ಬೀದರ್‌ | ಫೆ.24ಕ್ಕೆ ಸುಭಾಷ್‌ ಚಂದ್ರ ಬೋಸ್‌ ಪ್ರೌಢಶಾಲೆಯಲ್ಲಿ ಗುರುವಂದನಾ ಸಮಾವೇಶ

Date:

ಔರಾದ ತಾಲೂಕಿನ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಒಕ್ಕೂಟದಿಂದ ಫೆ.24ರಂದು ʼಗುರುವಂದನಾ ಹಾಗೂ ಹಳೆ ವಿಧ್ಯಾರ್ಥಿಗಳ ಸ್ನೇಹ ಸಮ್ಮಿಲನʼ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ನಿವೃತ್ತ ಮುಖ್ಯಗುರು ಮಲ್ಲಿಕಾರ್ಜುನ ಹಿಪ್ಪಳಗಾಂವೆ ಹೇಳಿದರು.

ಸಂತಪೂರ ಗ್ರಾಮದಲ್ಲಿ ಸುಭಾಷ್‌ ಚಂದ್ರ ಬೋಸ್‌ ಪ್ರೌಢ ಶಾಲೆಯ ‘ಹಳೆ ವಿಧ್ಯಾರ್ಥಿಗಳ ಸಮನ್ವಯ ಸಮಿತಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

“1984 ರಿಂದ ಇಲ್ಲಿಯವರೆಗೂ ಸಾವಿರಾರು ವಿದ್ಯಾರ್ಥಿಗಳಿಗೆ ಬದುಕು ಕಟ್ಟಿಕೊಟ್ಟ ಶ್ರೇಯಸ್ಸು ಕರ್ನಾಟಕ ಪಬ್ಲಿಕ್ ಶಿಕ್ಷಣ ಸಂಸ್ಥೆಗೆ ಸಲ್ಲುತ್ತದೆ. ಈ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಸುಭಾಷ್ ಚಂದ್ರ ಬೋಸ್ ಪ್ರೌಢ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಇಂದು ದೇಶ-ವಿದೇಶದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ನಮ್ಮ ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ” ಎಂದು ಸಂಸ್ಥೆಯ ಕಾರ್ಯದರ್ಶಿ ನಂದಾದೀಪ ಬೋರಾಳೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ನಾಲ್ಕು ದಶಕದಿಂದ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ತಮ್ಮ ವಿದ್ಯೆ ಗುರುಗಳು, ಬಾಲ್ಯದ ಗೆಳೆಯ, ಗೆಳೆತಿಯರೊಂದಿಗೆ ಮುಖಾಮುಖಿಯಾಗಿ ಬಾಲ್ಯದ ಸಂತಸದ ಕ್ಷಣಗಳನ್ನು ಮೆಲಕು ಹಾಕುವುದು ಹಾಗೂ ಸದ್ಯದ ಬದುಕಿನ ಕುರಿತು ಕುಶಲೋಪರಿಗೆ ಈ ಸಮಾವೇಶ ವೇದಿಕೆಯಾಗಲಿದೆ” ಎಂದು ನುಡಿದರು.

“ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸಂತೋಷ ಪಾಟಿಲ್ ಮಾತನಾಡಿ, “ಹಳೆ ವಿದ್ಯಾರ್ಥಿಗಳ ಸಮನ್ವಯ ಸಮಿತಿಯಿಂದ ಫೆ. 24 ರಂದು ಗುರುವಂದನಾ ಹಾಗೂ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಸಮಾವೇಶವನ್ನು ಅತ್ಯಂತ ಅರ್ಥಪೂರ್ಣವಾಗಿ ನಡೆಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗೊಳಿಸಲು ಪೂರ್ವ ಸಿದ್ಧತೆ ನಡೆಯುತ್ತಿದ್ದು, ಸಮಿತಿ ಹಾಗೂ ಉಪ ಸಮಿತಿಗಳನ್ನು ರಚಿಸಲಾಗಿದೆ. ಅಂದು ಮುಂಜಾನೆ ಸಂತಪೂರ ಪೋಲಿಸ್ ಠಾಣೆಯಿಂದ ಆರಂಭವಾಗಿ ಬಸವೇಶ್ವರ ವೃತ್ತ, ಅನುಭವ ಮಂಟಪ ಮಾರ್ಗವಾಗಿ ಬೃಹತ್ ಮೆರವಣಿಗೆ ನಡೆಯಲಿದೆ. ನಂತರ ಶಾಲೆಯ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಖ್ಯಾತ ಶಿಕ್ಷಣ ತಜ್ಣರು, ವಿವಿಧ ಗಣ್ಯರು, ಅತಿಥಿಗಳು ಭಾಗವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ

ಪತ್ರಿಕಾಗೋಷ್ಠಿಯಲ್ಲಿ ಶಾಲೆಯ ಮುಖ್ಯ ಗುರು ಮನೋಹರ್ ಬಿರಾದರ, ದೈಹಿಕ ಶಿಕ್ಷಣ ಶಿಕ್ಷಕ ಗುರುನಾಥ ದೇಶಮುಖ, ನಿವೃತ್ತ ಶಿಕ್ಷಕ ಶಿವರಾಜ ಜುಲಾಂಡೆ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ನಾಗೇಶ ಸ್ವಾಮಿ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...