ಬಿಜೆಪಿಯವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು: ಸಿದ್ದರಾಮಯ್ಯ ತರಾಟೆ

Date:

  • ‘ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡ ಕೇಂದ್ರ ಬಿಜೆಪಿ’
  • ‘ಅಕ್ಕಿ ಇಟ್ಟುಕೊಂಡು ಕೊಡಲ್ಲ ಎಂದರೆ ಬಿಜೆಪಿಯದ್ದು ದುಷ್ಟ ರಾಜಕಾರಣ’

ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್‌ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3,400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡುವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ” ಎಂದು ದೂರಿದ್ದಾರೆ.

“ಜೂನ್ 13 ರಂದು ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದು 15 ಲಕ್ಷ ಮೆ.ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ ಯೋಜನೆಯಡಿ (ಒ.ಎಂಎಸ್.ಎಸ್ ಡಿ) ಮಾರಾಟ ಮಾಡಲು ಸೂಚಿಸಿದೆ. ಅಲ್ಲದೆ ಈಶಾನ್ಯ ರಾಜ್ಯಗಳನ್ನು ಹೊರತು ಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಫ್‌.ಸಿ.ಐ. ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1 ರಿಂದ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು. ಎಫ್.ಸಿ.ಐ ನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬುವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಕ್ಕಿ ಪೂರೈಕೆ ನಿರಾಕರಣೆ: ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗೆ ಕಲ್ಲು ಹಾಕಿದ ಕೇಂದ್ರ ಸರಕಾರ

“ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ. ಇಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಇಂದು ಸಂಜೆಯೊಳಗೆ ಲಭಿಸಲಿದೆ. ಇಂದು ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ” ಎಂದಿದ್ದಾರೆ.

“ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು. ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ ನಾವು ಹಣ ನೀಡಿ ಪಡೆಯುವುದು. ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಪುನಃ ಮನವಿ ಮಾಡುವುದು ಇದ್ದೇ ಇರುತ್ತದೆ ಆದರೆ ಈ ರೀತಿ ಮಾಡಿರುವುದರಿಂದ ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ” ಎಂದು ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...