ಬೀದರ್‌ | ಗಡಿ ಭಾಗದ ಕಮಲನಗರ ತಾಲೂಕು ಕೆಂದ್ರದಲ್ಲೇ ಇಲ್ಲ ʼಸರ್ಕಾರಿ ಪ್ರೌಢ ಶಾಲೆʼ

Date:

ಪತಿವರ್ಷ ನವಂಬರ್‌ ತಿಂಗಳು ಬಂತೆಂದರೆ ಸಾಕು ಎಲ್ಲೆಡೆ ಕನ್ನಡ ಕಲರವ ರಾರಾಜಿಸುತ್ತದೆ. ಕನ್ನಡ ಭಾಷೆ, ನಾಡು, ನುಡಿ, ಸಂಸ್ಕೃತಿ ಕುರಿತು ಚಿಂತನೆ, ವಿವಿಧ ಕಾರ್ಯಕ್ರಮಗಳು ವೈಭವದಿಂದ ಜರುಗುತ್ತವೆ. ಹೌದು ಕನ್ನಡ ಅಸ್ಮಿತೆ ಎಂದರೆ ಇದೆಲ್ಲವೂ ಆಗಲೇಬೇಕು. ಆದರೆ ಕರ್ನಾಟಕ ಎಂದು ನಾಮಕರಣಗೊಂಡು 5 ದಶಕಗಳು ಉರುಳಿದರೂ ರಾಜ್ಯದ ಗಡಿಭಾಗದ ಅದೆಷ್ಟೋ ಊರಿನ ಕನ್ನಡ ಶಾಲೆಗಳು ಮೂಲ ಸೌಕರ್ಯ, ಶಿಕ್ಷಕರ ಕೊರತೆ ಸೇರಿ ನಾನಾ ಸಂಕಷ್ಟಕ್ಕೆ ಸಿಲುಕಿ ಇಂದಿಗೂ ಉಸಿರುಗಟ್ಟುವ ಪರಿಸ್ಥಿತಿಯಲ್ಲಿರುವ ಬಗ್ಗೆ ಚಿಂತನೆ ನಡೆಯದೇ ಇರುವುದು ವಿಪರ್ಯಾಸವೇ ಸರಿ.

ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಬೀದರ್‌ ಜಿಲ್ಲೆಯಲ್ಲಿ ತೆಲುಗು, ಮರಾಠಿ ಭಾಷೆಗಳ ಪ್ರಭಾವ ಸಾಮಾನ್ಯವಾಗಿದೆ. ರಾಜ್ಯದ ಗಡಿಭಾಗದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಉಳಿಯಬೇಕಾದರೆ ಕನ್ನಡ ಶಾಲೆ ಉಳಿಯವುದು ತುಂಬಾ ಮುಖ್ಯವಾಗಿದೆ. ಆದರೆ ಬೀದರ ಜಿಲ್ಲೆಯ ಗಡಿ ತಾಲೂಕಿನ ಕೆಲವು ಶಾಲೆಗಳು ಮಕ್ಕಳಿಗೆ ಮೌಲ್ಯಶಿಕ್ಷಣ ಒದಗಿಸಿ ಸೈ ಎನಿಸಿಕೊಂಡಿವೆ. ಆದರೆ ಇನ್ನು ಹಲವು ಸರ್ಕಾರಿ ಶಾಲೆಗಳು ವಿವಿಧ ಸಮಸ್ಯೆಗಳು ಎದುರಿಸುತ್ತಲೇ ಇವೆ. ಇದರಿಂದ ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ ಬೆಳೆಸಿಕೊಂಡು ಕನ್ನಡ ಭಾಷೆಯಲ್ಲೇ ಶಿಕ್ಷಣ ಕಲಿಯಬೇಕೆಂಬ ಹಂಬಲ ಹೊಂದಿರುವ ಮಕ್ಕಳಿಗೆ ಕನ್ನಡ ಶಾಲೆಗಳೇ ಇಲ್ಲದಿರುವುದು ಶೋಚನೀಯವಾಗಿದೆ.

ಬೀದರ್‌ ಜಿಲ್ಲೆಯ ಕಮಲನಗರ ಹೊಸ ತಾಲೂಕು, ಔರಾದ (ಬಾ) ತಾಲೂಕಿನಿಂದ ವಿಂಗಡಣೆಯಾದ ಈ ತಾಲೂಕಿನಲ್ಲಿ ಕೆಲ ಗ್ರಾಮಗಳು ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿವೆ. ಹೀಗಾಗಿ ಇಲ್ಲಿ ಮರಾಠಿ ಪ್ರಭಾವ ಹೆಚ್ಚಾಗಿದೆ. ಆದರೆ ಇಲ್ಲಿನ ಜನರಿಗೆ ಮಾತ್ರ ಭಾಷೆ ಕನ್ನಡ ಕಲಿಯಬೇಕೆಂಬ ಆಸಕ್ತಿ ಏನು ಕಮ್ಮಿಯಿಲ್ಲ. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳೇ ಇಲ್ಲ. ಕನ್ನಡ ಶಾಲೆಗಳ ಕೊರತೆಯಿಂದ ಅಸಂಖ್ಯಾತ ವಿದ್ಯಾರ್ಥಿಗಳು ಮಾತ್ರ ಭಾಷಾ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ʼಉಳ್ಳವರು ಕನ್ನಡ ಕಲಿಯಲು ನಗರ ಸೇರಿದರೆ ಬಡವರು ಮಕ್ಕಳಿಗೆ ಅನ್ಯ ಭಾಷೆಯೇ ಗತಿʼ ಎಂಬಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಮಲನಗರ ಒಟ್ಟು 18 ಗ್ರಾಮ ಪಂಚಾಯತಿಗಳು ಹೊಂದಿರುವ ಹೊಸ ತಾಲೂಕು, ತಾಲೂಕಿನಲ್ಲಿ 11 ಸರ್ಕಾರಿ, 10 ಅನುದಾನಿತ ಹಾಗೂ 3 ಖಾಸಗಿ ಸೇರಿ ಒಟ್ಟು 24 ಕನ್ನಡ, ಮರಾಠಿ ಹಾಗೂ ಉರ್ದು ಮಾಧ್ಯಮ ಪ್ರೌಢ ಶಾಲೆಗಳಿವೆ. ಆದರೆ ತಾಲೂಕು ಕೇಂದ್ರವಾಗಿರುವ ಕಮಲನಗರ ಪಟ್ಟಣದಲ್ಲಿ ಯಾವುದೇ ಮಾಧ್ಯಮದ ಸರ್ಕಾರಿ ಪ್ರೌಢ ಶಾಲೆಯಿಲ್ಲ. ಅದರಲ್ಲೂ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ಕೂಡ ಇಲ್ಲದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮೀಣ ಭಾಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯವಿರುವ ಕಡೆ ಶಾಲೆ ತೆರೆಯಲು ಅನುಮತಿ ನೀಡಿದೆ. ಆದರೆ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯಲ್ಲಿರುವ ಜನಪ್ರತಿನಿಧಿಗಳು ಬಡ ವಿದ್ಯಾರ್ಥಿಗಳಿಗೆ ತಾಲೂಕು ಕೇಂದ್ರದ ಮಕ್ಕಳಿಗೆ ಕಲಿಯಲು ಸರ್ಕಾರಿ ಪ್ರೌಢ ಶಾಲೆ ನಿರ್ಮಿಸಲು ಆಗದೇ ಇರುವುದು ದೌರ್ಭಾಗ್ಯ. ಕಮಲನಗರ ಪಟ್ಟಣದಲ್ಲಿ ಖಾಸಗಿ ಹಾಗೂ ಅನುದಾನಿತ ಶಾಲೆ ಇರುವ ಕಾರಣಕ್ಕೆ ಸರ್ಕಾರಿ ಪ್ರೌಢ ಶಾಲೆ ಆರಂಭಕ್ಕೆ ಹಿನ್ನಡೆಯಾಗುತ್ತಿದೆ ಎಂದು ಹೇಳುತ್ತಾರೆ ಪ್ರಜ್ಞಾವಂತ ನಾಗರಿಕರು.

ಕೆಲ ಕಡೆ ಖಾಯಂ ಶಿಕ್ಷಕರಿಲ್ಲದೇ ಶಿಕ್ಷಣದಿಂದ ವಂಚಿತವಾಗುತ್ತಿರುವ ಮಕ್ಕಳು, ಬೀಳುವ ಹಂತದಲ್ಲಿರುವ ಶಾಲೆಯ ಕೊಠಡಿಗಳು, ಮೂಲ ಸೌಕರ್ಯಗಳ ಕೊರತೆ, ಕನ್ನಡ ಮಾಧ್ಯಮದ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿರುವ ಪೋಷಕರು. ಇನ್ನೊಂದು ಕಡೆ ಕೋಣೆ ಖಾಲಿಯಿದ್ದರೆ ಮಕ್ಕಳಿಲ್ಲ, ಮಕ್ಕಳಿದ್ದರೆ ತರಗತಿ ಕೋಣೆಯಿಲ್ಲ, ಎಲ್ಲಾ ವ್ಯವಸ್ಥೆವಿದ್ದರೆ ಶಿಕ್ಷಕರ ಕೊರತೆ ಕಾಡುತ್ತದೆ. ಇಂಥಹ ಪರಿಸ್ಥಿತಿಯಲ್ಲಿ ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳು ಇಂದೋ-ನಾಳೆಯೋ ಮುಚ್ಚಬಹುದು ಎಂಬ ಭೀತಿ ಕನ್ನಡ ಅಭಿಮಾನಿಗಳಿಗೆ ಕಾಡುತ್ತಿದೆ. ಕನ್ನಡದ ಅಭಿವೃದ್ಧಿಯ ಕುರಿತು ಪುಂಖಾನುಪುಂಖವಾಗಿ ಮಾತುಗಳನ್ನಾಡುವ ಸರಕಾರ, ಜನಪ್ರತಿನಿಧಿಗಳು ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಧ್ವನಿಯೆತ್ತದೆ ಮೌನವಹಿಸಿರುವುದು ಯಾಕೆ?

ಸರ್ಕಾರಿ ಪ್ರೌಢ ಶಾಲೆಗಾಗಿ ಮೂರು ದಶಕದಿಂದ ಹೋರಾಟ: 

ಕಮಲನಗರ ತಾಲೂಕು ಕೇಂದ್ರದ ಸುತ್ತಲಿನ ಗ್ರಾಮಗಳ ನೂರಾರು ಬಡ ಮಕ್ಕಳಿಗೆ ಕಲಿಯಲು ಸರ್ಕಾರಿ ಪ್ರೌಢ ಶಾಲೆ ಇಲ್ಲ. ಹೀಗಾಗಿ ಡೋನೆಶನ್‌ ಕೊಟ್ಟು ಖಾಸಗಿ, ಅನುದಾನಿತ ಶಾಲೆಗಳಿಗೆ ಹೋಗಬೇಕಾದ ಪರಿಸ್ಥಿತಿ ಅನಿವಾರ್ಯವಿದೆ. ಆದರೆ ಕಡುಬಡ ಕುಟುಂಬದ ಪೋಷಕರು ಕನಿಷ್ಠ ಶುಲ್ಕ ಕಟ್ಟಲು ಸಾಧ್ಯವಾಗುವುದಿಲ್ಲ. ಇದರಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲಾಗದೆ ಶಿಕ್ಷಣದಿಂದ ವಂಚಿತರಾಗಿ ಮಾಡುತ್ತಿದ್ದಾರೆ. ಕಳೆದ ಮೂರು ದಶಕಗಳಿಂದ ಕಮಲನಗರದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ಆರಂಭಿಸುವಂತೆ ಮನವಿ ಪತ್ರ ಸಲ್ಲಿಸುತ್ತಲೇ ಬರುತ್ತಿದ್ದೇವೆ. ಆದರೆ ಯಾವುದೇ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಇಚ್ಚಾಶಕ್ತಿ ತೋರುತ್ತಿಲ್ಲ. ಇದರಿಂದ ನಮ್ಮ ಮನವಿಗೆ ಕಿಮ್ಮತ್ತೇ ಇಲ್ಲ ಎನ್ನುವಂತಾಗಿದೆ ಎಂದು ವ್ಯವಸ್ಥೆ ಪರಿವರ್ತನೆ ವೇದಿಕೆ ಅಧ್ಯಕ್ಷ ವೈಜಿನಾಥ ವಡ್ಡೆ ಅಸಮಧಾನ ವ್ಯಕ್ತಪಡಿಸುತ್ತಾರೆ.

ಮೂರು ದಶಕಗಳಿಂದ ಈ ಬಗ್ಗೆ ಜನಪ್ರತಿಗಳಿಗೆ, ಸರ್ಕಾರಕ್ಕೆ  ಮನವಿ ಸಲ್ಲಿಸಿದ್ದೇನೆ. ಇದೇ ನ.20 ರಂದು ಸ್ಥಳೀಯ ಶಾಸಕರಿಗೆ ತಾಲೂಕು ತಹಸೀಲ್ದಾರ್‌ ಮೂಲಕ ಮನವಿ ನೀಡಲಾಗಿದೆ. ಶಿಕ್ಷಣ ಇಲಾಖೆಗೂ ಪತ್ರ ಬರೆಯಲಾಗಿದೆ. ಈಗಲಾದರೂ ಶಾಸಕರು ತಾಲೂಕು ಕೆಂದ್ರದಲ್ಲಿ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರೌಢ ಶಾಲೆ ಆರಂಭಿಸುವಂತೆ ಈದಿನ.ಕಾಮ್‌ ದೊಂದಿಗೆ ಮಾತನಾಡಿ ಒತ್ತಾಯಿಸಿದ್ದಾರೆ.

ಗಡಿ ತಾಲೂಕು ಕಮಲನಗರ ತಾಲೂಕು ಕೇಂದ್ರದಲ್ಲಿ ಸರ್ಕಾರಿ ಪ್ರೌಢ ಶಾಲೆ ಕೊರತೆ ಇರುವುದು ಬೇಸರದ ಸಂಗತಿ. ಇದರಿಂದ ಕನ್ನಡ ಕಲಿಕೆ ಬಯಸುವ ಪ್ರತಿಭಾವಂತ ವಿದ್ಯಾರ್ಥಿಗಳು ಮಾತ್ರ ಭಾಷೆಯಿಂದ ದೂರವಾಗುತ್ತಿದ್ದಾರೆ. ಈ ಹಿಂದೆ ಶಿಕ್ಷಣ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು. ಆದರೆ ಇಚ್ಚಾಶಕ್ತಿ ಕೊರತೆಯಿಂದ ಯಾವುದೇ ಪ್ರತಿಫಲ ದೊರೆಯುತ್ತಿಲ್ಲ. ಇಂದು ಗಡಿಯಲ್ಲಿ ಕನ್ನಡ ಉಳಿಸುವುದೇ ದೊಡ್ಡ ಸವಾಲಿನ ಕೆಲಸ. ಇಂಥದರಲ್ಲಿ ಕನ್ನಡ ಶಾಲೆಯೇ ಇಲ್ಲ ಎಂದರೆ ಭವಿಷ್ಯದ ಮಕ್ಕಳಿಗೆ ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಚಿಗುರೊಡೆವುದಿಲ್ಲ ಎಂದು ಕಮಲನಗರ ತಾಲೂಕು ಕಸಾಪ ಅಧ್ಯಕ್ಷ ಪ್ರಶಾಂತ ಮಠಪತಿ ಈದಿನ.ಕಾಮ್‌ ದೊಂದಿಗೆ ಮಾತನಾಡಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಪೈಗಂಬರ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಉಪನ್ಯಾಸಕ; ವಿದ್ಯಾರ್ಥಿಗಳು ಆಕ್ರೋಶ

ಸರ್ಕಾರಿ ಪ್ರೌಢ ಶಾಲೆ ಆರಂಭಕ್ಕೆ ನಿವೇಶನ ಕೊರತೆ:

ಮಾಜಿ ಸಚಿವ, ಔರಾದ-ಕಮಲನಗರ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಈದಿನ.ಕಾಮ್‌ ದೊಂದಿಗೆ ಮಾತನಾಡಿ, “ಕಮಲನಗರದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ಪ್ರಾರಂಭಿಸುವ ಕುರಿತಾದ ಒತ್ತಾಯ ನನ್ನ ಗಮನಕ್ಕೆ ಇದೆ . ಈ ಬಗ್ಗೆ ಹಿಂದೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಆದರೆ ನಿವೇಶನದ ಕೊರತೆಯ ಕಾರಣಕ್ಕೆ ಆಗಲಿಲ್ಲ. ಈ ಬಗ್ಗೆ ಇನ್ನೊಮ್ಮೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಶಾಲೆ ಆರಂಭಕ್ಕೆ ಪ್ರಯತ್ನಿಸುವೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...