ಕರ್ನಲ್‌ ಸೋಫಿಯಾ ಕುರೇಷಿ ವಿರುದ್ಧ ಅಪಮಾನಕಾರಿ ಹೇಳಿಕೆ; ಬಿಜೆಪಿ ಸಚಿವ ವಿಜಯ್‌ ಶಾ ಗಡಿಪಾರಿಗೆ ಆಗ್ರಹ

Date:

ಭಯೋತ್ಪಾದಕ ರಾಷ್ಟ್ರ ಪಾಕಿಸ್ತಾನವನ್ನ ದಿಟ್ಟತನದಿಂದ ಎದುರಿಸಿದ ಆಪರೇಷನ್ ಸಿಂಧೂರ ತಂಡದ ಕರ್ನಲ್ ಸೋಫಿಯಾ ಕುರೇಷಿ ಅವರ ದಿಟ್ಟತನದ ಹೋರಾಟವನ್ನು ಅಪಮಾನಗೊಳಿಸಿರುವ ಹಾಗೂ ದೇಶದ ವೀರ ಸೈನಿಕರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾನನ್ನು ಕೂಡಲೇ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಪ್ರತಿಭಟನೆ ನಡೆಸಿತು.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಾಂಗ್ರೆಸ್ ಭವನ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡು, ವಿಜಯ್‌ ಶಾ ಅವರ ಪ್ರತಿಕೃತಿ ದಹನ ನಡೆಸಲಾಯಿತು. ದೇಶದ್ರೋಹಿ ಪಾಕಿಸ್ತಾನದ ಏಜೆಂಟ್ ವಿಜಯ್ ಶಾ ನನ್ನ ಕೂಡಲೇ ಗಲ್ಲಿಗೆ ಹಾಕಬೇಕೆಂದು ಆಗ್ರಹಿಸಿ ಘೋಷಣೆ ಕೂಗಲಾಯಿತು.

“ಬಿಜೆಪಿಯ ರಣ ಹೇಡಿಗಳು ಮಹಿಳೆಯರನ್ನ ಅಪಮಾನಿಸುತ್ತಿರುವುದು ನಿರಂತರವಾಗಿ ನಡೆಯುತ್ತಿದೆ. ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಘೋಷಿಸಿ, ಶತ್ರು ರಾಷ್ಟ್ರವನ್ನು ಸದೆಬಡಿದ ದಿಟ್ಟ ಮಹಿಳೆ ಕರ್ನಲ್ ಸೋಫಿಯಾ ಕುರೇಷಿ ಅವರನ್ನ ಇಂದು ಅಪಮಾನಿಸಿರುವುದು ದೇಶದ ನಾಗರಿಕ ಸಮಾಜವನ್ನು ಅಪಮಾನಗೊಳಿಸಿದಂತಾಗಿದೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಮುಂದಾಗಿದ್ದ ಸೋಫಿಯಾ ರವರ ದಿಟ್ಟತನವನ್ನು ಇಡೀ ವಿಶ್ವವೇ ಮೆಚ್ಚಿದೆ ಆದರೂ ಕಿಡಿಗೇಡಿ ಬಿಜೆಪಿ ನಾಯಕರು ತಮ್ಮ ಹಿಂದಿನ ಕೋಮು ಭಾವನೆಯನ್ನ ಈ ಮೂಲಕ ಪ್ರಚಾರ ಪಡಿಸಿಕೊಳ್ಳಲು ಅವರನ್ನು ಅಪಮಾನಗೊಳಿಸಿರುವುದು ದೇಶದ ಮಹಿಳೆಯರನ್ನು ಅಪಮಾನಿಸಿದಂತಾಗಿದೆ” ಎಂದು ಕೆಪಿಸಿಸಿ ಮುಖಂಡರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 15 at 3.59.09 PM 1

“ಪಾಕಿಸ್ತಾನವನ್ನು ಇಬ್ಭಾಗ ಮಾಡಿದ ದಿಟ್ಟ ನಾಯಕಿ ಇಂದಿರಾ ಗಾಂಧಿಜಿ ರವರನ್ನು ಇಡೀ ದೇಶವೇ ಇಂದು ನೆನೆಯುತ್ತಿದೆ. ಅದರಂತೆ ಕರ್ನಲ್ ಸೋಫಿಯಾ ಕುರೇಷಿ ರವರ ಪರಾಕ್ರಮವನ್ನು ಜನ ಮೆಚ್ಚುತ್ತಿರುವುದನ್ನು ಸಹಿಸದ ಬಿಜೆಪಿಗರು ಇಂದು ಇಂತಹ ದೇಶದ್ರೋಹಿ ಹೇಳಿಕೆಗಳನ್ನು ನೀಡಿ ಭಾರತೀಯ ಸೇನೆಯನ್ನೇ ಅಪಮಾನ ಗೊಳಿಸುತ್ತಿದ್ದಾರೆ. ಕೂಡಲೇ ಇಂತಹ ಹೇಳಿಕೆ ನೀಡಿರುವ ದೇಶದ್ರೋಹಿ ವಿಜಯ್ ಶಾ ನನ್ನು ಗಡಿಪಾರು ಮಾಡಬೇಕು ಮತ್ತು ಅವನನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದೆ ಹೋದರೆ ದೇಶದ್ರೋಹಿಗಳಿಗೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ರವರು ನೇರ ಬೆಂಬಲ ನೀಡುತ್ತಿದ್ದಾರೆ ಎಂಬುವ ಹೊಣೆಯನ್ನು ಹೊರಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಸಚಿವ ವಿಜಯ್ ಶಾ ನನ್ನ ಕೂಡಲೇ ದೇಶದಿಂದ ಗಡಿಪಾರು ಮಾಡಬೇಕು. ದೇಶದ ಸೈನಿಕರಲ್ಲಿ ಹಾಗೂ ನಾಗರಿಕರಲ್ಲಿ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಕೋರಬೇಕೆಂದು ಈ ಪ್ರತಿಭಟನೆ ಮೂಲಕ ಆಗ್ರಪಡಿಸಲಾಯಿತು.

ಪ್ರತಿಭಟನೆಯಲ್ಲಿ ಎಂಇಐ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಮುಖಂಡರಾದ ಎಂ ಎ ಸಲೀಂ, ಎ.ಆನಂದ್, ಪ್ರಕಾಶ್, ಉಮೇಶ್, ಕೆ.ಟಿ ನವೀನ್, ಸುಂಕದಕಟ್ಟೆ ನವೀನ್, ಓಬಳೇಶ್, ನವೀನ್ ಸಾಯಿ, ಪುಟ್ಟರಾಜು, ಕುಶಾಲ್ ಹರುವೇಗೌಡ, ಪ್ರವೀಣ್, ಸಂಜಯ್ ಸಶಿಮಠ ಸೇರಿದಂತೆ ಹಲವಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...