ಬೀದರ್‌ | ಶರಣರ ಕಾಯಕ ಸಿದ್ಧಾಂತ ಬದುಕಿಗೆ ಪ್ರೇರಣೆ: ಮಹೇಶ ಘಾಳೆ

Date:

ಸಮಾಜದಲ್ಲಿ ಪ್ರಾಮಾಣಿಕತೆ, ಕಾಯಕತತ್ವ ಹಾಗೂ ನಿಷ್ಠೆಯಿಂದ ಸೇವೆಗೈಯುವರಿಗೆ ಜನರು ಪ್ರೇರಣೆ ನೀಡುವುದು ಅವಶ್ಯಕತೆಯಿದೆ ಎಂದು ಜೆಸ್ಕಾಂ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ ಘಾಳೆ ನುಡಿದರು.

ಬೀದರ್ ನಗರದ ಡಾ.ಚನ್ನಬಸವಪಟ್ಟದ್ದೇವರ ಪ್ರಸಾದ ನಿಲಯದಲ್ಲಿ ನಡೆದ 157ನೇಯ ತಿಂಗಳ ಅನುಭವ ಮಂಟಪ ಕಾರ್ಯಕ್ರಮ ಹಾಗೂ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಭಾಲ್ಕಿ ಹಿರೇಮಠ ಸಂಸ್ಥಾನದ ಡಾ. ಬವಸಲಿಂಗಪಟ್ಟದ್ದೇವರು ಈ ಭಾಗದಲ್ಲಿ ಸಂಸ್ಕಾರಯುತ ಶಿಕ್ಷಣ ಕೊಡುವ ಜೊತೆಗೆ ಮಾನವೀಯ ಮೌಲ್ಯದ ಶಾಲಾ ಕಾಲೇಜು ಪ್ರಾರಂಬಿಸಿದ್ದು ಪ್ರಶಂಸನೀಯವಾಗಿದೆ. ಮಹಿಳೆಯರಿಗೆ ಉತ್ತಮ ಶಿಕ್ಷಣ ನೀಡಿದರೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ. ಬಸವಾದಿ ಶರಣರ ಮೌಲ್ಯದಾಯಕ ಸಿದ್ಧಾಂತ, ಕಾಯಕ, ದಾಸೋಹ, ಏಕದೇವೋಪಾಸನೆಗಳು ಮಾನವನ ಜೀವನದಲ್ಲಿ ಸುಖ, ಶಾಂತಿ ಸಮೃದ್ಧಿಯನ್ನು ನೀಡುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿವ್ಯ ಸಾನಿಧ್ಯ ವಹಿಸಿದ ಮಹಾಲಿಂಗ ಸ್ವಾಮಿಜಿಗಳು ಆಶೀರ್ವಚನ ನೀಡಿ, “ಮಾನವನ ಮನಸ್ಸು ಬೆಳಗಬೇಕಾದರೆ ಅವನಲ್ಲಿರುವ ಅಜ್ಞಾನ, ಅಂಧಕಾರ ಅರಿಷಡ್ವರ್ಗಗಳನ್ನು ಸುಟ್ಟು ಹಾಕಬೇಕಾಗುತ್ತದೆ. 12ನೇ ಶತಮಾನದ 770 ಅಮರಗಣಂಗಳು ಮನದ ಮಲೀನತೆಯನ್ನು ಅಳಿಸಿ ಜ್ಞಾನದ ಜ್ಯೋತಿ ಬೆಳಗುವಲ್ಲಿ ಸತ್ಸಂಗ ಅನುಭಾವದ ಚಿಂತನೆಯನ್ನು ನಡೆಸಿ ನಿರಂತರವಾಗಿ ಇಷ್ಟಲಿಂಗ ಶಿವಯೋಗದಲ್ಲಿ ತೊಡಗಿಸಿಕೊಂಡಿದ್ದರು. ಪ್ರಯುಕ್ತ ಕಲ್ಯಾಣ ಭೂಮಿ ಪವಿತ್ರ ಭೂಮಿಯಾಗಿದೆ” ಎಂದರು.

ಹಿರಿಯ ಸಾಹಿತಿ ಪುಣ್ಯವತಿ ವಿಸಾಜಿ ಅವರು ಕರ್ನಾಟಕ ರಾಜ್ಯೋತ್ಸವ ಕುರಿತು ಮಾತನಾಡಿ,”ಜಗತ್ತಿನ ಇತಿಹಾಸದಲ್ಲಿ ಭಾರತೀಯ ಸಂಸ್ಕೃತಿ ಪರಂಪರೆ, ಸಂಸ್ಕಾರ ಶ್ರೇಷ್ಠವಾದದ್ದು. ಕನ್ನಡ ಭಾಷೆಯು ಶರಣ ಸಂಸ್ಕೃತಿಯಿಂದ ಕೂಡಿದ್ದು, ವಚನ ಸಾಹಿತ್ಯವು ಕನ್ನಡ ಸಾಹಿತ್ಯದಲ್ಲಿ ಶ್ರೀಮಂತ ಸಾಹಿತ್ಯವಾಗಿದೆ. ಬಸವಾದಿ ಶರಣರು ನುಡಿದು ನಡೆದು ತೋರಿಸಿದ ತತ್ವವಾಗಿದೆ, ಕನ್ನಡ ಭಾಷೆಯು ಸುಲಿದ ಬಾಳೆಯಂತಿದೆ. ಕನ್ನಡ ಭೂಮಿ ಪವಿತ್ರ ನದಿ ಋಷಿ, ಮುನಿ, ಸಂತ, ಶರಣರ ನಡೆದಾಡಿದ ಪುಣ್ಯ ಭೂಮಿಯಾಗಿದೆ” ಎಂದು ನುಡಿದರು.

ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಸುವರ್ಣಾ ಚಿಮಕೋಡೆ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು. ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯದ ವಿದ್ಯಾರ್ಥಿನಿ ಮಾಣಿಕೇಶ್ವರಿ ಗುರುವಿನ ಮಹತ್ವದ ಬಗ್ಗೆ ಮತ್ತು ಸ್ನೇಹಾ ದಿಗಂಬರ ಪಂಚಾಚಾರ ಕುರಿತು ಮಾತನಾಡಿದರು.

ಪ್ರಸಾದ ನಿಲಯದ ಕಾರ್ಯದರ್ಶಿ ಪ್ರೊ. ಎಸ್. ಬಿ. ಬಿರಾದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ನಾಗಶೆಟ್ಟಿ ಜೊತೆಪ್ಪನೋರ, ದಾಸೋಹಿಗಳಾದ ಸನೀತಾ ಗುಂಡಪ್ಪ ಮತ್ತು ಅಂಬಿಕಾ ಸಂಜುಕುಮಾರ ಮಡಿವಾಳರು ಬಸವಗುರುವಿನ ಪೂಜೆ ನೆರವೇರಿಸಿದರು.

ಈ ಸುದ್ದಿ ಓದಿದ್ದೀರಾ? ʼಈ ದಿನʼ ವಿಶೇಷ | ಇಲ್ಲ, ಇಲ್ಲ, ನೆಹರೂ ನಿವೃತ್ತರಾಗುವುದಿಲ್ಲ…

ಕಾರ್ಯಕ್ರಮದಲ್ಲಿ ಪ್ರಮುಖರಾದ ಸಂಗ್ರಾಮಪ್ಪ ಬಿರಾದಾರ ಗುರುನಾಥ ಬಿರಾದಾರ, ಭೀಮಾಶಂಕರ, ದಶಪ್ಪ, ಶ್ರೀಕಾಂತ ಸ್ವಾಮಿ, ಡಾ. ವೈಜಿನಾಥ ಬಿರಾದಾರ, ಸಂಜೀವಕುಮಾರ ಅತಿವಾಳೆ, ಮಲ್ಲಿಕಾರ್ಜುನ, ಯೋಗೇಂದ್ರ ಯದಲಾಪುರೆ, ಮೀನಾಕ್ಷಿ ಪಾಟೀಲ, ಲಕ್ಷಿö್ಮ ಬಿರಾದಾರ, ಲಕ್ಷಿö್ಮಬಾಯಿ ಮಾಳಗೆ, ಮಾಲಾಶ್ರೀ, ಭಾರತಿ ಪಾಟೀಲ, ಸವಿತಾ ಗಂಧಿಗುಡೆ, ಮಹಾನಂದಾ ಸ್ವಾಮಿ, ಕಸ್ತೂರಿಬಾಯಿ ಬಿರಾದಾರ, ಮಹಾದೇವಿ ಬಿರಾದಾರ, ಮುಂತಾದವರು ಭಾಗವಹಿಸಿದರು. ವಚನಶ್ರೀ ಚನ್ನಬಸಪ್ಪ ನೌಬಾದೆ ಮತ್ತು ಚನ್ನಬಸಪ್ಪ ಬಿಕ್ಲೆ ವಚನ ಸಂಗೀತ ನಡೆಸಿಕೊಟ್ಟರು. ಸಂಗ್ರಾಮ ಎಂಗಳೆ ಸ್ವಾಗತಿಸಿದರು, ಉಮಾಕಾಂತ ಮೀಸೆ ನಿರೂಪಿಸಿದರು, ಪ್ರೇಮಾ ಮುಚಳಂಬೆ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...