ಬೀದರ್‌ | ಕೇಂದ್ರ ಸರ್ಕಾರ ಕೊಲೆಗಡುಕರಿಗೆ ವಿಧಿಸುವ ಕಾನೂನು ವಾಹನ ಚಾಲಕರ ಮೇಲೆ ಹೇರುತ್ತಿದೆ

Date:

ರಸ್ತೆ ಅಪಘಾತ ಸಂಭವಿಸಿದ ಬಳಿಕ ಪರಾರಿಯಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾಹನ ಚಾಲಕನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸುವುದಕ್ಕೆ ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಹೊಸ ಕಾನೂನು ವಿರೋಧಿಸಿ ಬೀದರ್‌ ನಲ್ಲಿ ವಾಹನ ಚಾಲಕರ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.

ಕರ್ನಾಟಕ ಚಾಲಕರ ಒಕ್ಕೂಟ ಹಾಗೂ ಜಿಲ್ಲಾ ಲಾರಿ ಚಾಲಕರು ಮತ್ತು ಮಜ್ದೂರ್‌ ಅಸೋಸಿಯೇಷನ್ ಪದಾಧಿಕಾರಿಗಳು ನಗರದ ಗಾಂಧಿ ಗಂಜ್‌ ದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

“ಕೇಂದ್ರ ಸರ್ಕಾರ ಅವೈಜ್ಞಾನಿಕವಾದ ಕಾನೂನು ಜಾರಿಗೆ ತರಲು ಹೊರಟಿದೆ,ಕಳೆದ 25ರಂದು ಸಂಸತ್ತಿನಲ್ಲಿ ಒಪ್ಪಿಗೆ ಪಡೆದು ರಾಷ್ಟ್ರಪತಿಗಳ ಅಂಕಿತಕ್ಕೆ ಕಳಿಸಲಾಗಿದೆ. ಚಾಲಕ ರಸ್ತೆಯಲ್ಲಿ ಅಪಘಾತ ಮಾಡಿದಂತಹ ಸಂದರ್ಭದಲ್ಲಿ ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ರಸ್ತೆಯಲ್ಲಿ ಬಿಟ್ಟು ಹೋಗುವ ಹಾಗಿಲ್ಲ, ಸ್ಥಳದಲ್ಲೇ ಇದ್ದು ಆಸ್ಪತ್ರೆಗೆ ಸಾಗಿಸಬೇಕು. ಮಹಜರು ಮಾಡುವ ಸಂದರ್ಭದಲ್ಲಿ ಸ್ಥಳದಲ್ಲಿ ಇರಬೇಕು. ಚಾಲಕನು ಅಲ್ಲಿಂದ ಪರಾರಿಯಾದರೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ನೂತನ ಕಾನೂನು ಜಾರಿಗೆ ತರುವುದು ಖಂಡನೀಯ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಪಘಾತ ನಡೆದ ವೇಳೆ ಸ್ಥಳಿಯರು ಮತ್ತು ಸಂಬಂಧಿಕರು ಎಷ್ಟೋ ಚಾಲಕರನ್ನು ಕೊಂದಿರುವ ಉದಾಹರಣೆಗಳಿವೆ. ಹೀಗಾದರೆ ಚಾಲಕರ ಜೀವಕ್ಕೆ ಹೊಣೆಗಾರರು ಯಾರಾಗುತ್ತಾರೆ. ಕೆಂದ್ರ ಸರ್ಕಾರ ಈ ಹೊಣೆಯನ್ನು ಹೊರಲು ಸಾಧ್ಯವೇ. ಕೇಂದ್ರ ಸರ್ಕಾರ ಕೊಲೆಗಡುಕರಿಗೆ ವಿಧಿಸುವಂತಹ ಕಾನೂನನ್ನು ಚಾಲಕರ ಮೇಲೆ ಹೇರಲು ಹೊರಟಿದೆ, ಚಾಲಕರನ್ನು ರಸ್ತೆಯಲ್ಲಿ ಕೊಲ್ಲಿಸುವ ಪ್ರಯತ್ನ ನಡೆಸಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಇರಾನ್‌ನಲ್ಲಿ ಬಾಂಬ್ ಸ್ಪೋಟ: 103 ಕ್ಕೂ ಅಧಿಕ ಮಂದಿ ಸಾವು

ಚಾಲಕರ ವಿರುದ್ದ ಜಾರಿಗೆ ತರಲು ಹೊರಟಿದ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತರಬಾರದು. ಈಗಾಗಲೇ ಸಾವಿರಾರು ಚಾಲಕರು ಚಾಲಕರು ಕೆಲಸ ಬಿಟ್ಟು ಮನೆಯಲ್ಲೇ ಕೂತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದ ಸಾರಿಗೆ ಸಚಿವರು ಚಾಲಕರಿಗೆ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿದರು.

ವರದಿ ಮಾಹಿತಿ : ರೇವಣಸಿದ್ದ ಹಡಪದ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...