ಬಿಂಡಿಗ ದೇವೀರಮ್ಮ ಉತ್ಸವ ಎರಡು ದಿನಗಳಿಗೆ ವಿಸ್ತರಣೆ, ರಾತ್ರಿ ದರ್ಶನಕ್ಕೆ ಅವಕಾಶವಿಲ್ಲ: ಎಸ್‌ಪಿ ವಿಕ್ರಮ ಅಮಟೆ

Date:

ಬೆಟ್ಟದ ತುದಿಯಲ್ಲಿ ವರ್ಷಕ್ಕೆ ಒಂದೇ ದಿನ ದರ್ಶನ ನೀಡುತ್ತಿದ್ದ ಬಿಂಡಿಗ ದೇವೀರಮ್ಮ ಉತ್ಸವವನ್ನು ಎರಡು ದಿನಗಳಿಗೆ ದೇಗುಲ ಸಮಿತಿ ವಿಸ್ತರಿಸಿದೆ. ಸಮಿತಿ ಪ್ರಕಾರವೇ ರಾತ್ರಿ ವೇಳೆ ದೇವಿಯ ದರ್ಶನಕ್ಕೆ ಅವಕಾಶವಿಲ್ಲ. ಆದ್ದರಿಂದ ರಾತ್ರಿ ವೇಳೆ ಭಕ್ತರು ಬೆಟ್ಟ ಏರುವುದನ್ನು ನಿಯಂತ್ರಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, “ಪ್ರತಿವರ್ಷದಂತೆ ನರಕ ಚತುರ್ದಶಿಯ ದಿನ(ಅ.20) ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿತ್ತು. ಈ ವರ್ಷ ಒಂದು ದಿನ ಮುನ್ನವೇ ಅವಕಾಶ ನೀಡಲಾಗುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ರಾತ್ರಿ ವೇಳೆ ಬೆಟ್ಟ ಏರುವ ಪ್ರಯತ್ನವನ್ನು ಯಾರೂ ಮಾಡಬಾರದು” ಎಂದು ಮನವಿ ಮಾಡಿದರು.

“ಅಕ್ಟೋಬರ್‌ 19ರಂದು ಬೆಳಿಗ್ಗೆ 9ರಿಂದ ಬೆಟ್ಟದ ಮೇಲೆ ದೇವಿಯ ದರ್ಶನಕ್ಕೆ ಅವಕಾಶ ಇದೆ. ಅದಕ್ಕೂ ಮುನ್ನ 7 ಗಂಟೆಯ ಬಳಿಕ ಭಕ್ತರು ಬೆಟ್ಟ ಏರಲು ಅವಕಾಶ ನೀಡಲಾಗುವುದು. ಮಲ್ಲೇನಹಳ್ಳಿ ಮಾರ್ಗ, ಕೈಮರ ಮಾರ್ಗ ಮತ್ತು ಅರಿಶಿನಕುಂಟೆ ಮಾರ್ಗದಲ್ಲಿ ಪೊಲೀಸರನ್ನು ನಿಯೋಜಿಸಿ ನಿಗದಿತ ಸಮಯದ ನಂತರ ಭಕ್ತರು ಸಾಗಲು ಅನುಕೂಲ ಮಾಡಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮರುದಿನ ಅಕ್ಟೋಬರ್‌ 20ರಂದು ಬೆಳಿಗ್ಗೆ 7ರ ನಂತರ ದರ್ಶನಕ್ಕೆ ಅವಕಾಶ ನೀಡುವ ಬಗ್ಗೆ ಸಮಿತಿ ನಿರ್ಧರಿಸಿ ಆಹ್ವಾನ ಪತ್ರಿಕೆಯಲ್ಲೇ ಮುದ್ರಿಸಿದೆ. ಆದ್ದರಿಂದ ರಾತ್ರಿ ಬೆಟ್ಟ ಏರಿದರೆ ಭಕ್ತರಿಗೆ ಯಾವುದೇ ಪ್ರಯೋಜನ ಇಲ್ಲ. 7 ಗಂಟೆಯ ನಂತರ ಗುಡ್ಡದ ತುದಿ ತಲುಪಿದರೆ ಅನುಕೂಲವಾಗಲಿದೆ” ಎಂದು ಹೇಳಿದರು.

“ಮುನ್ನ ದಿನ ಬೆಟ್ಟ ಏರಿದವರು ಅಲ್ಲೇ ಉಳಿಯಲು ಅವಕಾಶ ನೀಡುವುದಿಲ್ಲ. ಎಲ್ಲೆಡೆ ಪೊಲೀಸರನ್ನು ನಿಯೋಜಿಸಲಿದ್ದು, ವಾಪಸ್ ಕಳುಹಿಸಲಿದ್ದಾರೆ. ಸಮಯ ನಿಗದಿ ಮಾಡಿರುವುದು ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಲ್ಲ. ದೇಗುಲ ಸಮಿತಿ ಕೈಗೊಂಡಿರುವ ನಿರ್ಣಯದಂತೆ ಭದ್ರತೆ ಒದಗಿಸುವ ಜವಾಬ್ದಾರಿಯನ್ನಷ್ಟೇ ನಾವು ಮಾಡುತ್ತಿದ್ದೇವೆ” ಎಂದು ವಿವರಿಸಿದರು.

“ಬೆಟ್ಟದಲ್ಲಿ ಪಟಾಕಿ ಸಿಡಿಸದಂತೆ ಸೂಚನೆ ನೀಡಲಾಗಿದೆ. ಅದನ್ನೂ ಮೀರಿದರೆ ಕ್ರಮ ಕೈಗೊಳ್ಳಲಾಗುವುದು. ಎಲ್ಲೆಡೆ ಡ್ರೋಣ್ ಮೂಲಕ ಪೊಲೀಸರು ನಿಗಾ ವಹಿಸಲಿದ್ದಾರೆ” ಎಂದು ತಿಳಿಸಿದರು.

“ಎರಡು ದಿನ ಭಕ್ತರು ಬೆಟ್ಟ ಏರುವುದರಿಂದ ಕಳೆದ ವರ್ಷಕ್ಕಿಂತ ಎರಡು ಪಟ್ಟು ಪೊಲೀಸ್ ಸಿಬ್ಬಂದಿಯನ್ನು ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ. ರಾತ್ರಿ ಕೂಡ ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಜಿಲ್ಲೆಯ ಸಿಬ್ಬಂದಿ ಜತೆಗೆ ಪಶ್ಚಿಮ ವಲಯದಿಂದ ಅಧಿಕಾರಿ ಮತ್ತು ಸಿಬ್ಬಂದಿ ಕರೆಸಲಾಗುತ್ತಿದೆ. 250 ಗೃಹ ರಕ್ಷಕ ದಳದ ಸಿಬ್ಬಂದಿಯನ್ನೂ ಕೂಡ ನಿಯೋಜಿಸಿಕೊಳ್ಳಲಾಗುತ್ತಿದೆ. ಸಿಬ್ಬಂದಿಗೆ ಆಹಾರದ ಕಿಟ್‌ಗಳನ್ನು ನೀಡಲಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯಪ್ರವಾಸ: ಹಂಪಿ ವಿರೂಪಾಕ್ಷ ದೇವಾಲಯಕ್ಕೆ ಭೇಟಿ

ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ, “ಅಕ್ಟೋಬರ್‌ 18 ಮತ್ತು 19ರಂದು ಜೋರು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾತ್ರಿ ವೇಳೆ ಮಳೆಯಲ್ಲಿ ಗುಡ್ಡದ ಮಧ್ಯದಲ್ಲಿ ಸಿಲುಕಿದರೆ ತೊಂದರೆಯಾಗಲಿದೆ. ಆದ್ದರಿಂದ ಹಗಲಿನಲ್ಲಿ ಬೆಟ್ಟ ಏರುವುದು ಸೂಕ್ತವೆಂಬ ನಿರ್ಧಾರವನ್ನು ಸಮಿತಿ ಕೈಗೊಂಡಿರುವ ಸಮಿತಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಅದರಂತೆ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ನಗರದಿಂದ ಹೋಗುವವರಿಗೆ ಹೆಚ್ಚುವರಿಯಾಗಿ 50 ಕೆಎಸ್‌ಆರ್‌ಟಿಸಿ ಬಸ್ ಸೌಕರ್ಯ ಕಲ್ಪಿಸಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...