ಮೈಸೂರು | ಮನುವಾದಿಗಳ ವಿಷ ತಲೆಗೇರಿಸಿಕೊಂಡ ಬಿಜೆಪಿಗರು; ಮುಸ್ಲಿಮರ ಕಂಡರೆ ದ್ವೇಷಕಾರುವುದನ್ನು ಬಿಡಿ : ಸಚಿವ ಮಹದೇವಪ್ಪ

Date:

ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಮತ್ತು ಹಲವು ಜನಪರ ಚಳವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದರ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ‘ಮನುವಾದಿಗಳ ವಿಷ ತಲೆಗೇರಿಸಿಕೊಂಡ ಬಿಜೆಪಿಗರು
ಮುಸ್ಲಿಮರ ಕಂಡರೆ ದ್ವೇಷಕಾರುವುದನ್ನು ಮೊದಲು ಬಿಡಬೇಕು’ ಎಂದು ಹೇಳಿದರು.

ಬೂಕರ್ ಪ್ರಶಸ್ತಿಯ ಮೂಲಕ ಕನ್ನಡ ನಾಡಿನ ಕಂಪನ್ನು ವಿಶ್ವದೆಲ್ಲೆಡೆ ಹಬ್ಬುವ ಕೆಲಸ ಮಾಡಿರುವ ಬಾನು ಮುಷ್ತಾಕ್ ಅವರನ್ನು ಈ ನಾಡಿನ ಪ್ರಜೆಗಳಾಗಿ ಬಿಜೆಪಿಗರು ಮುಕ್ತ ಮನಸ್ಸಿನಿಂದ ಒಪ್ಪಿಕೊಂಡು ಗೌರವಿಸಬೇಕಿತ್ತು. ಆದರೇ ಬಿಜೆಪಿಗರು ಆಕ್ಷೇಪ ವ್ಯಕ್ತಪಡಿಸಿರುವುದು ಅತ್ಯಂತ ಬೇಸರದ ಸಂಗತಿ. ಎಲ್ಲದರಲ್ಲೂ ಧರ್ಮ, ಜಾತಿಗಳ ನೋಡುವ ಕೆಟ್ಟ ಮನಸ್ಥಿತಿ ತೊಲಗಬೇಕಿದೆ. ಸಾಧಕರ ಬಗ್ಗೆ ಮಾತಾಡುವಾಗ ನಾಲಿಗೆ ಹರಿಬಿಡುವುದು, ಕೀಳು ಮಟ್ಟದ ರಾಜಕೀಯಕ್ಕೆ ಬಳಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

ಬಿಜೆಪಿಗರಿಗೆ ಮುಸ್ಲಿಮರ ಹೆಸರು ಕಂಡರೆ ಸಾಕು, ಕಾರಣವಿಲ್ಲದೆಯೇ ದ್ವೇಷ ಮಾಡುವ ತಮ್ಮ ಕೆಟ್ಟ ನೀತಿಯನ್ನು ಮುಂದುವರೆಸಿದ್ದಾರೆ. ಇದನ್ನೇ ಚಾಳಿ ಮಾಡಿಕೊಂಡಿದ್ದಾರೆ. ನಾಡಿಗೆ ಹೆಮ್ಮೆ ತಂದಿರುವ ಬೂಕರ್ ಪ್ರಶಸ್ತಿ ಪುರಸ್ಕೃರಾದ ಭಾನು ಮುಷ್ತಾಕ್ ರನ್ನು ಮುಸ್ಲಿಮ್ ಎನ್ನುವ ಕಾರಣಕ್ಕೆ ದಿಕ್ಕರಿಸುವುದು ಸಮಂಜಸವಲ್ಲ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಸರಾ ಎಂಬುದು ನಾಡಹಬ್ಬ ಎಂಬ ಸಣ್ಣ ಸಂಗತಿಯನ್ನು ಮರೆತು, ಸೀಮಿತ ಕಳೆದುಕೊಂಡಂತೆ ವರ್ತಿಸುತ್ತಿರುವ ಬಿಜೆಪಿಗರು ನಾಡು ನುಡಿಗೆ ಕೊಡುಗೆ ನೀಡಿದವರನ್ನು ಅವಮಾನಿಸುವ ಕೆಲಸವನ್ನು ಮೊದಲು ನಿಲ್ಲಿಸಲಿ. ಧರ್ಮವನ್ನು ರಾಜಕೀಯದಲ್ಲಿ ಬೆರೆಸಬಾರದೆಂಬ ಸಣ್ಣ ಅರಿವನ್ನು ಬಿಜೆಪಿಯೊಳಗೆ ಅಳಿದುಳಿದಿರುವ ಕೆಲವರಾದರೂ ವಿಚಾರವಂತರು ತಮ್ಮ ಪಕ್ಷದ ಮುಖಂಡರಿಗೆ ತಿಳಿಸಲಿ ಎಂದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ‘ಹಾರ್ಟಿ ಪಂಕ್ಚರ್’ ಹೊಸ ತಂತ್ರಜ್ಞಾನ ಗಿಡ ಮರಗಳ ಕೊರತೆ ನೀಗಿಸುತ್ತದೆ : ಸುರೇಶ್ ದೇಸಾಯಿ

ಭಾರತೀಯ ಜನಗಳಾದ ನಾವು ಐಕ್ಯತೆಯಿಂದ ಇರಬೇಕೆಂಬ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ವರ್ತಿಸುತ್ತಿರುವ ಬಿಜೆಪಿಗರು ತಮ್ಮ ಈ ಮುಸ್ಲಿಂ ದ್ವೇಷದ ಮನಸ್ಥಿತಿಯನ್ನು ಬದಿಗಿಟ್ಟು ಸಂವಿಧಾನದ ಆಶಯವನ್ನು ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...