ಪ್ರಧಾನಿ ಮೋದಿ ಮುಂದೆ ಬಿಜೆಪಿ ಸಂಸದರು ಬಾಯಿ ತೆಗೆಯಲು ಹೆದರುತ್ತಾರೆ: ಪ್ರಿಯಾಂಕ್‌ ಕಿಡಿ

Date:

  • ಪ್ರಧಾನಿಯವರು ಮಧ್ಯಪ್ರವೇಶಿಸಲಿ ಅಂತ ನಾವು ಆಗ್ರಹಿಸುತ್ತಿದ್ದೇವೆ
  • ಬಿಜೆಪಿಯವರಿಗೆ ಕನ್ನಡಿಗರ ಬಗ್ಗೆ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ

ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಮುಂದೆ ಬಾಯಿ ತೆಗೆಯಲು ಹೆದರುತ್ತಾರೆ. ಜೆಡಿಎಸ್ ಒಂದು ಪ್ರಾದೇಶಿಕ ಪಕ್ಷ. ಅವರು ಸಹಜವಾಗಿಯೇ ಕಾವೇರಿ ಬಗ್ಗೆ ಮಾತನಾಡುತ್ತಾರೆ. ಆದರೆ ಪ್ರಧಾನಿಯವರು ಮಧ್ಯಪ್ರವೇಶ ಮಾಡಲಿ ಅಂತ ನಾವು ಆಗ್ರಹಿಸುತ್ತಿದ್ದೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, “ಕಾವೇರಿ ವಿವಾದದ ವಿಚಾರವಾಗಿ ನಮ್ಮ‌ 25 ಮಂದಿ ಸಂಸದರು ಏಕೆ ಧ್ವನಿ ಎತ್ತುತ್ತಿಲ್ಲ? ಬಿಜೆಪಿಯವರಿಗೆ ಕನ್ನಡಿಗರ ಬಗ್ಗೆ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ. ಸರ್ವ ಪಕ್ಷಗಳ ಸಭೆಯಲ್ಲಿ ಬಿಜೆಪಿ ಒಗ್ಗಟ್ಟಾಗಿರಬೇಕು ಎನ್ನುತ್ತಾರೆ. ಹೊರಗಡೆ ಬಂದು ಬೇರೆ ತರಹವೇ ಮಾತನಾಡುವುದು ಬಿಜೆಪಿಯವರಿಗೆ ಚಾಳಿಯಾಗಿಬಿಟ್ಟಿದೆ” ಎಂದು ಟೀಕಿಸಿದರು.

“ಸಿಎಂ, ಡಿಸಿಎಂ ಹೋಗಿ ಜಲಸಂಪನ್ಮೂಲ ಸಚಿವರ ಭೇಟಿ ಮಾಡುವಾಗ ಬಿಜೆಪಿ ಸಂಸದರಿಗೆ ಏನಾಗಿತ್ತು? ಬಿಜೆಪಿ ವರಿಷ್ಠರಿಗೆ ಬೇರೆ ರಾಜಕೀಯ ವಿಷಯಕ್ಕೆ ಭೇಟಿ ಮಾಡಲು ಸಮಯ ಸಿಗುತ್ತದೆ. ಆದರೆ ನೀರಿನ ವಿಚಾರದಲ್ಲಿ ಭೇಟಿ ಮಾಡಲು ಸಮಯ ಸಿಗೋದಿಲ್ವಾ”ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರ್ನಾಟಕದಲ್ಲಿರುವುದು ಸ್ಟಾಲಿನ್‌ರ ಗುಲಾಮ ಸರ್ಕಾರ : ನೀರು ಬಿಟ್ಟಿದ್ದಕ್ಕೆ ಬಿಜೆಪಿ ಟೀಕೆ

“ಬಸವರಾಜ ಬೊಮ್ಮಾಯಿಯವರಿಗೆ ಕಾವೇರಿ ವಿವಾದದ ಸಾಧಕ ಬಾಧಕ ಎಲ್ಲವೂ ಗೊತ್ತಿದೆ. ಆದರೂ ರಾಜಕೀಯ ಕಾರಣಕ್ಕೆ ಹೇಳಿಕೆ ಕೊಡುತ್ತಾರೆ. ಕಾವೇರಿ ವಿಚಾರದಲ್ಲಿ ನಾವು ಕಾನೂನಾತ್ಮಕವಾಗಿಯೇ ನಡೆದುಕೊಳ್ಳಬೇಕಿದೆ” ಎಂದರು.

“ರಾಜ್ಯ ಬಿಜೆಪಿ ನಾಯಕರು ಹಾಗೂ ತಮಿಳುನಾಡು ಸ್ಟೇಟ್ ಬಿಜೆಪಿಯವರ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಬೇಕು. ನಳಿನ್ ಕುಮಾರ್ ಕಟೀಲ್ ಹಾಗೂ ಅಣ್ಣಾಮಲೈ ಇಬ್ಬರೂ ಸೇರಿ ಪ್ರಧಾನಿ ಬಳಿ ಮಾತನಾಡಿ ಸಮಸ್ಯೆ ಬಗೆಹರಿಸಲಿ. ರಾಜ್ಯದ ಹಿತಾಸಕ್ತಿ ಕಾಪಾಡಲು ನಾವು ಸಿದ್ದವಾಗಿಯೇ ಇದ್ದೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...