ಉಡುಪಿ | ಬಿಜಾಡಿ ಸಮುದ್ರತೀರ ಮೇಘರಾಜ್ ಶವ ಪತ್ತೆ ಅನುಮಾನಾಸ್ಪದ – ಕೋಟ ನಾಗೇಂದ್ರ ಪುತ್ರನ್

Date:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಹಳೆ ಅಳಿವೆ ಪ್ರದೇಶದ ಬೀಜಾಡಿ ಗ್ರಾಮ ವ್ಯಾಪ್ತಿಯ ಸಮುದ್ರ ಕಿನಾರೆಯಲ್ಲಿ ಫೆ. 25 ರಂದು ಸಮುದ್ರಕ್ಕೆ ಮಾರಣ ಬಲೆ ಬಿಡಲು ಹೋಗಿದ್ದ ಮೇಘರಾಜ್ ಎಂಬ 24 ರ ಹರೆಯದ ಯುವಕನ ಸಾವು ಆಕಸ್ಮಿಕವಲ್ಲ, ಅದೊಂದು ವ್ಯವಸ್ಥಿತ ಕೊಲೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕು ಎಂದು ಆಗ್ರಹಿಸಿ ಅವರು ಕುಂದಾಪುರ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸರಿಗೆ ಸಲ್ಲಿಸಿದ ಮನವಿಯಲ್ಲಿ ಅವರು ಹಲವು ವಿಷಯಗಳು ಸಂಶಯಾಸ್ಪದ ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1004555471

24ರ ಹರೆಯದ ಯುವಕ ಏಕಾಏಕಿ ಸಮುದ್ರ ಪಾಲಾಗುವುದು ಅಸಾಧ್ಯ. ಇದರ ಹಿಂದೆ ಕ್ರಿಕೆಟ್ ಬುಕ್ಕಿಗಳು, ಬಡ್ಡಿ ದಂಧೆಕೋರರ ಕೈವಾಡವಿದೆ ಎಂದು ಅವರು ಸಂಶಯ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಈ ಅಕ್ರಮ ದಂಧೆ ಯಗ್ಗಿಲ್ಲದೆ ನಡೆಯುತ್ತಿದ್ದು, ಪೋಲೀಸರ ಗಮನಕ್ಕೆ ಬಾರದಿರುವುದು ಆಶ್ಚರ್ಯವಾಗಿದೆ! ಮೇಘರಾಜ್ ಪ್ರಕರಣದಲ್ಲೂ ಈ ದಂಧೆಯವರೇ ಕೈ ಚಳಕ ತೋರಿಸಿದ್ದಾರೆ. ಅವರನ್ನು ಸಮುದ್ರ ದಡದಲ್ಲಿ ಕೊಲೆ ಮಾಡಿ ನೀರಿಗೆ ಎಸೆದಿದ್ದಾರೆ ಎಂಬ ಸಂಶಯ ಬಲವಾಗಿದೆ. ಆದ್ದರಿಂದ ಪೊಲೀಸರು ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯ ಹೊರತರಬೇಕು, ಕೊಲೆಯಾದ ವ್ಯಕ್ತಿ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು ಎಂದು ಪುತ್ರನ್ ಆಗ್ರಹಿಸಿದ್ದಾರೆ.

ಮೇಘರಾಜ್ ಅವರು ಮರಣ ಬಲೆ ಬಿಡಲೆಂದು ಸಮುದ್ರಕ್ಕೆ ಬಂದವರು ಅಕಸ್ಮಾತ್ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಸುದ್ದಿಯಾಗಿತ್ತು. ಕರಾವಳಿ ಕಾವಲು ಪಡೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದರು. ಮೇಘರಾಜ್ ಬೆಳಿಗ್ಗೆ ಹಳೆ ಅಳಿವೆ ಪ್ರದೇಶದಲ್ಲಿ ಸಮುದ್ರ ಪಾಲಾಗಿದ್ದು, ಸಂಜೆ ಸಮೀಪದಲ್ಲೇ ಅವರ ಶವ ದೊರಕಿತ್ತು. ಇದು ಕೂಡಾ ಸಂಶಯಕ್ಕೆ ಎಡೆ ಮಾಡಿದೆ ಎನ್ನಲಾಗಿದೆ. ಪೋಲೀಸರ ಮುಂದಿನ ಕ್ರಮಕ್ಕಾಗಿ ಕಾದು ನೋಡಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...