ಬೀದರ್ | ಎಸ್‌ಬಿಐ ಭದ್ರತಾ ಸಂಸ್ಥೆ ಸಿಬ್ಬಂದಿ ಮೇಲೆ ಗುಂಡಿನ ದಾಳಿ; ಓರ್ವ ಸಾವು, 93 ಲಕ್ಷ ದರೋಡೆ

Date:

ನಗರದ ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಹೊಂದಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭದ್ರತಾ ಸಂಸ್ಥೆ ಸಿಬ್ಬಂದಿ ಮೇಲೆ ದರೋಡೆಕೋರರು ಕಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬರು ತೀರ್ವವಾಗಿ ಗಾಯಗೊಂಡಿದ್ದಾರೆ. ದರೋಡೆಕೋರರು 93 ಲಕ್ಷ ರೂಪಾಯಿ ದೋಚಿರುವ ಮಾಹಿತಿ ಇದೆ. ಘಟನೆಯ ಭೀಕರ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಮೃತ ವ್ಯಕ್ತಿಯನ್ನು ಗಿರೀಶ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ವಿವರ ಇನ್ನಷ್ಟೇ ತಿಳಿಯಬೇಕಿದೆ. ಬ್ಯಾಂಕಿನ ಕಚೇರಿ ಎದುರು ರಕ್ತಸಿಕ್ತ ಸ್ಥಿತಿಯಲ್ಲಿ ಅವರ ದೇಹ ಬಿದ್ದಿದೆ. ಘಟನೆಯ ವಿಷಯ ತಿಳಿದು ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ್ದ ನೂರಾರು ಜನ ಅಲ್ಲಿ ಜಮಾಯಿಸಿದರು. ಇಡೀ ಪ್ರದೇಶದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಜನರನ್ನು ಚದುರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯವರು ಗಳಿಸಿದ ಡಿಗ್ರಿಗಳು ಮತ್ತು ಮಾಹಿತಿ ಹಕ್ಕು ಎಂಬ ತುಕ್ಕು ಹಿಡಿದ ಹತಾರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಥೆಯ ಸಿಬ್ಬಂದಿ ಎಂದಿನಂತೆ ಅವರ ವಾಹನದಲ್ಲಿ ಹಣದ ಸಮೇತ ಬ್ಯಾಂಕಿಗೆ ಬಂದಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತರು ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಹಣ ಕೊಡದಿದ್ದಾಗ ಕಾರದ ಪುಡಿ ಎರಚಿ, ಬಳಿಕ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...