ಬೀದರ್‌ | ಬರ ಪರಿಹಾರ ಶೀಘ್ರ ಬಿಡುಗಡೆಗೆ ಕೂಲಿ ಕಾರ್ಮಿಕರ ಆಗ್ರಹ

Date:

ಬರ ಪರಿಹಾರ ಹಾಗೂ ಕೂಲಿ ಕಾರ್ಮಿಕರ ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ಕಾರ್ಯಕರ್ತರು ಔರಾದ ತಾಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿರೇಂದ್ರಸಿಂಗ್‌ ಅವರಿಗೆ ಸಲ್ಲಿಸಿದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಸೈಯದ್‌ ಇಸಾಮೋದ್ದಿನ್‌ ಮಾತನಾಡಿ, “ರಾಜ್ಯದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ರಾಜ್ಯದ 236 ತಾಲ್ಲೂಕುಗಳಲ್ಲಿ 223 ತಾಲೂಕುಗಳು ಬರಪೀಡಿತವೆಂದು ಸರ್ಕಾರ ಘೋಷಣೆ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ 18 ಸಾವಿರ ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. 196 ತಾಲೂಕುಗಳಲ್ಲಿ ಬರದ ತೀವ್ರತೆ ಇದೆ. ಕುಡಿಯಲು ಶುದ್ಧ ನೀರು, ಜಾನುವಾರಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಇದೆ. ಮಳೆಯ ಅಭಾವದಿಂದ ಅನ್ನದಾತರು ಸಂಕಷ ಸಿಲುಕಿದ್ದಾರೆ. ಕಳೆದ 10 ವರ್ಷಗಳಲ್ಲಿ ಕಂಡು ಕೇಳರಿಯದ ಬರ ಪರಿಸ್ಥಿತಿ ಉಂಟಾಗಿದೆ. ಕೂಲಿಕಾರದ ಹೊಟ್ಟೆಪಾಡಿಗಾಗಿ ವಲಸೆ ಹೋಗುವುದು ಸಿಕ್ಕಾಪಟ್ಟೆ ಹೆಚ್ಚಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಔರಾದ ತಾಲೂಕಿನ ಬಡ ಕಾರ್ಮಿಕರ ಹಿತದೃಷ್ಟಿಯಿಂದ ಮನರೇಗಾ ಕಾರ್ಮಿಕರಿಗೆ ಆಧಾರ್ ಅಡಿಯಲ್ಲಿ ವೇತನ ನೀಡುವ ಪದ್ಧತಿಯನ್ನು ಕೈಬಿಡಬೇಕು. ಬರಗಾಲ ನಿಮಿತ್ತ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ವರ್ಷದಲ್ಲಿ 100 ದಿನಗಳ ಬದಲಾಗಿ 200 ದಿನಗಳ ಕೆಲಸ ಒದಗಿಸಬೇಕು. ಕೂಲಿಕಾರರ ಕನಿಷ್ಠ ದಿನಗೂಲಿ ರೂ.600ಕ್ಕೆ ಹೆಚ್ಚಿಸಬೇಕು. ಕೂಲಿಕಾರರು ಬ್ಯಾಂಕುಗಳಿಂದ ಪಡೆದ ಸಾಲ ಹಾಗೂ ಮೈಕ್ರೋಫೈನಾನ್ಸ್ ಮೂಲಕ ಪಡೆದ ಸಾಲವನ್ನು ಮನ್ನಾ ಮಾಡಬೇಕು. ವಲಸೆ ಕಾರ್ಮಿಕರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಬರಗಾಲದ ಸಮಯದಲ್ಲಿ ಯಂತ್ರಗಳ ಬಳಕೆ ನಿಲ್ಲಿಸಿ ಕೂಲಿಕಾರರಿಗೆ ಕೆಲಸದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಲೂಕಿನ ಬರಗಾಲ ಘೋಷಣೆಯಾಗಿರುವ ಬರ ಪರಿಹಾರ ಆದಷ್ಟು ಬೇಗ ಕೂಡಲೇ ಸರಕಾರ ಬಿಡುಗಡೆ ಮಾಡಬೇಕು ಸೇರಿದಂತೆ ಕಾರ್ಮಿಕರ 15 ಬೇಡಿಕೆಗಳು ಈಡೇರಿಸಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಜಗಳ; ರೈತನ ಕೊಲೆ

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆ ತಾಲೂಕಾಧ್ಯಕ್ಷ ರಾಮಚಂದ್ರ, ಕಾರ್ಯದರ್ಶಿ ಸಂಗ್ರಾಮ, ಸಹ ಕಾರ್ಯದರ್ಶಿ ಸುರೇಶ ಜಿಲ್ಲಾ ಉಪಾಧ್ಯಕ್ಷ ಮಹೇಶ ಕಾಟೆ, ಸಹ ಕಾರ್ಯದರ್ಶಿ ದೇವಾನಂದ ಗಾಯಕವಾಡ ಹಾಗೂ ಸಚಿನ ಗುಂಡೆ, ಶಿವರಾಜ, ಬಂಡೆಪ್ಪಾ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...