ಎಸ್‌ಐಆರ್ ಬಿಜೆಪಿ ಪಟ್ಟ ಉಳಿಸಿಕೊಳ್ಳುವ ತಂತ್ರ: ಶಿವಸುಂದರ್

Date:

ಎಸ್ ಐ ಆರ್ (ವಿಶೇಷ ತೀವ್ರ ಪರಿಷ್ಕರಣೆ) ಎಂಬುದು ಬಿಜೆಪಿ ತನ್ನ ಅಧಿಕಾರ ಉಳಿಸಿಕೊಳ್ಳಲು, ತನ್ನದೇ ಮತಗಳನ್ನು ಹೆಚ್ಚಿಸಲು ಹೂಡಿರುವ ತಂತ್ರವಾಗಿದೆ. ಈ ಮೂಲಕ ತನ್ನ ವಿರೋಧಿಗಳನ್ನು ಮತದಾನ ಪ್ರಕ್ರಿಯೆಯಿಂದ ದೂರ ಇಟ್ಟು ಅಧಿಕಾರ ಮೆರೆಯುವ ದುರುದ್ದೇಶವಿದೆ, ಎಂದು ಖ್ಯಾತ ಲೇಖಕ ಶಿವಸುಂದರ್ ಹೇಳಿದರು.

ಮಂಗಳೂರಿನಲ್ಲಿ ಆಯೋಜಿಸಿದ್ದ ‘ನನ್ನ ಮತ, ನನ್ನ ಹಕ್ಕು ‘ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. “ಚುನಾವಣಾ ಆಯೋಗವನ್ನು ಬಲಹೀನಗೊಳಿಸುವುದು ಕಷ್ಟವಾದರೂ, ನಾಗರಿಕನ ಮತದ ಹಕ್ಕನ್ನು ಕಸಿಯುವುದು ಮೋದಿ ಸರಕಾರದ ಉದ್ದೇಶ. ಮತದಾನದ ಹಕ್ಕು ಕಳೆದುಕೊಂಡಾಗ ನಾಗರಿಕತ್ವದ ವಿಚಾರ ಬರುತ್ತದೆ. ಒಂದುದೇಶದ ನಾಗರಿಕ ಹಕ್ಕು ಕಳೆದುಕೊಳ್ಳುವುದು ಎಂದರೆ ಅದು ‘ನಾಗರಿಕ ಸಾವು’ ಎಂದ ಅವರು ಹೋರಾಟವೊಂದೇ ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಇರುವ ದಾರಿ” ಎಂದು ಪ್ರತಿಪಾದಿಸಿದರು.

“1995ರಲ್ಲಿ ನಾಗರಿಕರನ್ನು ಪೊಲೀಸ್ ವರದಿ ಮೇಲೆ ಮತದಾರರ ಪಟ್ಟಿಯಿಂದ ಕಿತ್ತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್,ಇದು ನ್ಯಾಯಾಧಿಕರಣ ಮಾಡಬೇಕಾದ ಕೆಲಸ, ಅಧಿಕಾರಿಯ ವ್ಯಾಪ್ತಿಗೆ ಬರುವುದಿಲ್ಲ ಎಂದು ತೀರ್ಪು ನೀಡಿತ್ತು. ಹಾಗಾಗಿ ಎಸ್ ಐ ಆರ್ ಕಾನೂನು ಉಲ್ಲಂಘನೆ ಯ ಕೆಲಸ. ಬಿಜೆಪಿ ತನ್ನ ಷಡ್ಯಂತ್ರ ದ ಮೂಲಕ ಅಧಿಕಾರ ದುರುಪಯೋಗ ಮಾಡುತ್ತಿರುವ ಈ ಪ್ರಕ್ರಿಯೆ ಮುಸ್ಲಿಂ ಸಮುದಾಯವನ್ನು ಗುರಿ ಮಾಡಿರುವುದಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಎಲ್‌ಒ ನೀಡಿದ ವರದಿ ಆಧಾರದಲ್ಲಿ ಇಎಲ್‌ಒ ಒಬ್ಬನ ನಾಗರಿಕ ಹಕ್ಕನ್ನು ಕಸಿದುಕೊಳ್ಳುವುದು ಎಂದರೆ ಇದೊಂದು ದೇಶದ ಆಡಳಿತ ವ್ಯವಸ್ಥೆಯಲ್ಲಿ ಜನರ ಕಷ್ಟವನ್ನು ಅರ್ಥ ಮಾಡಿಕೊಳ್ಳಬಹುದು. ಎಸ್ ಐ ಆರ್ ನಿಜವಾದ ಅರ್ಥದ ಮತದಾರರ ಪರಿಷ್ಕರಣೆ ಆಗಿದ್ದಲ್ಲಿ ಒಪ್ಪಿಕೊಳ್ಳಬಹುದಿತ್ತು. ಆದರೆ ಇದರ ಉದ್ದೇಶ ಬೇರೆಯೇ ಆಗಿದೆ, ಹಾಗಾಗಿ ಪ್ರಜ್ಞಾವಂತರು ಇದನ್ನು ವಿರೋಧಿಸಬೇಕಾಗಿದೆ” ಎಂದು ಶಿವಸುಂದರ್ ಹೇಳಿದರು.

“ರಾಜ್ಯ ಹೈಕೋರ್ಟ್ ನ್ಯಾಯವಾದಿ ಕ್ಲಿಪ್ಟನ್ ರೋಜಾರಿಯೋ ಮಾತನಾಡಿ, ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಶೀಲನೆ ನಡೆಯುತ್ತಿದೆ. ಇದರ ಹಿಂದಿನ ಉದ್ದೇಶ ಕೋಮುವಾದ ಮತ್ತು ಜಾತಿವಾದ ಎಂಬುದು ಗೊತ್ತಾಗಿದೆ. ನಮಗೆ ಹೋರಾಟ ಮಾತ್ರ ದಾರಿಯಾಗಿದೆ. ದೇಶದಲ್ಲಿ ಅರ್ಹ ನಾಗರಿಕರು ತಮ್ಮ ಮೂಲಭೂತ ಹಕ್ಕನ್ನು ಕಳೆದುಕೊಂಡಲ್ಲಿ ಪ್ರಜಾಪ್ರಭುತ್ವದ ಅರ್ಥ ಮಾಯವಾಗುತ್ತದೆ” ಎಂದರು.

ಮಂಗಳೂರು ಮಾಜಿ ಮೇಯರ್ ಕೆ. ಅಶ್ರಫ್, ಪಿಯುಸಿಎಲ್ ನ ಐಶ್ವರ್ಯ, ವೆಲ್ಫೇರ್ ಪಾರ್ಟಿಯ ಶ್ರೀಕಾಂತ್ ವೇದಿಕೆಯಲ್ಲಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...