ಬೀದರ್‌ನಲ್ಲಿ ʼವಿವಾಹ ಪೂರ್ವ ಸಂವಾದʼ ಕೇಂದ್ರ ಆರಂಭ

Date:

ಬೀದರ್ ನಗರದ ಬ್ರಿಮ್ಸ್ ಬೋಧಕ ಆಸ್ಪತ್ರೆ ಆವರಣದಲ್ಲಿ ರಾಜ್ಯದ ಮೊದಲ ‘ತೆರೆ ಮೇರೆ ಸಪ್ನೆ’ ವಿವಾಹ ಪೂರ್ವ ಸಂವಾದ ಆರಂಭವಾಗಿದೆ.

ಕೇಂದ್ರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ʼಕೇಂದ್ರವು ವಿವಾಹದ ಬಗೆಗಿನ ಯುವಕ, ಯುವತಿಯರ ಅನೇಕ ಸಂದೇಹಗಳನ್ನು ನಿವಾರಣೆ ಮಾಡಲಿದೆ. ಪ್ರೀತಿ, ವಿಶ್ವಾಸದ ದಾಂಪತ್ಯ ಜೀವನ ನಡೆಸಲು ಸಹಕಾರಿಯಾಗಲಿದೆ. ಕೇಂದ್ರ ಸ್ಥಾಪಿಸಿದ ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆಯ ಕಾರ್ಯ ಶ್ಲಾಘನೀಯ. ಕೇಂದ್ರಕ್ಕೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕುʼ ಎಂದು ಸೂಚಿಸಿದರು.

ರಾಷ್ಟ್ರೀಯ ಮಹಿಳಾ ಆಯೋಗದ ಮಾರ್ಗದರ್ಶನದಲ್ಲಿ ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆ ಸಹಯೋಗದಲ್ಲಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಹಕಾರ ನೀಡಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿಶಾ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿ, ʼಕೇಂದ್ರವು ವಿವಾಹ ಪೂರ್ವದಲ್ಲೇ ಯುವಜನರಿಗೆ ದಾಂಪತ್ಯದ ಮಹತ್ವ ಮನವರಿಕೆ ಮಾಡಲಿದೆ. ಹೊಂದಾಣಿಕೆಯ ಗೌರವಯುತ ದಾಂಪತ್ಯದ ಸೂತ್ರಗಳನ್ನು ಹೇಳಿಕೊಡಲಿದೆ. ಮದುವೆ ನಂತರದ ಗೊಂದಲ, ಮಹಿಳಾ ದೌರ್ಜನ್ಯ ನಿವಾರಣೆ, ವಿವಾಹ ವಿಚ್ಛೇದನಗಳ ನಿಯಂತ್ರಣಕ್ಕೆ ನೆರವಾಗಲಿದೆʼ ಎಂದು ಹೇಳಿದರು.

ʼಕೇಂದ್ರದಲ್ಲಿ ಇಬ್ಬರು ಆಪ್ತ ಸಮಾಲೋಚಕರು ಇರಲಿದ್ದಾರೆ. ಯುವಕ, ಯುವತಿಯರಿಗೆ ಪ್ರತ್ಯೇಕ, ನಂತರ ಪಾಲಕರೊಂದಿಗೆ ಜಂಟಿಯಾಗಿ ಆಪ್ತ ಸಮಾಲೋಚನೆ ನಡೆಸಲಿದ್ದಾರೆ. ಮದುವೆಗೆ ಸಂಬಂಧಿಸಿದ ಸಂದೇಹ ನಿವಾರಿಸಲಿದ್ದಾರೆ. ಉತ್ತಮ ದಾಂಪತ್ಯಕ್ಕೆ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆʼ ಎಂದು ತಿಳಿಸಿದರು.

ʼಯುವಕ, ಯುವತಿಯರಿಗೆ ವಿವಾಹ ಪೂರ್ವ ಆಪ್ತ ಸಮಾಲೋಚನೆ ಅವಶ್ಯಕವಾಗಿದೆಯೇ ಹೊರತು ಪ್ರಿ ವೆಡ್ಡಿಂಗ್ ಶೂಟ್ ಅಲ್ಲ. ಪ್ರಿ ವೆಡ್ಡಿಂಗ್ ಶೂಟ್‍ನಿಂದ ದುಂದು ವೆಚ್ಚವಾಗುತ್ತಿದೆ. ಅದರ ನಂತರವೂ ಅನೇಕ ಮದುವೆಗಳು ಮುರಿದು ಬಿದ್ದಿವೆ. ಕಾರಣ, ಅಪ್ತ ಸಮಾಲೋಚನೆಯ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

WhatsApp Image 2026 01 01 at 10.40.02 PM
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಕೇಂದ್ರ ಉದ್ಘಾಟಿಸಿದರು.

ʼರಾಜ್ಯದಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಸುಮಾರು 2.21 ಲಕ್ಷ ವಿವಾಹ ವಿಚ್ಛೇದನ ಪ್ರಕರಣಗಳು ನ್ಯಾಯಾಲಯಗಳ ಮುಂದಿವೆ. ಇದು, ಆರೋಗ್ಯಕರ ಬೆಳವಣಿಗೆ ಅಲ್ಲ. ದೇಶದ ಸಾಮಾಜಿಕ, ಆರ್ಥಿಕ ಹಿನ್ನೆಡೆಗೆ ಕಾರಣವಾಗಲಿದೆ. ಆದರ್ಶ ದಾಂಪತ್ಯದ ಸೂತ್ರ ತಿಳಿಸುವ ಹಾಗೂ ವಿವಾಹ ವಿಚ್ಛೇದನಗಳನ್ನು ನಿಯಂತ್ರಿಸುವ ಕೆಲಸ ಆಗಬೇಕಿದೆ. ಈ ದಿಸೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆʼ ಎದು ತಿಳಿಸಿದರು.

ಕೇಂದ್ರದ ವಿವಾಹಪೂರ್ವ ಸಂವಾದ ಪುಸ್ತಕವನ್ನು ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ನಾಗಭೂಷಣ ಕಮಠಾಣೆ ಬಿಡುಗಡೆ ಮಾಡಿದರು.ಬೇಮಳಖೇಡ ಹಿರೇಮಠ ಸಂಸ್ಥಾನದ ಡಾ. ರಾಜಶೇಖರ ಶಿವಾಚಾರ್ಯ ಸಾನಿಧ್ಯ ವಹಿಸಿದ್ದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸನ್ಮುಕಯ್ಯ ಬಿ. ಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಧರ ಎಂ.ಎಸ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಂ.ಡಿ. ಅಹೆಮದೊದ್ದೀನ್, ಭಾರತೀಯ ವೈದ್ಯಕೀಯ ಸಂಘದ ಬೀದರ್ ಘಟಕದ ಅಧ್ಯಕ್ಷ ಡಾ. ವಿಜಯ ಬಲ್ಲೂರಕರ್, ಮಹಾನಗರ ಪಾಲಿಕೆಯ ಸದಸ್ಯೆ ಉಲ್ಲಾಸಿನಿ ವಿಕ್ರಮ ಮುದಾಳೆ, ಮೇರಾ ಯುವ ಭಾರತ್‍ನ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ, ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ. ಬಿ.ವಿ. ಶಿವಪ್ರಕಾಶ್ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನ : ಮಹೇಶ ಗೊರನಾಳಕರ್

ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಅಬ್ದುಲ್ ಸತ್ತಾರ್, ಮಹಾನಗರ ಪಾಲಿಕೆ ಸದಸ್ಯೆ ಜ್ಯೋತಿ ಶಿವರಾಜ ಗುಮ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಶ್ರೀಕಾಂತ ವೈರಾಗೆ, ಉಪ ನೋಂದಣಾಧಿಕಾರಿ ಹಾಗೂ ವಿವಾಹ ನೋಂದಣಾಧಿಕಾರಿ ಪ್ರಿಯಂಕಾ ಕೆ.ಪಾಟೀಲ, ಸಂವಾದ ಕೇಂದ್ರದ ಆಡಳಿತಾಧಿಕಾರಿ ಸಂಗೀತಾ ಪಾಟೀಲ, ಸಮಾಲೋಚಕಿ ಚೆನ್ನಾಂಬಿಕಾ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನಿರ್ದೇಶಕ ಪ್ರವೀಣ್ ಸ್ವಾಮಿ, ನಾಗರಾಜ ಮಠ, ಪ್ರಮುಖರಾದ ಓಂಪ್ರಕಾಶ ರೊಟ್ಟೆ, ವರದಯ್ಯ ಸ್ವಾಮಿ, ಮಹೇಶ ಪಾಟೀಲ, ಶಿವಶಂಕರ ಬೆಳಮಗಿ, ಚಂದ್ರಕಾಂತ ಚೆನ್ನಳ್ಳಿ, ಅಂಬರೀಷ್ ಕಮಠಾಣೆ, ನಾಗಯ್ಯ ಸ್ವಾಮಿ, ಶ್ರೀಕಾಂತ ಹೊನ್ನಿಕೇರಿ ಮತ್ತಿತರರು ಇದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಹಿಳಾ ಅಧಿಕಾರಿ ರೂಪಾ ಸ್ವಾಗತಿಸಿದರು. ಬಿ.ವಿ.ಬಿ. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರೇಣುಕಾದೇವಿ ಮಳ್ಳಿ ನಿರೂಪಿಸಿದರು. ಸಂವಾದ ಕೇಂದ್ರದ ಸಂಯೋಜಕಿ ಕಾವೇರಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...