ಕಲಾಪದಿಂದ ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ

Date:

  • ಶಾಸಕರ ಅಮಾನತು ಖಂಡಿಸಿ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ನಿರ್ಧಾರ
  • ಸಿದ್ದರಾಮಯ್ಯ ಮೇಲೆ ಮಾತ್ರ ಬಸಪ್ಪ, ಆದರೆ ಒಳಗೆ ಮಾತ್ರ ವಿಷಪ್ಪ: ಛಲವಾದಿ

ಬಿಜೆಪಿಯ ಹತ್ತು ಜನ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಅಮಾನತು ಮಾಡಿರುವ ಸ್ಪೀಕರ್ ಯು ಟಿ ಖಾದರ್ ಆದೇಶ ಖಂಡಿಸಿ ಬಿಜೆಪಿ ಸದಸ್ಯರು ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಎದುರು ಗುರುವಾರ ಧರಣಿ ನಡೆಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಸುನಿಲ್‌ ಕುಮಾರ್‌, ಎಸ್‌ ಸುರೇಶ್‌ ಕುಮಾರ್‌, ಮುನಿರತ್ನ ಸೇರಿದಂತೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಮಾಜಿ ಸಚಿವ ಆರ್.ಅಶೋಕ್ ಮಾತನಾಡಿ, “ಸ್ಪೀಕರ್ ಪೀಠಕ್ಕೆ ಯು ಟಿ ಖಾದರ್​ ಅಗೌರವ ತೋರಿದ್ದಾರೆ. ಸ್ಪೀಕರ್ ಆದವರು ಒಂದು ಪಾರ್ಟಿ ಪರವಾಗಿ ಇರಬಾರದು. ಸೋನಿಯಾ, ರಾಹುಲ್​ರನ್ನು ಸ್ಪೀಕರ್ ಭೇಟಿಯಾಗಿದ್ದಾರೆ. ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಿ ನ್ಯಾಯ ಕೇಳಿದ್ದೆವು. ಪ್ರಶ್ನೆ ಮಾಡಿದ್ದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ. ಸ್ಪೀಕರ್ ಕ್ರಮ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯ ಒಬ್ಬ ಗೋಮುಖ ವ್ಯಾಘ್ರ: ಛಲವಾದಿ ನಾರಾಯಣಸ್ವಾಮಿ

“ಸಿದ್ದರಾಮಯ್ಯ ಒಬ್ಬ ಗೋಮುಖ ವ್ಯಾಘ್ರ. ಬಿಜೆಪಿಯ ಹೋರಾಟ ನ್ಯಾಯಯುತವಾಗಿತ್ತು. ಡೆಪ್ಯುಟಿ ಸ್ಪೀಕರ್ ಅಂತ ದಲಿತರ ಮೇಲೆ ಪ್ರೀತಿ ತೋರಿಸುವ ಸಿದ್ದರಾಮಯ್ಯ ನವರೇ ದಲಿತರ ಸಮಾಧಿ ಮೇಲೆ ಕುಳಿತಿರೋದು ನೀವೇ ತಾನೇ? ನೀವು ಸಿಎಂ ಆಗಿ ಕುಳಿತಿರೋದು ನಿಮ್ಮ ಜಾಗದಲ್ಲಿ ಅಲ್ಲ, ದಲಿತರ ಸ್ಥಾನದಲ್ಲಿ. ನಿಮಗೆ ತಾಕತ್ ಇದ್ರೆ ಘೋಷಣೆ ಮಾಡಿ. ನೀವು ಅನುಭವಿಸಿರುವ ಎಲ್ಲಾ ಅಧಿಕಾರ ದಲಿತರಿಗೆ ಸೇರಬೇಕಿದೆ” ಎಂದು ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು.

“ನಿಮಗೆ ಸ್ವಲ್ಪ ದಲಿತ ಕಾಳಜಿ ಇದ್ರೆ ಇವತ್ತು ರಾಜೀನಾಮೆ ನೀಡಿ. ದಲಿತರಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ. ಇಲ್ಲವಾದಲ್ಲಿ ನೀವು ಒಬ್ಬ ಗೋಮುಖ ವ್ಯಾಘ್ರ. ಸಿದ್ದರಾಮಯ್ಯ ಮೇಲೆ ಮಾತ್ರ ಬಸಪ್ಪ, ಆದರೆ ಒಳಗೆ ಮಾತ್ರ ವಿಷಪ್ಪ” ವಾಗ್ದಾಳಿ ನಡೆಸಿದರು.

ರಾಜ್ಯಪಾಲರಿಗೆ ದೂರು

ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರ ಅಮಾನತು ಹಿನ್ನೆಲೆ ರಾಜ್ಯಪಾಲ ಗೆಹ್ಲೋಟ್​​ಗೆ ದೂರು ನೀಡಲು ಬಿಜೆಪಿ ಶಾಸಕರು ನಿರ್ಧರಿಸಿದ್ದಾರೆ. ವಿಧಾನಸೌಧದಿಂದ ರಾಜಭವನದವರೆಗೂ ಬಿಜೆಪಿ ನಾಯಕರು ಪಾದಯಾತ್ರೆ ಮೂಲಕ ತೆರಳಿ ದೂರು ನೀಡಲು ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...