ಬೀದರ್‌ | ರಾಜಕೀಯ ಅಧಿಕಾರಕ್ಕಾಗಿ ಸಂಘ ಪರಿವಾರ ಕೋಮುವಾದ ಬಿತ್ತುತ್ತಿದೆ: ಅಂಕುಶ್‌ ಗೋಖಲೆ

Date:

ದೇಶದಲ್ಲಿ ಸಂಘ ಪರಿವಾರವು ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ರಾಜಕೀಯ ಅಧಿಕಾರ ಮತ್ತು ಆರ್ಥಿಕ ಸಂಪತ್ತನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ಬಹುಜನರಿಗೆ ಗುಲಾಮರನ್ನಾಗಿ ಮಾಡಿದ್ದಾರೆ ಎಂದು ಜನರ ಧ್ವನಿ ಸಂಘಟನೆ ಸಂಸ್ಥಾಪಕ ರಾಜಾಧ್ಯಕ್ಷ ಅಂಕುಶ್ ಗೋಖಲೆ ಹೇಳಿದರು.

ಬಸವಕಲ್ಯಾಣ ಹೊರವಲಯದ ಬಿಕೆಡಿಬಿ ಸಭಾಭವನದಲ್ಲಿ ಜನರ ಧ್ವನಿ ಸಂಘಟನೆ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಬೀದರ ಜಿಲ್ಲೆಯಲ್ಲಿ ಪಾಟೀಲ್, ಖಂಡ್ರೆ , ನಾಗಮಾರಪಳ್ಳಿ ಹಾಗೂ ಖೂಬಾ ಪರಿವಾರಗಳು ಜಿಲ್ಲೆಯ ಎಲ್ಲಾ ರೀತಿಯ ರಾಜಕೀಯ ಅಧಿಕಾರ ತಮ್ಮ ಹಿಡಿತದಲ್ಲಿಟ್ಟುಕೊಂಡು ಜಿಲ್ಲೆಯನ್ನು ಲೂಟಿ ಹೊಡೆಯುತ್ತಿದ್ದಾರೆ. ತಮ್ಮ ಕಟುಂಬದ ಸದಸ್ಯರಿಗೆ ರಾಜಕೀಯವಾಗಿ ಬೆಳೆಯಲು ಜಿಲ್ಲೆಯ ಬಹುಜನರಿಗೆ ಗುಲಾಮರಂತೆ ಬಳಸಿಕೊಳ್ಳುತ್ತಿದ್ದಾರೆ. ಆದ್ದರಿಂದ ದೇಶದ ಸಂಘ ಪರಿವಾರದ ವಿರುದ್ಧ ಮತ್ತು ಜಿಲ್ಲೆಯ ಪರಿವಾರ ಸಂಘದ ವಿರುದ್ಧ ನಾವು ಹೋರಾಡಬೇಕಾಗಿದೆ. ಜನರ ಧ್ವನಿ ಸಂಘಟನೆ ಮೂಲಕ ಜಿಲ್ಲೆಯ ಪ್ರತಿ ಹಳ್ಳಿಯ ಯುವಕರಿಗೆ ಬುದ್ಧ, ಬಸವ, ಫುಲೆ, ರಾಹು, ಅಂಬೇಡ್ಕರ ಅವರ ವಿಚಾರಧಾರೆ ತಲುಪಿಸಲು ಮುಂದಾಗಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರ ಧ್ವನಿ ಸಂಘಟನೆ ಬೀದರ್ ಜಿಲ್ಲಾಧ್ಯಕ್ಷ ರಾಜಕುಮಾರ ಸಿಂಧೆ ಮಾತನಾಡಿ, “ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ನೂರಾರು ಸಂಘಟನೆಗಳು ಬರೀ ಸಂಘಟನೆಗಳಾಗಿಯೇ ಉಳಿದಿವೆ. ಆದರೆ, ಇಲ್ಲಿಯವರೆಗೆ ಬಾಬಾಸಾಹೇಬರ ಆಶಯದಂತೆ ರಾಜಕೀಯ ಅಧಿಕಾರ ದಕ್ಕಿಸಿಕೊಳ್ಳುವ ಪ್ರಯತ್ನ ಯಾವುದೇ ಸಂಘಟನೆಗಳು ಮಾಡಿಲಿಲ್ಲ. ಹೀಗಾಗಿ ನಮ್ಮ ಜನರ ಧ್ವನಿ ಸಂಘಟನೆಯು ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ರಾಜಕೀಯ ಶಕ್ತಿಯಾಗಿ ಹೊರಹುಮ್ಮಲಿದೆ” ಎಂದರು.

ತಾಲೂಕು ಪದಾಧಿಕಾರಿಗಳ ನೇಮಕ:

‌ಇದೇ ಸಂದರ್ಭದಲ್ಲಿ ಜನರ ಧ್ವನಿ ಸಂಘಟನೆಯ ಬಸವಕಲ್ಯಾಣ ತಾಲೂಕು ಪದಾಧಿಕಾರಿಗಳ ಸಮಿತಿ ರಚನೆ ಮಾಡಲಾಯಿತು. ಮಾರುತಿ ಕಾಂಬಳೆ (ಅಧ್ಯಕ್ಷ), ರತ್ನದೀಪ ಗಾಯಕವಾಡ (ಉಪಾಧ್ಯಕ್ಷ), ಸೋಮನಾಥ ಮೂಡಬಿಕರ್ (ಪ್ರಧಾನ ಕಾರ್ಯದರ್ಶಿ), ಅವಿನಾಶ ಫುಲಬನೆ (ಕಾರ್ಯದರ್ಶಿ) ಇವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಧ್ಯಕ್ಷ ಅಂಕುಶ ಗೋಖಲೆ, ಜಿಲ್ಲಾಧ್ಯಕ್ಷ ರಾಜಕುಮಾರ ಸಿಂಧೆ‌  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ಧೀರಾ? ಬೀದರ್‌ | ಕನ್ನಡ ಭಾಷೆ ಶ್ರೀಮಂತಿಕೆಯ ಶ್ರೇಯಸ್ಸು ಶರಣರಿಗೆ ಸಲ್ಲುತ್ತದೆ : ಸುರೇಶ ಚನ್ನಶೆಟ್ಟಿ

ಕಾರ್ಯಕ್ರಮದಲ್ಲಿ ಜನರ ಧ್ವನಿ ಸಂಘಟನೆಯ ಹಿರಿಯ ಮುಖಂಡರಾದ ತಿಪ್ಪಣ್ಣ ವಾಲಿ, ಜಮೀಲ್ ಅಹ್ಮದ ಖಾನ್‌, ಜಿಲ್ಲಾ ಉಪಾಧ್ಯಕ್ಷ ಅರವಿಂದ ಮಾಶೆಟ್ಟಿ, ಬೀದರ ತಾಲೂಕಾ ಅಧ್ಯಕ್ಷ ರವಿ ಕೋಟೆ‌ರ್, ಹುಮನಾಬಾದ ತಾಲೂಕಾ ಪ್ರಧಾನ ಕಾರ್ಯದರ್ಶಿ ಪ್ರಭು, ಸಕರೆ ಹಾಗೂ ಸಂಘಟನೆಯ ಪ್ರಮುಖರಾದ ಅಶೋಕ ಪಾಂಡೆ, ಭರತ ಮೋಳಕೆರಾ, ಕುಮಾರ ಗಾಯಕವಾಡ, ಅಕ್ಷಯ ಗಾಯಕವಾಡ, ದೀಪಕ ಶಿಂದೆ, ಕೃಷ್ಣ ವಾಡೇಕರ, ಸುಮೀತ ಕಾಂಬಳೆ, ಅನೀಶ, ಆಶೀಶ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...