ಬೀದರ್‌ | ಮಹಿಳಾ ಸಬಲೀಕರಣಕ್ಕೆ ನಮ್ಮ ಸರ್ಕಾರ ಶ್ರಮಿಸಲಿದೆ: ಸಚಿವ ಈಶ್ವರ ಖಂಡ್ರೆ

Date:

  • ಮಹಿಳಾ ಸಬಲೀಕರಣದಿಂದಲೇ ದೇಶದ ಪ್ರಗತಿ ಸಾಧ್ಯ ಎಂಬುವುದನ್ನು ಎಲ್ಲರೂ ಅರಿಯಬೇಕು
  • ಬೀದರ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ 2,90,077 ಫಲಾನುಭವಿಗಳು ನೋಂದಣಿ

ನಮ್ಮ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಉಚಿತ ಪ್ರಯಾಣಕ್ಕಾಗಿ ಶಕ್ತಿ, ಹಾಗೂ ಆರ್ಥಿಕ ಸಹಕಾರಕ್ಕಾಗಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿದೆ ಎಂದು ಅರಣ್ಯ, ಜೈವಿಕ ಹಾಗೂ ಪರಿಸರ ಮತ್ತು ಬೀದರ್ ಉಸ್ತುವಾರಿ ಸಚಿವರಾದ ಈಶ್ವರ ಬಿ ಖಂಡ್ರೆ ಹೇಳಿದರು.

ಬುಧವಾರ ಬೀದರ್‌ನಲ್ಲಿ ನಡೆದ ‘ಗೃಹಲಕ್ಷ್ಮಿ ಯೋಜನೆ’ ಚಾಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಮಹಿಳಾ ಸಬಲೀಕರಣದಿಂದಲೇ ದೇಶದ ಪ್ರಗತಿ ಸಾಧ್ಯ ಎಂಬುವುದನ್ನು ಎಲ್ಲರೂ ಅರಿಯಬೇಕು. ದೇಶದಲ್ಲಿ ಮಹಿಳೆಯ ರಕ್ಷಣೆಗೆ ಅನೇಕ ಕಾಯ್ದೆ ಕಾನೂನುಗಳು ಇದ್ದರೂ ಸಹ ಅವರ ಮೇಲಿನ ದೌರ್ಜನ್ಯಗಳು ನಿಲ್ಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ರಕ್ಷಣೆ ನೀಡುವ ಜೊತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವ ಜವಾಬ್ದಾರಿ ನಮ್ಮ ಮೇಲಿದೆ. ಈಗಾಗಲೇ ಹಿಂದೆ ನಮ್ಮ ಸರ್ಕಾರ ಇದ್ದಾಗ ಮಹಿಳೆಯ ಪ್ರಗತಿಗಾಗಿ ಅನೇಕ ಕಾರ್ಯಕ್ರಮ ರೂಪಿಸುವದರ ಜೊತೆಗೆ ಅವರ ರಕ್ಷಣೆಗೆ ಹಲವಾರು ಕಾಯ್ದೆಗಳನ್ನು ಜಾರಿಗೆ ತಂದಿದೆ ಮುಂದೆಯೂ ನಮ್ಮ ಸರ್ಕಾರ ಮಹಿಳೆಯರ ಪ್ರಗತಿಗೆ ದುಡಿಯಲಿದೆ” ಎಂದರು.

ಬೀದರ್ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ 2,90,077 ಫಲಾನುಭವಿಗಳು ನೋಂದಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆ ಸಂದರ್ಭದಲ್ಲಿ ನೀಡಿದ ಐದು ಗ್ಯಾರಂಟಿಗಳ ಪೈಕಿ ಈಗಾಗಲೇ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಾಗಿದ್ದು, ಅದರ ಸದುಪಯೋಗವನ್ನು ಈಗಾಗಲೇ ರಾಜ್ಯದ ಜನರು ಪಡೆಯುತ್ತಿದ್ದಾರೆ. ಅದೇ ರೀತಿ ಇಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದ್ದೇವೆ. ಈ ಗೃಹಲಕ್ಷೀ ಯೋಜನೆಯಡಿ ರಾಜ್ಯದ 1 ಕೋಟಿ 11 ಲಕ್ಷ ಜನ ನೋಂದಣಿ ಮಾಡಿಕೊಂಡಿದ್ದಾರೆ. ಬೀದರ ಜಿಲ್ಲೆಯಲ್ಲಿ 2,90,077 ಫಲಾನುಭವಿಗಳು ನೋಂದಣಿ ಮಾಡಿಸಿಕೊಂಡವರ ಬ್ಯಾಂಕ್ ಖಾತೆಗೆ 2000 ರೂ. ಹಣ ಜಮೆ ಮಾಡಲಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಇದ್ದು ಬೀದರ ಜಿಲ್ಲೆಯ ಜನರು ಇದರ ಲಾಭ ಪಡೆಯಬೇಕು” ಎಂದು ಹೇಳಿದರು.

ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರು ಮಾತನಾಡಿ, “ಬೀದರ ಜಿಲ್ಲೆಯಲ್ಲಿ 17 ರಿಂದ 18 ಲಕ್ಷ ಜನ ಈ ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುವ ನಿರೀಕ್ಷೆ ಇದೆ. ಇಂದಿನ ಈ ಕಾರ್ಯಕ್ರಮ ಏಕಕಾಲಕ್ಕೆ 6 ಸಾವಿರ ಗ್ರಾಮ ಪಂಚಾಯತಗಳಲ್ಲಿ ನಡೆಯುತ್ತಿದೆ. ಈ ಯೋಜನೆಯಿಂದ ಎಲ್ಲಾ ಮಹಿಳೆಯರು ಸ್ವಾವಲಂಭಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಆದ್ದರಿಂದ ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಎಲ್ಲಾ ಮಹಿಳೆಯರು ಪಡೆಯಬೇಕು” ಎಂದರು.

ವಿಧಾನ ಪರಿಷತ್ ಶಾಸಕ ಅರವಿಂದಕುಮಾರ ಅರಳಿ ಅವರು ಮಾತನಾಡಿ, “ಕೆಲವರು ಈ ಯೋಜನೆಯ ಬಗ್ಗೆ ಗೊಂದಲ ಸೃಷ್ಠಿಸುತ್ತಿದ್ದು ಇದರ ಬಗ್ಗೆ ಯಾರು ಕಿವಿ ಕೊಡದೇ ಗೃಹಲಕ್ಷ್ಮೀ ಯೋಜನೆಯಡಿ ಇನ್ನು ಹೆಚ್ಚಿನ ಮಹಿಳೆಯರು ನೋಂದಣಿ ಮಾಡಿಕೊಂಡು ಇದರ ಲಾಭ ಪಡೆಯಬೇಕು, ಮುಂದಿನ ದಿನಗಳಲ್ಲಿ ಮಹಿಳೆಯರು ಪ್ರಗತಿಯ ಜೊತೆಗೆ ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅನ್ನಭಾಗ್ಯ ಯೋಜನೆ: ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಮನವಿ

ಕಾರ್ಯಕ್ರಮದಲ್ಲಿ ಮೈಸೂರಿನಲ್ಲಿ ನಡೆದ ಗೃಹಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮದ ನೇರ ಪ್ರಸಾರವನ್ನು ಸಚಿವರು, ಶಾಸಕರು ಹಾಗೂ ಇತರರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...