ಬೀದರ್‌ | ಒಳಮೀಸಲಾತಿ ಹೆಸರಿನಲ್ಲಿ ಬಿಜೆಪಿ ಮೋಸದಾಟ : ಬಸವರಾಜ ಕೌತಾಳ್

Date:

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಒಳಮೀಸಲಾತಿ ಹೆಸರಿನಲ್ಲಿ ದಲಿತರೊಂದಿಗೆ ಮೋಸದಾಟ ಆಡುತ್ತಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಅಧ್ಯಕ್ಷ ಬಸವರಾಜ ಕೌತಾಳ ಆರೋಪಿಸಿದರು.

ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ವತಿಯಿಂದ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ  ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, “ಸಂವಿಧಾನಬದ್ಧ ಮೀಸಲಾತಿ ವರ್ಗೀಕರಣಕ್ಕಾಗಿ ಮಾದಿಗ ಸಮುದಾಯ 30 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದೆ. ಆದರೆ, ಬಿಜೆಪಿ ಸಂಸದರು ಒಂದು ದಿನವೂ ಸಂಸತ್ತಿನಲ್ಲಿ ಮೀಸಲಾತಿ ಬಗ್ಗೆ ಮಾತನಾಡಿಲ್ಲ. ನರೇಂದ್ರ ಮೋದಿಯವರು ಒಳಮೀಸಲಾತಿ ಬಗ್ಗೆ ಒಂದೇ ಒಂದು ಮಾತನಾಡಿಲ್ಲ. ಆದರೆ, ತೆಲಂಗಾಣದ ಚುನಾವಣೆಯ ಲಾಭ ಪಡೆಯಲು ವಿಶ್ವರೂಪಂ ಸಮಾವೇಶಕ್ಕೆ ಬಂದು ನಾಟಕ ಮಾಡಿದರೇ ಹೊರತು ಅಲ್ಲಿಯೂ ವರ್ಗಿಕರಣ ನಾನು ಮಾಡೇ ಮಾಡುತ್ತೇನೆ ಎಂದು ಒಮ್ಮೆಯೂ ಬಾಯಿ ಬಿಡಲಿಲ್ಲ. ಇಂತಹ ಪಕ್ಷವನ್ನು ಮಾದಿಗ, ಛಲವಾದಿ, ತ್ರಿಮಸ್ಥ ಸೇರಿದಂತೆ ಎಲ್ಲಾ ದಲಿತರು ತಿರಸ್ಕರಿಸಬೇಕು” ಎಂದು ತಿಳಿಸಿದರು.

2008ರಲ್ಲಿ ಯುಪಿಎ ಸರ್ಕಾರ ನೇಮಿಸಿದ್ದ ಜಸ್ಟೀಸ್ ಉಷಾ ಮೆಹ್ರಾ ಸಮಿತಿ ಮೀಸಲಾತಿ ವರ್ಗಿಕರಣಕ್ಕೆ ಸಂವಿಧಾನದ ತಿದ್ದುಪಡಿ ಅಗತ್ಯ ಎಂದು ವಾದಿಸಿ ಸಮಗ್ರವಾದ ರಾಷ್ಟ್ರಮಟ್ಟದ ವರದಿ ಸಲ್ಲಿಸಿತ್ತು. ಈ ಶಿಫಾರಸ್ಸು ಇದ್ದರೂ ಮೋದಿ ಸರ್ಕಾರ ಸಂವಿಧಾನ ತಿದ್ದುಪಡಿ ಮಾಡಲಿಲ್ಲ. ಬದಲಿಗೆ ಇನ್ನೊಂದು ಸಮಿತಿ ರಚಿಸಿದ್ದು ವಂಚಿತ ಸಮುದಾಯಗಳಿಗೆ ಮಾಡಿದ ಮೋಸವಲ್ಲದೆ ಮತ್ತೇನು ಇಲ್ಲ. ಈಗಿನ ಸಮಿತಿಯಲ್ಲಿ ಮೀಸಲಾತಿ ವರ್ಗೀಕರಣ ಕುರಿತು ಪ್ರಸ್ತಾಪ ಇಲ್ಲದಿರುವುದು ದಲಿತರೊಂದಿಗೆ ಆಡುತ್ತಿರುವ ಮೋಸದಾಟವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶೇ. 3ರಷ್ಟಿರುವ ಬ್ರಾಹ್ಮಣ ಬನಿಯಾಗಳಿಗೆ ಸಂವಿಧಾನ ತಿದ್ದುಪಡಿ ಮಾಡುವ ಮೂಲಕ ಇಡಬ್ಲೂ ಎಸ್ ಹೆಸರಿನಲ್ಲಿ ಶೇ. 10ರಷ್ಟು ಮೀಸಲಾತಿ ನೀಡಲು ಕೇವಲ ಒಂದು ವಾರವಷ್ಟೇ ಬಿಜೆಪಿಗೆ ಸಾಕಾಯಿತು. 30 ವರ್ಷ ನಾವು ಹೋರಾಟ ಮಾಡಿದ್ದರೂ ನಮ್ಮ ಹೋರಾಟಕ್ಕೆ ಬೆಲೆ ಇಲ್ಲದಂತಾಗಿದೆ” ಎಂದು ಅಸಮಾಧಾನ ಹೊರಹಾಕಿದರು.

ಒಕ್ಕೂಟದ ಮುಖಂಡ ಚಂದ್ರಕಾಂತ ಹಿಪ್ಪಳಗಾಂವೆ ಮಾತನಾಡಿ, “ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ 10 ವರ್ಷಗಳ ಕಾಲ ಜನರು ನೋಡಿ ಬೇಸತ್ತಿದ್ದಾರೆ. ಅವರಿಂದ ಯಾವುದೇ ಹೇಳಿಕೊಳ್ಳುವಂಥ ಅಭಿವೃದ್ಧಿ ಕಾರ್ಯಗಳಾಗಲಿಲ್ಲ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಈಶ್ವರ ಖಂಡ್ರೆಯವರನ್ನು ಆರಿಸಿ ತರೋಣ. ಯುವಕರು ಹಾಗೂ ಉತ್ಸಾಹಿಗಳಾಗಿರುವ ಸಾಗರ ಖಂಡ್ರೆ ಅತಿ ಚಿಕ್ಕ ವಯಸ್ಸಿನ ಸಂಸದರೆಂದು ಎನಿಸಿಕೊಂಡು ಜಿಲ್ಲೆಗೆ ಕೀರ್ತಿ ತರಬೇಕಾದರೆ ಎಲ್ಲಾ ದಲಿತ ವರ್ಗಗಳ ಮತ ಅವರಿಗೆ ಬೀಳಬೇಕು” ಎಂದರು.

“ನಮ್ಮ ದಲಿತ ಸಮಾಜ ಅವರ ಬೆನ್ನಿಗಿದೆ. ಪರಿಶಿಷ್ಟರಲ್ಲಿನ 101 ಸಮುದಾಯಗಳಲ್ಲಿ ಮಾದಿಗರು, ಛಲವಾದಿ, ಅಲೆಮಾರಿ, ತ್ರಿಮಸ್ಥರು ಒಗ್ಗಟ್ಟಾಗಿ ಬಾಬಾ ಸಾಹೇಬರ ಸಂವಿಧಾನದ ಆಶಯ ಗಟ್ಟಿಗೊಳಿಸಲು ಕಾಂಗ್ರೆಸ್‌ಗೆ ಮತ ನೀಡಿ ಎಂದರಲ್ಲದೆ ನಮ್ಮ ಒಳಮಿಸಲಾತಿಗೆ ದ್ರೋಹ ಮಾಡಿದ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಗೆ ಸೋಲಿಸಲು ನಾವೆಲ್ಲರೂ ಒಮ್ಮತದಿಂದ ಸಾಗಬೇಕಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಿಜೆಪಿಯಿಂದ ಸಂವಿಧಾನ ಆಶಯಗಳು ಬುಡಮೇಲು : ಡಿ.ಜಿ.ಸಾಗರ್

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಬಕ್ಕಪ್ಪ ದಂಡೀನ್, ಬಾಬುರಾವ ಕೌಠಾ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...