ಬೀದರ್‌ | ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಸಿಪಿಐ, ಎಐಕೆಎಸ್ ಆಗ್ರಹ

Date:

ಕಮಲನಗರ ತಾಲೂಕಿನ ಬಗರ್‌ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು.

ಕಮಲನಗರ ಪಟ್ಟಣದ ಮುಖ್ಯ ರಸ್ತೆಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತಹಶೀಲ್‌ ಕಚೇರಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್‌ ಅಮಿತ್‌ ಕುಲಕರ್ಣಿ ಅವರಿಗೆ ಸಲ್ಲಿಸಿದರು.

“ತಾಲೂಕಿನ ಭೂರಹಿತ ಬಡ ರೈತರು 1978 ರಿಂದ ಸರ್ಕಾರಿ ಭೂಮಿಯನ್ನು ಕಾಸ್ತು ಮಾಡುತ್ತ ಉಪಜೀವನ ನಡೆಸುತ್ತಿದ್ದಾರೆ. ಆದರೆ ಕೆಲವು ಕಡೆ ಗೇಣಿ ಭೂಮಿ ಮತ್ತು ಸರ್ಕಾರಿ ಭೂಮಿ ಸಕ್ರಮಗೊಳಿಸಲು ಕಮಿಟಿಗಳನ್ನು ಮಾಡಲಿಲ್ಲ. ಇದರಿಂದಾಗಿ ಕೃಷಿ ಕಾರ್ಮಿಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಭೂಮಿಯಿಂದ ವಂಚಿತರಾಗುತ್ತಿದ್ದಾರೆ. ಫಾರಂ ನಂ.50, 53 ಮತ್ತು ಫಾರಂ 57 ಇವುಗಳ ವಿಲೇವಾರಿ ಮಾಡಲಾಗುತ್ತಿಲ್ಲ. ಇದರಿಂದ ನಿಜವಾದ ಭೂ ಸಾಗುವಳಿ ಮಾಡುವವರಿಗೆ ಭೂಮಿ ಸಿಗುತ್ತಿಲ್ಲ. ಅರಣ್ಯ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿದ ಕಾರಣದಿಂದ ಅರಣ್ಯ ಭೂಮಿಯನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ಕೊಡಲು ಕೇಂದ್ರ ಸರ್ಕಾರ ಮುಂದಾಗಿರುತ್ತದೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಐ ಜಿಲ್ಲಾ ಮುಖಂಡ ಬಾಬುರಾವ ಹೊನ್ನಾ ಮಾತನಾಡಿ, “ಕೇಂದ್ರ ಸರ್ಕಾರ ʼಬೇಟಿ ಬಚಾವೋ ಬೇಟಿ ಪಡಾವೋʼ ಎಂದು ಹೇಳುತ್ತದೆ, ಆದರೆ ಉತ್ತರಪ್ರದೇಶ, ಗುಜರಾತ್‌ ಸೇರಿ ಬೇರೆ ಬೇರೆ ರಾಜ್ಯಗಳಲ್ಲಿ ಅತ್ಯಾಚಾರಗಳ ಸಂಖ್ಯೆ ಮಿತಿಮೀರಿದರೂ ಪ್ರಧಾನಿಗಳು ಧ್ವನಿ ಎತ್ತಲ್ಲ. 1975ರಲ್ಲಿ ಪ್ರಧಾನಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿ ಎಲ್ಲರಿಗೂ ಜೈಲಿಗಟ್ಟಿತ್ತು, ಆದರೆ ಇಂದಿನ ಸರ್ಕಾರ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರುವ ಮೂಲಕ ಎಲ್ಲರಿಗೂ ಜೈಲಿಗಟ್ಟುವ ಪ್ರಯತ್ನ ನಡೆಸುತ್ತಿದೆ. ಯಾವುದೇ ಪಕ್ಷಕ್ಕೆ ಸೇರದ ಪ್ರಗತಿಪರ ಚಿಂತಕರಿಗೆ, ಬರಗಾರರಿಗೆ ಭೀಮಾಕೋರೆಗಾಂವ ಪ್ರಕರಣದ ಆರೋಪದಲ್ಲಿ ಜೈಲಿನಲ್ಲಿ ಇಟ್ಟಿದ್ದಾರೆ” ಎಂದು ಆಕ್ಷೇಪಿಸಿದರು.

ದೇಶದ ಸಮಸ್ಯೆ ನಿರುದ್ಯೋಗದ ಬಗ್ಗೆ ಧ್ವನಿಯೆತ್ತದ ಪ್ರಧಾನಿ ಮಣಿಪುರದಲ್ಲಿ ಅಮಾನವೀಯ ಘಟನೆ ನಡೆದರೂ ಇಲ್ಲಿಯವರೆಗೆ ಭೇಟಿ ನೀಡಲಿಲ್ಲ. ಆದರೆ ಅಂಬಾನಿ, ಅದಾನಿ ಪರ ಮಾತನಾಡುತ್ತಾರೆ. ಅದಾನಿ ಅಕ್ರಮ ಕುರಿತು ಧ್ವನಿಯೆತ್ತಿದ ಸಂಸತ್‌ ನಿಂದ ಹೊರಗಿಡಲು ಅಮಾನತು ಮಾಡುತ್ತಾರೆ.ಸಂಸತ್‌ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ 141 ಸಂಸದರಿಗೆ ಅಮಾನತು ಮಾಡಲಾಗಿದೆ. ಮೈಸೂರು ಸಂಸದ ಪ್ರತಾಪ ಸಿಂಹ ಅವರು ಪಾಸ್‌ ಕೊಟ್ಟಿದ್ದಾರೆ. ಆದರೆ ಅವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳದ ಪ್ರಧಾನಿ ಹಾಗೂ ಗೃಹ ಮಂತ್ರಿಗಳು ಮೌನವಾಗಿದ್ದಾರೆ” ಎಂದರು.

ಬೇಡಿಕೆಗಳು: 

1. ಈ ಹಿಂದೆ ಇದ್ದ ಸರ್ಕಾರ ಭೂ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿದ್ದು, ಕೃಷಿಕರಲ್ಲದವರು ಭೂಮಿ ಖರೀದಿ ಮಾಡಲು ಅನುಕೂಲ ಮಾಡಿಕೊಟ್ಟಿದ್ದು, ಅದನ್ನು ಈಗಿನ ಸರ್ಕಾರ ಹಿಂಪಡೆಯಬೇಕೆಂದು ಒತ್ತಾಯಿಸಲಾಗುತ್ತಿದೆ.

2. ಕಮಲನಗರ ಮತ್ತು ಔರಾದ ತಾಲ್ಲೂಕಿನ ಕೆಲವು ಭಾಗಗಳಲ್ಲಿ ಹತ್ತಿ ಬೆಳೆ ಬೆಳೆಯಲಾಗುತ್ತಿದೆ. ಆದ್ದರಿಂದ ಹತ್ತಿ ಖರೀದಿ ಕೇಂದ್ರಗಳನ್ನು ಹಿಂದುಳಿದ ಎರಡು ತಾಲ್ಲೂಕುಗಳಲ್ಲಿ ಸ್ಥಾಪಿಸಬೇಕು.

3. ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಲ್ಯಾಣ ಮಂಡಳಿಯಿಂದ ವಿದ್ಯಾರ್ಥಿ ವೇತನ ಕಡಿಮೆಗೊಳಿಸಿರುವುದನ್ನು ಹಿಂಪಡೆಯಬೇಕೆಂದು ಒತ್ತಾಯ.

4. ವೃದ್ದಾಪ ವೇತನ ಕೆಲವು ಗ್ರಾಮಗಳಲ್ಲಿಯ ಹಿರಿಯ ನಾಗರಿಕರಿಗೆ ಕೊಡುವುದನ್ನು ನಿಲ್ಲಿಸಿರುವುದು ಹಿಂತೆಗೆದುಕೊಂಡು ಪುನಃ ಅವರುಗಳಿಗೆ ಮಾಸಿಕ 5 ಸಾವಿರ ರೂ.ಗೆ ಹೆಚ್ಚಿಸಬೇಕು.

5. ರೈತರ ಸರ್ಕಾರಿ ಸಾಲ ಮತ್ತು ಬ್ಯಾಂಕುಗಳ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು.

6. ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಗುವವರೆಗೆ ನಿರುದ್ಯೋಗ ಭತ್ಯೆ ಬಿಡುಗಡೆ ಮಾಡಬೇಕು.

7. ಕಮಲನಗರ ಪಟ್ಟಣದಲ್ಲಿ ತಾಲ್ಲೂಕಿಗೆ ಸಂಬಂಧಿಸಿದ ಎಲ್ಲಾ ಕಚೇರಿಗಳ ಕಟ್ಟಡಗಳನ್ನು ನಿರ್ಮಿಸುವುದು.

8. ಗಡಿ ಭಾಗದಲ್ಲಿರುವ ಗ್ರಾಮಗಳ ಶಾಲೆಗಳಲ್ಲಿ ಶಿಕ್ಷಕರುಗಳನ್ನು ನೇಮಿಸಬೇಕು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಚಾಕು ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಬಾಲಕರು

ಪ್ರತಿಭಟನೆಯಲ್ಲಿ ಅಖಿಲ ಭಾರತ ಕಿಸಾನ ಸಭಾ ಜಿಲ್ಲಾಧ್ಯಕ್ಷ ನಜೀರ್‌ ಅಹ್ಮದ್‌, ಸಿಪಿಐ ಜಿಲ್ಲಾ ಕಾರ್ಯದರ್ಶಿ ಅಲಿ ಅಹಮದ್‌ ಖಾನ್‌, ಸಹ ಕಾರ್ಯದರ್ಶಿ ಎಂ.ಡಿ.ಶಫಾಯತ್‌ ಅಲಿ, ಔರಾದ ತಾಲೂಕು ಕಾರ್ಯದರ್ಶಿ ಶೇಖ ನವಾಜ್‌, ಕಮಲನಗರ ತಾಲೂಕಾಧ್ಯಕ್ಷ ಚಾಂದೋಬಾ ಭೋಸ್ಲೆ, ಎಐಕೆಎಸ್‌ ಔರಾದ ಕಾರ್ಯದರ್ಶಿ ಮೊಗಲಪ್ಪ ಸುಂದಾಳ, ಗಣೇಶ ಶಿಂಧೆ, ಶಿವಾಜಿರಾವ ಭೋಸ್ಲೆ, ಉಮಾಕಾಂತ ಸಿಂಧೆ, ಖಮರ್‌ ಪಟೇಲ್‌, ವಿಮಲಾಬಾಯಿ ಚಂದೋಬಾ, ಉತ್ತಮರಾವ ಮಾನೆ, ಪ್ರವೀಣ ಕುಲಕರ್ಣಿ ಸೇರಿದಂತೆ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...