ಬೀದರ್‌ | ಕಾಡು ಸಂರಕ್ಷಿಸದಿದ್ದರೆ ಜೀವ ಸಂಕುಲ ವಿನಾಶ : ವಿನಯ ಮಾಳಗೆ

Date:

ಪ್ರಕೃತಿಯ ಸಂರಕ್ಷಣೆ ಎಲ್ಲರ ಹೊಣೆಗಾರಿಕೆಯಾಗಿದೆ. ನೆಲ, ನೀರು, ಕಾಡು ಸಂರಕ್ಷಿಸದಿದ್ದರೆ ಜೀವ ಸಂಕುಲ ವಿನಾಶವಾಗುತ್ತದೆ ಎಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ ಮಾಳಗೆ ಹೇಳಿದರು.

ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ಐಕ್ಯೂಎಸಿ ವತಿಯಿಂದ ಹಮ್ಮಿಕೊಂಡಿದ್ದ ‘ಮಣ್ಣು-ನೀರು : ಸಾಂಸ್ಕೃತಿಕ ಸಂಕಥನ’ ಕುರಿತ ಉಪನ್ಯಾಸ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ʼನಮ್ಮೆಲ್ಲರ ನಿರ್ಲಕ್ಷ್ಯದಿಂದ ನಿಸರ್ಗಕ್ಕೆ ಹಾನಿಯಾಗುತ್ತಿದೆ. ಕಾಡು ಸಂರಕ್ಷಿಸುವ ಕಡೆಗೆ ಕೇಂದ್ರಿಕರಿಸದಿದ್ದರೆ ಜೀವವೈವಿಧ್ಯ ನಾಶವಾಗುತ್ತದೆ. ಅಂತರ್ಜಲದ ಮಟ್ಟ ಹೆಚ್ಚಿಸುವ, ಮಣ್ಣಿನ ಫಲವತ್ತತೆ ಕಾಪಾಡುವ, ಜೀವವೈವಿಧ್ಯ ಉಳಿಸಲು ಕಾಡು ಬೆಳೆಸುವ ಹೊಣೆ ನಮ್ಮೆಲ್ಲರ ಮೇಲಿದೆ. ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮಹತ್ವ ಪಡೆದ ಬಸವಕಲ್ಯಾಣ ಬೀದರಗಿಂತ ಹಳೆಯ ಪಟ್ಟಣ. ಇಲ್ಲಿ ಹಳೆಯ ಕಾಲದ 440ಕ್ಕೂ ಅಧಿಕ ಬಾವಿಗಳಿವೆ. ನೀರನ್ನು ಹಿಡಿದಿಡುವ ವಿಶಿಷ್ಟ ಗುಣ ಕಲ್ಯಾಣದ ಮಣ್ಣಿಗಿದೆ. ಕಲ್ಯಾಣಿ ಎಂದರೆ ನೀರಿನ ಸೆಲೆಯಿರುವ ಸ್ಥಳ ಎಂದರ್ಥʼ ಎಂದು ವಿಶ್ಲೇಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮನೆಯಲ್ಲಿ ಒಂದು ಮರವಿದ್ದರೂ ಹಲವು ಹಕ್ಕಿಗಳು ಬಂದು ಹೋಗುತ್ತವೆ. ನಿಸರ್ಗದ ಎಲ್ಲ ಚಲನೆಯನ್ನು ದಾಖಲಿಸಬೇಕು. ಜಾಗತಿಕ ತಾಪಮಾನದ ಬಗೆಗೆ ಮಾತನಾಡುವ ನಾವು, ನಮ್ಮ ಊರನ್ನು ತಂಪಾಗಿಡಲು ಏನು ಮಾಡಬೇಕೆಂಬುದು ಯೋಚಿಸಬೇಕುʼ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಡಾ. ಮಲ್ಲಿಕಾರ್ಜುನ ಲಕಶೆಟ್ಟಿ ಮಾತನಾಡಿ, ʼಪರಿಸರ ಸಂರಕ್ಷಣೆಗೆ ಸರ್ಕಾರಗಳು ಹಲವು ಯೋಜನೆಗಳು ಹಾಕಿಕೊಂಡಿವೆ. ನಿಸರ್ಗದ ರಕ್ಷಣೆ ಪ್ರತಿಯೊಬ್ಬರ ಮೊದಲ ಕರ್ತವ್ಯವಾಗಿದೆ. ನಿಸರ್ಗ ಉಳಿದರೆ ಎಲ್ಲಾ ಜೀವಿಗಳ ಉಳಿವಿದೆ. ಇಲ್ಲದಿದ್ದರೆ ಎಲ್ಲಾ ಜೀವಿಗಳ ಅಳಿವು ನಿಶ್ಚಿತʼ ಎಂದರು.

ಪ್ರಾಚಾರ್ಯ ಡಾ. ಭೀಮಾಶಂಕರ ಬಿರಾದಾರ ಮಾತನಾಡಿ, ʼಆಧುನಿಕತೆ, ಜಾಗತೀಕರಣ, ನಗರೀಕರಣಗಳು ಬೆಳೆದಂತೆ ಮನುಷ್ಯ ನಿಸರ್ಗ ಸಹಜ ಅನುಭವ, ಪ್ರಕೃತಿಯ ವಿಸ್ಮಯ, ಕೌತುಕಗಳಿಂದ ದೂರವಾಗುತ್ತಿದ್ದಾನೆ. ಅನ್ನಕ್ಕೆ, ಆರಾಧನೆಗೆ ಕೇಂದ್ರವಾಗಿದ್ದ ನೆಲ ಇಂದು ಸರಕಾಗಿ ಪರಿವರ್ತಿತವಾಗಿದೆ. ವ್ಯಾವಹಾರಿಕ ಮನೋಭಾವ ಬೆಳೆದಂತೆಲ್ಲ ನೆಲ,ನೀರು, ಕಾಡನ್ನು ವಾಣಿಜ್ಯ ಮತ್ತು ವ್ಯಾಪಾರದ ಚೌಕಟ್ಟಿಗೆ ತಂದು ನಿಲ್ಲಿಸಿದ್ದು ಈ ಕಾಲದ ಬಹುದೊಡ್ಡ ದುರಂತʼ ಎಂದರು.

ʼಕೆ.ಪಿ. ಪೂರ್ಣಚಂದ್ರ ತೇಜಸ್ವಿ, ಕೃಪಾಕರ ಸೇನಾನಿ, ಮಾಧವ ಗಾಡ್ಗೀಳ್, ನಾಗೇಶ್ ಹೆಗಡೆ ಮೊದಲಾದವರು ಪ್ರತಿಪಾದಿಸಿದ ಪರಿಸರವಾದಿ ಸಾಹಿತ್ಯದ ಅಧ್ಯಯನ ಅಗತ್ಯ. ಔಪಚಾರಿಕ ಶಿಕ್ಷಣದಿಂದ ಆಚೆಗೆ ಹೋಗಿ ಚಾರಣ, ಕಾಡಿನ ಕುರಿತು ಅಧ್ಯಯನ ಮಾಡುವುದು ಹಿಂದೆಂದಿಗಿಂತಲೂ ಇಂದು ಹೆಚ್ಚು ಅಗತ್ಯವಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಸವತತ್ವ ಮಠಾಧೀಶರು ʼಏಕ ಸಂಸ್ಕೃತಿʼ ಉತ್ಸವ ಬಹಿಷ್ಕರಿಸಲಿ

ಕಾರ್ಯಕ್ರಮದಲ್ಲಿ ಬೀದರ ಟೀಮ್ ಯುವ ಸದಸ್ಯರಾದ ಹರ್ಷವರ್ಧನ ರಾಠೋಡ, ಆಧವನ್, ಗೋಕುಲ್, ಚಿನ್ಮಯ್, ಐಕ್ಯೂಎಸಿ ಸಂಯೋಜಕ ಪವನ ಪಾಟೀಲ, ಗುರುದೇವಿ ಕಿಚಡೆ, ನೀಲಮ್ಮ ಮೇತ್ರೆ, ಅಶೋಕರೆಡ್ಡಿ, ಎಂ.ಡಿ.ಜಬಿ ಬಸವರಾಜ ಗುಂಗೆ ಮತ್ತಿತರಿದ್ದರು. ಡಾ.ಶಾಂತಲಾ ಪಾಟೀಲ ಸ್ವಾಗತಿಸಿದರು. ಗಂಗಾಧರ ಸಾಲಿಮಠ ನಿರೂಪಿಸಿದರು. ನಾಗವೇಣಿ ಬಿರಾದಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...