಂದೆ ಎಂಡಿ‌ ಇಜಾಜುದ್ದೀನ್‌ ಬ್ರಿಮ್ಸ್‌ನಲ್ಲಿ ಪ್ರಯೋಗಾಲಯ ತಂತ್ರಜ್ಞಾನರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಾಯಿ ಶಾಹೀದಾ ಬೇಗಂ ಪ್ರಾಥಮಿಕ ಸರ್ಕಾರಿ ಶಾಲಾ ಶಿಕ್ಷಕಿಯಾಗಿದ್ದಾರೆ. ನನ್ನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ‌ ಶಿಕ್ಷಣವನ್ನು ಬೀದರ್‌ನ ಗುರುನಾನಕ್ ಪಬ್ಲಿಕ್‌ ಶಾಲೆಯಲ್ಲಿ ಪಡೆದಿದ್ದೇನೆ. ಬೆಂಗಳೂರಿನ ಬಿಐಎಂಎಸ್ ಕಾಲೇಜಿನಲ್ಲಿ‌ ಬಿಇ ಕೆಮಿಕಲ್ ಎಂಜಿನಿಯರಿಂಗ್‌ ಪದವಿ ಪೂರ್ಣಗೊಳಿಸಿದ್ದೇನೆ. ಬಳಿಕ ಎರಡು ವರ್ಷ ಜಿಂದಾಲ್‌ ಕಂಪನಿಯಲ್ಲಿ ಕೆಲಸ ಮಾಡಿದ್ದೇನೆ. 2019 ರಿಂದ ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ಮಾಡಿದ್ದೇನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂರ್ವಭಾವಿ ಪರೀಕ್ಷೆಗೆ ಸಿದ್ಧತೆ ಹೇಗಿತ್ತು?

ನಾನು ಎಲ್ಲಿಯೂ ಕೋಚಿಂಗ್‌ ತೆಗೆದುಕೊಂಡಿಲ್ಲ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ತರಬೇತಿ ನೀಡಲು ಪರೀಕ್ಷೆ ನಡೆಸುತ್ತಾರೆ. ಆ ಪರೀಕ್ಷೆಯಲ್ಲಿ ಮೆರಿಟ್‌ ಆಧಾರದಲ್ಲಿ ನನಗೆ ಪ್ರವೇಶ ಸಿಕ್ಕಿತ್ತು, ಆಗ ನಾನು ದೆಹಲಿ ಹಾಗೂ ಹೈದ್ರಾಬಾದ್‌ನಲ್ಲಿ ಉಚಿತವಾಗಿ ಅಧ್ಯಯನ ನಡೆಸಿ ಸ್ವತಃ ಸಿದ್ಧತೆ ನಡೆಸಿದ್ದೆ.

ಓದುವ ಪ್ಲ್ಯಾನ್‌ ಹೇಗಿತ್ತು?

ನಾನು ʼಅರ್ಲಿ ಬರ್ಡ್‌ʼ ಬೆಳಿಗ್ಗೆ 6 ಗಂಟೆಗೆ ಎದ್ದ ತಕ್ಷಣ ಮೊದಲು ದಿನಪತ್ರಿಕೆ ಓದುತ್ತಿದ್ದೆ, ಬಳಿಕ‌ ಇತಿಹಾಸ, ರಾಜ್ಯಶಾಸ್ತ್ರ ಹಾಗೂ ಅರ್ಥಶಾಸ್ತ್ರ ವಿಷಯಗಳನ್ನು ಓದಿ ಸಂಜೆ ಅದನ್ನು ರಿವಿಷನ್‌ ಮಾಡುತ್ತಿದ್ದೆ. ರಾತ್ರಿ ಮಲಗುವಾಗ ಮನನ ಮಾಡಿದರೆ ಅದು ಹೆಚ್ಚು ನೆನಪಿನಲ್ಲಿ ಉಳಿಯುತ್ತದೆ ಎಂಬುದು ನನ್ನ ನಂಬಿಕೆ. ಯಶಸ್ಸಿನ ಬಗ್ಗೆ ನನ್ನ ನಂಬಿಕೆಯಿಟ್ಟು ವಿಶ್ವಾಸದಿಂದ ಓದುತ್ತಿದ್ದೆ.

ಯುಪಿಎಸ್ಸಿ ಪರೀಕ್ಷೆ ಬರೆಯಲು ನಿಮಗೆ ಯಾರು ಪ್ರೇರಣೆ?

ಬೀದರನಲ್ಲಿ ಈ ಹಿಂದೆ ಜಿಲ್ಲಾಧಿಕಾರಿಯಾಗಿ‌ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ ಹರ್ಷಾಗುಪ್ತಾ ಹಾಗೂ ಪಿ.ಸಿ.ಜಾಫರ್ ಅವರು ನನಗೆ ಪ್ರೇರಣೆ, 2019ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸು ಮಾಡಿ ಐಪಿಎಸ್‌ ಅಧಿಕಾರಿಯಾಗಿರುವ ಎಂ.ಡಿ.ನದೀಮ್‌ ಹಾಗೂ ಸ್ನೇಹಿತ ಐಎಎಸ್‌ ಅಧಿಕಾರಿ ಹರೀಶ್‌ ಎಂಬುವರ ನಿರಂತರ ಮಾರ್ಗದರ್ಶನ, ಸಹಕಾರದೊಂದಿಗೆ ನಾನು ಪರೀಕ್ಷೆಗೆ ಸಿದ್ಧತೆ ಮಾಡಿದ್ದೇನೆ.

ಪರೀಕ್ಷಾ ಯಶಸ್ಸಿಗೆ ಕೋಚಿಂಗ್ ಅಗತ್ಯವೇ ?

ಪರೀಕ್ಷೆಗೆ ಕೋಚಿಂಗ್ ಅತ್ಯವಶ್ಯಕ ಎಂಬ ನಿಯಮವೇನೂ ಇಲ್ಲ. ಕೆಲವರಿಗೆ ಅಗತ್ಯ ಎನಿಸಬಹುದು. ನಾನಂತೂ ಕೋಚಿಂಗ್‌ ಹೋಗಲಿಲ್ಲ. ಅಧ್ಯಯನ ಸಾಮಾಗ್ರಿಗಳನ್ನು ಆಯ್ಕೆ ಮಾಡಿಕೊಂಡು ಪೂರ್ವಭಾವಿ ಪರೀಕ್ಷೆ ಎದುರಿಸಿದವರ ಸಹಕಾರದೊಂದಿಗೆ ಓದಿದರೂ ತೇರ್ಗಡೆ ಹೊಂದಬಹುದು.

ಎಷ್ಟನೇ ಪ್ರಯತ್ನದಲ್ಲಿ ಯಶಸ್ಸು ಸಿಕ್ಕಿದೆ ?

2022ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ 937ನೇ ರ‍್ಯಾಂಕ್‌ ಬಂದಿತ್ತು. ಆವಾಗ ಭಾರತೀಯ ರೈಲ್ವೆ ಸರ್ವಿಸ್‌ಗೆ ಆಯ್ಕೆಯಾಗಿದ್ದೆ. ಈ ಸಲ ನನಗೆ ಐದನೇ ಪ್ರಯತ್ನದಲ್ಲಿ 481ನೇ ರ‍್ಯಾಂಕ್‌ ಪಡೆದಿರುವೆ, ಐಪಿಎಸ್ ಅಧಿಕಾರಿ ಆಗುವುದು ಬಹುತೇಕ ಖಚಿತವಾಗಿದೆ.

ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ನಿಮ್ಮ ಸಲಹೆ?

ನಾನು ಹಿಂದುಳಿದ ಪ್ರದೇಶ ಹಾಗೂ ಗ್ರಾಮೀಣ ಭಾಗದವನು, ಹೀಗಾಗಿ ನಗರ, ಗ್ರಾಮೀಣ ಭಾಗದ ಯಾರೇ ಇರಲಿ ಕನ್ನಡ, ಇಂಗ್ನಿಷ್‌ ಮಾಧ್ಯಮದ ಅಭ್ಯರ್ಥಿಗಳೇ ಆಗಿರಲಿ, ಎಲ್ಲರಿಗೂ ತಮ್ಮ ಇಷ್ಟದ ಭಾಷೆಯಲ್ಲಿ ಯುಪಿಎಸ್ಸಿ ಪರೀಕ್ಷೆ ಬರೆಯಲು ಅವಕಾಶವಿದೆ. ಶಿಸ್ತು, ಕಠಿಣ ಪರಿಶ್ರದಿಂದ ಉತ್ತಮ ಸಲಹೆ, ಮಾರ್ಗದರ್ಶನದೊಂದಿಗೆ ಯೋಜನಾ ಬದ್ಧವಾಗಿ ಪೂರ್ವಸಿದ್ಥತೆ ಮಾಡಿಕೊಂಡು ಪರೀಕ್ಷೆ ಎದುರಿಸಿದರೆ ಯಶಸ್ಸು ಒಲಿಯುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ನಿಮ್ಮ ಕಿವಿ ಮಾತೇನು?

ಬಸವಣ್ಣನವರ ʼಕಾಯಕವೇ ಕೈಲಾಸʼ ಎಂಬ ನುಡಿಯಂತೆ ನಾವು ನಮ್ಮ ಕೆಲಸವನ್ನು ತುಂಬಾ ಶ್ರದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ಮಾಡಬೇಕು. ಇಷ್ಟೇ ಸಮಯ ಓದಬೇಕು ಎನ್ನುವುದಕ್ಕಿಂತ ಎಷ್ಟು ಸಾಧ್ಯವೋ ಅಷ್ಟು ಹೆಚ್ಚು ಸಮಯ ಓದಬೇಕು. ಯುಪಿಎಸ್ಸಿ ಪರೀಕ್ಷೆ ಅಲ್ಲದೇ ಬೇರೆ ಯಾವುದೇ ಪರೀಕ್ಷೆಗೆ ಸಿದ್ಧತೆ ಮಾಡಬೇಕಾದರೆ ಸಮಯ ವ್ಯರ್ಥ ಮಾಡದೇ ಹೆಚ್ಚು ಅಧ್ಯಯನದಲ್ಲಿ ತೊಡಗಿದರೆ ಮಾತ್ರ ಯಶಸ್ಸು ಕಟ್ಟಿಟ್ಟ ಬುತ್ತಿ.

ನಿಮ್ಮ ಕುಟುಂಬದ ಸಹಕಾರ ಹೇಗಿತ್ತು?

ನಮ್ಮ ಕುಟುಂಬದ ತಂದೆ-ತಾಯಿ, ಅಣ್ಣ-ಅಕ್ಕ ಅವರು ಪ್ರತಿ ಹಂತದಲ್ಲೂ ಅವರು ನನ್ನ ಬೆನ್ನೆಲುಬಾಗಿ ಸಹಕಾರ ನೀಡಿದ್ದಾರೆ. ಓದುವ ಕೆಲಸವನ್ನು ಮಾತ್ರ ನಾನು ಮಾಡಿದ್ದೇನೆ. ಪರೀಕ್ಷೆಗೆ ಚನ್ನಾಗಿ ಸಿದ್ಧತೆ ಮಾಡು ಎಂದಷ್ಟೇ ಹೇಳುತ್ತಿದ್ದರು, ಯಶಸ್ಸಿನ ಬಗ್ಗೆ ಯಾವತ್ತೂ ಪ್ರಶ್ನಿಸಲಿಲ್ಲ. ನನ್ನ ಮೇಲೆ ನಂಬಿಕೆಯಿಂದ ಓದಲು ತುಂಬಾ ಸಹಕಾರ ನೀಡಿದ್ದಾರೆ. ಯಾವುದೇ ಆಕಾಂಕ್ಷಿಗೆ ಕುಟುಂಬದವರ ಸಹಕಾರ ಬಹಳ ಮುಖ್ಯ ಹಾಗೆಯೇ ಆ ಜವಾಬ್ದಾರಿಯನ್ನು ನನ್ನ ಕುಟುಂಬದವರು ಸಮರ್ಥವಾಗಿ ನಿಭಾಯಿಸಿದ್ದಾರೆ. ಅವರಿಂದಲೇ ನಾನಿಂದು ಯಶಸ್ಸು ಕಾಣಲು ಸಾಧ್ಯವಾಗಿದೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...