ಬೀದರ್‌ | ವಸಂತ ಕುಷ್ಟಗಿ ದಾಸ ಸಾಹಿತ್ಯದ ಶ್ರೇಷ್ಠ ವಿದ್ವಾಂಸರು: ಪಂಚಾಕ್ಷರಿ ಪುಣ್ಯಶೆಟ್ಟಿ

Date:

ಬೀದರ್ ಜಿಲ್ಲೆಯ ಜೊತೆಗೆ ವಸಂತ ಕುಷ್ಟಗಿ ಅವರಿಗೆ ಅವಿನಾಭಾವ ಸಂಬಂಧವಿದೆ. ಬಿ.ವಿ.ಬಿ ಮಹಾವಿದ್ಯಾಲಯದ ಸ್ಥಾಪನೆಯ ಸಂದರ್ಭಕ್ಕೆ ಕನ್ನಡದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತ ಗಡಿಭಾಗದಲ್ಲಿ ಕನ್ನಡ ಕಟ್ಟಿ ಬೆಳೆಸುವಲ್ಲಿ ಪ್ರೊ. ವಸಂತ ಕುಷ್ಟಗಿಯವರು ಮಹತ್ವದ ಪಾತ್ರವಹಿಸಿದ್ದರು. ಇಲ್ಲಿ ಕನ್ನಡ ಗಟ್ಟಿಯಾಗಿ ನೆಲೆಯೂರಲು ಅವರ ಶ್ರಮ ಸಾಕಷ್ಟಿದೆ ಎಂದು ಹಿರಿಯ ಸಾಹಿತಿ ಪಂಚಾಕ್ಷರಿ ಪುಣ್ಯಶೆಟ್ಟಿ ನುಡಿದರು.

ಕಲಬುರಗಿಯ ನುಡಿಸಿರಿ ಆಚಾರ್ಯ ವಸಂತ ಕುಷ್ಟಗಿ ಪ್ರತಿಷ್ಠಾನ ಹಾಗೂ ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನದ
ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ವಸಂತ ಕುಷ್ಟಗಿ ಬದುಕು-ಬರಹ ಕುರಿತು ಉಪನ್ಯಾಸ ಮತ್ತು ವಸಂತ ಕುಷ್ಟಗಿಯವರ ಸ್ಮರಣಾರ್ಥವಾಗಿ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ “ವಸಂತ ಸಾಹಿತ್ಯೋತ್ಸವ 2023” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಹಿತಿ ಡಾ. ರಾಮಚಂದ್ರ ಗಣಾಪೂರ ಅವರು ಪ್ರೊ. ವಸಂತ ಕುಷ್ಟಗಿಯವರ ಬದುಕು – ಬರಹ ಕುರಿತು ಉಪನ್ಯಾಸ ನೀಡಿ, “ಕನ್ನಡ ಭಾಷೆ, ಸಾಹಿತ್ಯ ಮತ್ತು ದಾಸ ಸಾಹಿತ್ಯದ ಪ್ರಚಾರದಲ್ಲಿ ಕುಷ್ಟಗಿಯವರ ಪಾತ್ರ ಗಣನೀಯವಾಗಿದೆ. ದೈಹಿಕವಾಗಿ ನ್ಯೂನತೆ ಹೊಂದಿದರು ಕೂಡ ಕನ್ನಡದ ಎಲ್ಲಾ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರು. ಸೃಜನಶೀಲ ಬರಹಗಾರರಾದ ಅವರು ಗಟ್ಟಿ ಸಾಹಿತ್ಯದ ನಿರ್ಮಾಪಕರಾಗಿ ನಾಡಿನಾದ್ಯಾಂತ ಚಿರಪರಿಚಿತರು. ಅನೇಕರನ್ನು ಸಾಹಿತ್ಯ ಕ್ಷೇತ್ರದಲ್ಲಿ ಬೆಳೆಯುವಂತೆ ಪ್ರೇರಣೆ ಪ್ರೋತ್ಸಾಹ ನೀಡಿದ್ದರು. ನೂರಾರು ಮೌಲಿಕ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಕೊಡುಗೆಯಾಗಿ ನೀಡಿದ್ದರು. ಸರಳ ಸಜ್ಜನ ವ್ಯಕ್ತಿತ್ವ ಮೈಗೂಡಿಸಿಕೊಂಡು ಜಾತ್ಯಾತೀತ ಮನೋಭಾವನೆಯನ್ನು ರೂಢಿಸಿಕೊಂಡು ಎಲ್ಲರೊಂದಿಗೆ ಬೆರೆತು ಬಾಳಿಬದುಕಿದರು” ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪಾ ಮಾಸಿಮಾಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ
ಮಾತನಾಡಿ, “ನನ್ನಂತಹ ಅನೇಕ ಕನ್ನಡದ ಸೇವಕರನ್ನು ಈ ನಾಡಿಗೆ ಕೊಟ್ಟ ಕೀರ್ತಿ ವಸಂತ ಕುಷ್ಟಗಿಯವರಿಗೆ ಸಲ್ಲುತ್ತದೆ. ಅವರ ಸುಪುತ್ರ ಶಾಮ ಕುಷ್ಟಗಿ ಹಾಗೂ ಸಂಜೀವಕುಮಾರ ಅತಿವಾಳೆಯವರು ಅವರ ಕರ್ಮಭೂಮಿಯಾಗಿದ್ದ ಬೀದರನಲ್ಲಿ ಅವರನ್ನು ನೆನಯುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ” ಎಂದು ತಿಳಿಸಿದರು.

ವಸಂತ ಕುಷ್ಟಗಿಯವರ ಸುಪುತ್ರ ಸಂಚಾರಿ ಜರ್ನೋ ಶಾಮ ಕುಷ್ಟಗಿ ಮಾತನಾಡಿ, “ನಾಡಿನಾದ್ಯಂತ ವಸಂತ ಕುಷ್ಟಗಿ ಅವರ ಬದುಕು, ಸಾಹಿತ್ಯ ಹಾಗೂ ಅವರ ಕೊಡುಗೆ ಸಮಾಜಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಿ ಕಾರ್ಯಕ್ರಮಗಳನ್ನು ಮಾಡುತ್ತಾ ಅವರೊಂದಿಗೆ ಒಡನಾಟ ಹೊಂದಿದ ಅನೇಕ ಮಹನಿಯರಿಗೆ ಪ್ರಶಸ್ತಿ, ಪುರಸ್ಕಾರ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ” ಎಂದು ತಿಳಿಸಿದರು.

ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಡಾ. ಸಂಜೀವಕುಮಾರ ಅತಿವಾಳೆ ಮಾತನಾಡಿ, “ನಾಡು-ನುಡಿ, ಸಾಹಿತ್ಯ-ಸಂಸ್ಕೃತಿ ಉಳಿಸಿ ಬೆಳೆಸುವ ಹಾಗೂ ಮುಂದಿನ ಜನಾಂಗಕ್ಕೆ ಪರಿಚಯಿಸುವ ಕಾರ್ಯಕ್ರಮಗಳನ್ನು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕರುನಾಡು ಸಾಂಸ್ಕೃತಿಕ ಭವನದಲ್ಲಿ ನಿರಂತರವಾಗಿ ಮಾಡಲಾಗುತ್ತಿದೆ” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡಮಿಯ ಮಾಜಿ ಸದಸ್ಯ ವಿನೋದ ಅಂಬೇಕರ, ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ರವೀಂದ್ರ ಲಂಜವಾಡಕರ, ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಮ್. ಅಮರವಾಡಿ ಆಗಮಿಸಿ ವಸಂತ ಕುಷ್ಟಗಿಯವರೊಂದಿಗಿನ ತಮ್ಮ ಒಡನಾಟದ ಕುರಿತು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಪ್ಪಿದ ಘೋರ ದುರಂತ- ಆಳುವವರ ಅಲಕ್ಷ್ಯ ಅಕ್ಷಮ್ಯ

ಕಾರ್ಯಕ್ರಮದಲ್ಲಿ ವಸಂತಸಿರಿ ಸ್ನೇಹ ಸಂಪದ ಪ್ರಶಸ್ತಿ ದಿ. ಪ್ರೊ. ದೇವೆಂದ್ರ ಕಮಲ್, ಬೀದರ ಅವರ ಪರವಾಗಿ ರತಿನ್ ಕಮಲ್, ವಸಂತಸಿರಿ ಶಿಷ್ಯೋತ್ತಮ ಪ್ರಶಸ್ತಿ, ಡಾ. ಹರತಿ ದ್ವಾರಕಾನಾಥ, ವಿಕಾರಾಬಾದ್, ವಸಂತಸಿರಿ ಹಾರಾಯಿಕೆ ಸಿರಿಕಾವ್ಯ,  ಡಾ. ಸುಮನ ಯಜುರ್ವೇದಿ, ಕಲಬುರಗಿ ಅವರಿಗೆ ಪ್ರದಾನ ಮಾಡಲಾಯಿತು.
ರೇಣುಕಾ ಎನ್.ಬಿ.ಕೀರ್ತನೆ ಗಾಯನ ನಡೆಸಿಕೊಟ್ಟರು, ಸಂತೋಷಕುಮಾರ ಜೋಳದಾಪಕೆ ಸ್ವಾಗತಿಸಿದರು, ಉಮಾಕಾಂತ ಮೀಸೆ ನಿರೂಪಿಸಿದರು, ಸೂರ್ಯಕಾಂತ ನಿರ್ಣಾಕರ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...