2024ರಲ್ಲಿ ಬಿಜೆಪಿ ಸೋಲುತ್ತದೆ, ಯಾವುದೇ ಉತ್ಪ್ರೇಕ್ಷೆ ಇಲ್ಲ: ಸಿಎಂ ಸಿದ್ದರಾಮಯ್ಯ

Date:

  • ಕೆಪಿಸಿಸಿ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಅಭಿಮತ
  • ‘ಬಿಜೆಪಿಯದು ಅನಾಗರಿಕ, ಅಮಾನವೀಯ ಮನಸ್ಥಿತಿ’

2024ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸೋಲುತ್ತದೆ. ನನ್ನ ಅನುಭವದಿಂದ ಈ ಮಾತು ಹೇಳುತ್ತಿದ್ದೇನೆ, ಯಾವುದೇ ಉತ್ಪ್ರೇಕ್ಷೆ ಇಲ್ಲ. ಈ ಪ್ರಧಾನಿ ಮೋದಿ ಪಾರ್ಲಿಮೆಂಟ್‌ಗೆ ಸರಿಯಾಗಿ ಹೋಗಲ್ಲ, ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಲ್ಲ. ಬರೀ ಮನ್ ಕಿ ಬಾತ್. ಆ ಬಾತ್ ನಲ್ಲೂ ದೇಶದ ಜನ ಇರೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಮಾತನಾಡಿದರು.

“ಒಂದು ಕಡೆ ಆರ್‌ಎಸ್‌ಎಸ್‌ ಹಿಡನ್ ಅಜೆಂಡಾ ಜಾರಿಗೊಳಿಸುತ್ತಾ ಮತ್ತೊಂದು ಕಡೆ ಬೆಲೆ ಏರಿಕೆ, ಹಣದುಬ್ಬರ, ಭ್ರಷ್ಟಾಚಾರ, ದುರಾಡಳಿತದಿಂದ ನಾಡಿನ, ದೇಶದ ಜನತೆಯನ್ನು ವಿಪರೀತ ಸಂಕಷ್ಟಕ್ಕೆ ಸಿಲುಕಿಸಿದ್ದರು. ನಾಡಿನ ಜನ ಈ ಎಲ್ಲ ದುಷ್ಟಾಚಾರವನ್ನು ಸಮರ್ಥವಾಗಿ ಧಿಕ್ಕರಿಸಿ ಸೋಲಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನುಸ್ಮೃತಿಯ ಜಾತಿ ಆಧಾರಿತ ಶೋಷಿತ ನ್ಯಾಯಪದ್ಧತಿಯನ್ನು ಜಾರಿಗೆ ತರುವ ಮನಸ್ಥಿತಿಯವರು ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ವರ್ತಿಸುತ್ತಾ ಸಂವಿಧಾನವನ್ನು ಮುಗಿಸಲು ಯತ್ನಿಸುತ್ತಿದ್ದಾರೆ. ಸಂವಿಧಾನ ಬದಲಾವಣೆ ಆದರೆ ದೇಶದ ಶೇ.90 ಕ್ಕೂ ಹೆಚ್ಚು ಸಂಖ್ಯೆಯ ಜನರ ದುಡಿಯುವ ಮತ್ತು ಬದುಕಿನ ಅವಕಾಶಗಳು ನಾಶವಾಗುತ್ತದೆ. ಆದ್ದರಿಂದ ಸಂವಿಧಾನವನ್ನು ಉಳಿಸಿ ದೇಶದ ದುಡಿಯುವ ಜನ ವರ್ಗಗಳ ಬದುಕಿನ ಅವಕಾಶಗಳನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ದೇಶದ ಜನರ ಮೇಲಿದೆ” ಎಂದು ಹೇಳಿದರು.

“ಜನರ ಜೇಬಿನಲ್ಲಿರುವ ಹಣವನ್ನು ಕಿತ್ತು ಸಾವಿರಾರು ಕೋಟಿ ಒಡೆಯರಾಗಿರುವ ಶ್ರೀಮಂತರಿಗೆ ನೀಡುವುದು ಅವರ ಆರ್ಥಿಕತೆ. ನಮ್ಮ ರಾಜ್ಯಕ್ಕೆ ಬರಬೇಕಾದ ತೆರಿಗೆ ಮತ್ತು ಆರ್ಥಿಕತೆಯ ನೆರವನ್ನೂ ನೀಡದೆ ಇಡೀ ನಾಡಿನ ಜನತೆಗೆ ಬಿಜೆಪಿ ವಂಚಿಸಿದೆ. ಆದರೆ, ನಾವು ಜನರ ಜೇಬಿನಲ್ಲಿ ಹಣ ಉಳಿಯುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ. ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುವ ಆಯವ್ಯಯವನ್ನು ನಾವು ಮಂಡಿಸಿದ್ದೇವೆ. ಕರ್ನಾಟಕ ಮಾದರಿಯ ಈ ಅಭಿವೃದ್ಧಿಯನ್ನು ದೇಶದ ಎಲ್ಲಾ ರಾಜ್ಯಗಳೂ ಅಧ್ಯಯನ ನಡೆಸಿ ಅಳವಡಿಸಿಕೊಳ್ಳಲು ಮುಂದಾಗಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಹುಸಿ ದೇಶಭಕ್ತರ ಮೋದಿ ಕಾಲ; ಗಾಂಧಿ ಅವಮಾನಿಸುವ ಕಾಲ

ಬಿಜೆಪಿಯದು ಅನಾಗರಿಕ ಮನಸ್ಥಿತಿ

“ರಾಜ್ಯದ ಜನರ ಹಸಿವು ನೀಗಿಸಲು ಅಕ್ಕಿ ಕೊಡಿ ಎಂದರೆ ಕೊಡಲು ಒಪ್ಪದ ಬಿಜೆಪಿಯವರು ಈಗ ಆ ಸಾವಿರಾರು ಟನ್ ಅಕ್ಕಿ ಹಾಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಕೈಯಲ್ಲಿರುವ ಅಕ್ಕಿಗೆ ಹುಳು ಹಿಡಿಯುತ್ತಿದೆ. ಜನರು ಉಪವಾಸ ಇದ್ದರೂ ಪರ್ವಾಗಿಲ್ಲ, ಅಕ್ಕಿ ಹಾಳಾದರೂ ಪರ್ವಾಗಿಲ್ಲ ಆದರೆ ಹಸಿದವರಿಗೆ ಅಕ್ಕಿ ಕೊಡಬಾರದು ಎನ್ನುವುದು ಬಿಜೆಪಿಯ ಅತ್ಯಂತ ಅನಾಗರಿಕ ಮತ್ತು ಅಮಾನವೀಯ ಮನಸ್ಥಿತಿ” ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯ ಬೇಳೆಕಾಳು ಗೊತ್ತಾಗುತ್ತಿದೆ

“ದೇಶದ ಜನ‌ ನೆಮ್ಮದಿಯಾಗಿ, ಸಂತೋಷದಿಂದ ಇದ್ದರೆ ಬಿಜೆಪಿಗೆ ನೆಮ್ಮದಿ ಹಾಳಾಗುತ್ತದೆ. ಹೊಟ್ಟೆಕಿಚ್ಚು ಹೆಚ್ಚಾಗುತ್ತದೆ. ಈಗ ನಾವು ಬಿಜೆಪಿ ಕಾಲದ ಎಲ್ಲ ಹಗರಣಗಳು, ಭ್ರಷ್ಟಾಚಾರದ ತನಿಖೆ ಆರಂಭಿಸಿದ್ದೇವೆ. ಸದ್ಯದಲ್ಲೇ ಬಿಜೆಪಿ ಬೇಳೆಕಾಳು ಹೊರಗೆ ಬರುತ್ತದೆ” ಎಂದರು.

ಕನಿಷ್ಠ 20 ಲೋಕಸಭಾ ಸ್ಥಾನ

ವಿಧಾನಸಭಾ ಚುನಾವಣೆ ಬಳಿಕ ನಮ್ಮ ಕಾರ್ಯಕರ್ತರು ರಿಲಾಕ್ಸ್ ಆಗಬಾರದು. ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ತೀವಿ ಎಂದು ಹೈಕಮಾಂಡ್ ಗೆ ಭರವಸೆ ನೀಡಿದ್ದೀನಿ. ಇದಕ್ಕೂ ಹೆಚ್ಚು ಸೀಟು ಗೆಲ್ಲುತ್ತೀವಿ. ನಮಗೆ 42.8% ಮತ ಬಿದ್ದಿದೆ. ಇದು ಐತಿಹಾಸಿಕ. ಕರ್ನಾಟಕದ ಜನತೆ ದೇಶವನ್ನು ಕಾಪಾಡುವ ನಿಟ್ಟಿನಲ್ಲಿ ಬಹಳ ದೊಡ್ಡ ಹೆಜ್ಜೆ ಇಟ್ಟಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...