ಔರಾದ್‌ ಕ್ಷೇತ್ರದ ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ ಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ

Date:

ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿನ ಎಲ್ಲ ಗ್ರಾಮ ಹಾಗೂ ತಾಂಡಾಗಳಿಗೆ ಸ್ಮಶಾನ ಭೂಮಿಯನ್ನು ಕಲ್ಪಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ. ಚವ್ಹಾಣ ಅವರು ಸರ್ಕಾರಕ್ಕೆ ಆಗ್ರಹಿಸಿದರು.

ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅವರು ಚುಕ್ಕೆ ಗುರುತಿನ ಪ್ರಶ್ನೆ ಕೇಳಿ ವಿಷಯ ಪ್ರಸ್ತಾಪಿಸಿದ ಅವರು, ʼಔರಾದ(ಬಿ) ಕ್ಷೇತ್ರದಲ್ಲಿ 154 ಗ್ರಾಮ, 157 ತಾಂಡಾಗಳಿವೆ. ಕೆಲ ಗ್ರಾಮಗಳು ಹಾಗೂ ತಾಂಡಾಗಳಿಗೆ ಇನ್ನೂ ಸ್ಮಶಾನಭೂಮಿ ಇಲ್ಲ. ಪ್ರತಿ ವರ್ಷ ಗ್ರಾಮ ಸಂಚಾರದ ವೇಳೆ ಜನರಿಂದ ಸ್ಮಶಾನಭೂಮಿ ಕುರಿತಾಗಿ ಅನೇಕ ಮನವಿಗಳು ಬರುತ್ತಿವೆʼ ಎಂದು ಹೇಳಿದರು.

ಸ್ಮಶಾನ ಭೂಮಿ ಕೊರತೆಯಿಂದ ಈ ಹಿಂದೆ ಗಣೇಶಪೂರ(ಯು) ಮತ್ತು ಲಿಂಗಿ ಗ್ರಾಮಗಳಲ್ಲಿ ರಸ್ತೆಯ ಮೇಲೆಯೇ ಅಂತಿಮ ಸಂಸ್ಕಾರ ನಡೆಸಿದ ಘಟನೆಗಳು ನಡೆದಿವೆ. ಇದರಿಂದ ಗಲಾಟೆಗಳು ಹಾಗೂ ಪ್ರಕರಣಗಳು ದಾಖಲಾಗಿವೆ ಎಂದು ಸದನಕ್ಕೆ ಅವರು ಮನವರಿಕೆ ಮಾಡಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಜಮೀನು ಲಭ್ಯವಿರುವ ಕಡೆ ತಕ್ಷಣವೇ ಸ್ಮಶಾನಕ್ಕಾಗಿ ಕಾಯ್ದಿರಿಸಬೇಕು. ಜಮೀನಿಲ್ಲದ ಕಡೆ ಖಾಸಗಿಯವರಿಂದ ಖರೀದಿಸಲು ವ್ಯವಸ್ಥೆ ಮಾಡಬೇಕು. ಸ್ಮಶಾನಗಳಿಗೆ ರಸ್ತೆ, ಚಿತಾಗಾರ, ಕಾಂಪೌಂಡ್, ವಿದ್ಯುತ್ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕೆಂದು ಅವರು ಒತ್ತಾಯಿಸಿದರು.

ಶಾಸಕರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು, ʼಕಳೆದ ಹತ್ತು ವರ್ಷಗಳಿಂದ ಎಲ್ಲ ಸರ್ಕಾರಗಳು ಗ್ರಾಮಗಳಿಗೆ ಸ್ಮಶಾನಭೂಮಿ ಒದಗಿಸಲು ಪ್ರಯತ್ನಿಸುತ್ತಿವೆ. ಹೈಕೋರ್ಟ್ ಕೂಡ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಆದರೂ ಕೆಲವು ಗ್ರಾಮಗಳಿಗೆ ಇನ್ನೂ ಸ್ಮಶಾನಭೂಮಿ ನೀಡಲು ಸಾಧ್ಯವಾಗದೇ ಇರುವುದು ವಿಷಾದನೀಯʼ ಎಂದರು.

ʼಸರ್ಕಾರಿ ಜಮೀನನ್ನು ಬೇರೆ ಉದ್ದೇಶಗಳಿಗೆ ನೀಡುವುದರಿಂದ ಸ್ಮಶಾನ ಭೂಮಿಗೆ ಜಾಗ ಕೊರತೆ ಉಂಟಾಗಿದೆ. ಸ್ಮಶಾನ ಭೂಮಿ ಇಲ್ಲದ ಗ್ರಾಮಗಳಲ್ಲಿ ಖಾಸಗಿ ಜಮೀನನ್ನು ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖರೀದಿಸುವ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಸ್ಮಶಾನಭೂಮಿ ಖರೀದಿಗೆ 58 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆʼ ಎಂದು ಮಾಹಿತಿ ನೀಡಿದರು.

ʼಔರಾದ(ಬಿ) ಕ್ಷೇತ್ರದಲ್ಲಿ 154 ವಸತಿ ಪ್ರದೇಶಗಳ ಪೈಕಿ 9 ಪ್ರದೇಶಗಳಲ್ಲಿ ಸ್ಮಶಾನಭೂಮಿ ಇಲ್ಲ ಎಂಬ ಮಾಹಿತಿ ದೊರೆತಿದೆ. ಈ ಪೈಕಿ ಎರಡು ಗ್ರಾಮಗಳಲ್ಲಿ ಸರ್ಕಾರಿ ಜಮೀನಿದ್ದು, ವಾರದೊಳಗೆ ಸ್ಮಶಾನಕ್ಕೆ ಕಾಯ್ದಿರಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಉಳಿದ ಕಡೆಗಳಲ್ಲಿ ಪಕ್ಕದ ಊರುಗಳಲ್ಲಿ ಜಮೀನು ಕಾಯ್ದಿರಿಸಲು 15 ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕ ಸ್ಮಶಾನಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಗ್ರಾಮ ಪಂಚಾಯಿತಿಗಳ ಮೂಲಕ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆʼ ಎಂದು ಭರವಸೆ ನೀಡಿದರು.

ಈ ವಿಷಯದ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ, ರಾಜ್ಯದಲ್ಲಿ ಸ್ಮಶಾನಭೂಮಿಗೆ ಖರ್ಚಾಗಿರುವ 58 ಕೋಟಿ ಎಲ್ಲ ತಾಲ್ಲೂಕುಗಳಿಗೆ ಸಾಕಾಗುವುದಿಲ್ಲ. ಸರ್ಕಾರಿ ಜಮೀನು ನೀಡುವಾಗ ಶಾಲೆ, ಅಂಗನವಾಡಿ ಹಾಗೂ ಸ್ಮಶಾನಭೂಮಿಗೆ ಮೊದಲ ಆದ್ಯತೆ ನೀಡುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಇದೇ ವೇಳೆ ಶಾಸಕ ಪ್ರಭು ಚವ್ಹಾಣ ಅವರು ಬೀದರ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾಂಡಾಗಳಿದ್ದು, ಔರಾದ ಕ್ಷೇತ್ರದಲ್ಲಿ 157 ತಾಂಡಾಗಳಿವೆ. ಈ ಪೈಕಿ 30 ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗಿದೆ. ಉಳಿದ ತಾಂಡಾಗಳನ್ನೂ ಮಾನದಂಡಗಳ ಅನ್ವಯ ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು. ಗೋಮಾಳ ಸೇರಿದಂತೆ ಸರ್ಕಾರಿ ಜಮೀನುಗಳ ಅತಿಕ್ರಮಣವನ್ನು ನಿಯಂತ್ರಿಸಬೇಕು ಎಂದರು. ಇದಕ್ಕೆ ʼತಾಂಡಾಗಳ ಪಟ್ಟಿ ಒದಗಿಸಿದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆʼ ಎಂದು ಸಚಿವರು ತಿಳಿಸಿದರು.

ಸ್ಮಶಾನ ಭೂಮಿಯಿಲ್ಲದ ಯಾವ ಊರು,ತಾಂಡಾ :

ಔರಾದ (ಬಿ) ವಿಧಾನ ಸಭಾ ಕ್ಷೇತ್ರದ ಮದನೂರ, ರಂಡ್ಯಾಳ, ಜೀರ್ಗಾ(ಕೆ), ಮೇಡಪಳ್ಳಿ, ವಡಗಾಂವ, ಸಂಗನಾಳ, ಅಲ್ಲಾಪೂರ, ಸುಂಕನಾಳ, ಜೀರ್ಗಾ (ಬಿ) ಗ್ರಾಮಗಳಲ್ಲಿ ಸ್ಮಶಾನಕ್ಕಾಗಿ ಸರ್ಕಾರಿ ಜಮೀನು ಲಭ್ಯವಿರುವುದಿಲ್ಲ. ಜಮೀನು ಲಭ್ಯವಿದ್ದ ಕಡೆ ಪರಿಶೀಲಿಸಿ ಮಂಜೂರು ಮಾಡಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ಅವರು ಉತ್ತರಿಸಿದರು.

ಇದನ್ನೂ ಓದಿ : ಬೀದರ | ಬಸವಣ್ಣ-ಅಕ್ಕಮಹಾದೇವಿ ಅವಹೇಳನ : ಕ್ರಮಕ್ಕೆ ಆಗ್ರಹ

ಈಗಾಗಲೇ ಗುರುತಿಸಿದ ಸ್ಮಶಾನ ಭೂಮಿಗಳ ಅಭಿವೃದ್ಧಿಗೆ ಪಂಚಾಯತ್ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿ ಕಾಂಪೌಂಡ್, ರಸ್ತೆ, ನೀರು, ಗಿಡಮರಗಳನ್ನು ಬೆಳೆಸಲು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...