ಚುನಾವಣೆ ಸೋತ ನಂತರವೂ ಗೂಂಡಾ ರಾಜಕಾರಣ ಬಿಡದ ಬಿಜೆಪಿ: ರಮೇಶ್‌ ಬಾಬು ವಾಗ್ದಾಳಿ

Date:

  • ‘ಬಿಜೆಪಿ ನಾಯಕರೇ ಪ್ರಾಣಭಯದಲ್ಲಿ ಬದುಕುತ್ತಿದ್ದಾರೆ’
  • ‘ಪ್ರಭು ಚವ್ಹಾಣ್‌ ಅವರಿಗೆ ಸ್ಪೀಕರ್‌ ಸೂಕ್ತ ರಕ್ಷಣೆ ನೀಡಲಿ’

ಬಿಜೆಪಿ ನಾಯಕರೇ ಪ್ರಾಣಭಯದಲ್ಲಿ ಬದುಕುತ್ತಿದ್ದಾರೆ. ಚುನಾವಣೆಗೂ ಮೊದಲು ಗೂಂಡಾ ರಾಜಕಾರಣ ಮಾಡುತ್ತಿದ್ದ ಬಿಜೆಪಿ, ಚುನಾವಣೆ ಸೋತ ನಂತರವೂ ಹಳೆಯ ಚಾಳಿ ಬಿಟ್ಟಿಲ್ಲ ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಕಿಡಿಕಾರಿದರು.

ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಸಚಿವ ಭಗವಂತ ಖೂಬಾ ಅವರಿಂದ ನನಗೆ ಜೀವ ಬೆದರಿಕೆ ಹಾಕಲಾಗಿದೆ, ನನ್ನ ಪ್ರಾಣಕ್ಕೆ ಆಪತ್ತಿದೆ ಎಂದು ಔರಾದ್‌ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ್‌ ಅವರು ಗಂಬೀರವಾದ ಆರೋಪ ಮಾಡಿದ್ದಾರೆ. ಹೀಗಿದ್ದಾಗ್ಯೂ ಬಿಜೆಪಿಯಲ್ಲಿ ದಲಿತ ಶಾಸಕನ ಪರ ನಿಲ್ಲಲು ಯಾರೂ ಸಿದ್ದರಿಲ್ಲ” ಎಂದು ಟೀಕಿಸಿದರು.

“ವಿಧಾನಸಭಾ ಚುನಾವಣೆಯ ಮೊದಲು ಮತ್ತು ನಂತರವೂ ಬಿಜೆಪಿ ಅಪರಾಧಿಗಳಿಗೆ ಕುಮ್ಮಕ್ಕು ನೀಡುವ ಕೆಲಸ ಮಾಡಿಕೊಂಡು ಬರುತ್ತಿದೆ. ಬೀದರ್‌ ಜಿಲ್ಲಾ ಎಸ್‌ಪಿಗೆ ಭಗವಂತ ಖೂಬಾ ಅವರು ದೂರನ್ನು ಕೊಟ್ಟಿದ್ದು, ಅದರಲ್ಲಿ “ಪ್ರಭು ಚವ್ಹಾಣ್‌ ಅವರಿಗೆ ಏನಾದರೂ ತೊಂದರೆಯಾದರೆ ಅದಕ್ಕೆ ನಾನು ಹೊಣೆಗಾರನಲ್ಲ” ಎಂದ ದೂರನ್ನು ಕೊಟ್ಟಿದ್ದಾರೆ. ರಾಜ್ಯ ಬಿಜೆಪಿ ಘಟಕ ಖೂಬಾ ಅವರಿಗೆ ನೋಟಿಸ್‌ ನೀಡಬೇಕಿತ್ತು, ಸ್ಪಷ್ಟನೆ ಕೇಳಬೇಕಿತ್ತು ಅಥವಾ ಕೇಂದ್ರ ಸಂಪುಟದಿಂದ ತೆಗೆದು ಹಾಕಬೇಕಿತ್ತು. ಇದನ್ನೆಲ್ಲಾ ಮಾಡದೇ ಕ್ರಿಮಿನಲ್‌ಗಳನ್ನ ರಕ್ಷಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯರನ್ನು ಕೆಳಗಿಳಿಸಲು ʼಆಪರೇಷನ್‌ ಹಸ್ತʼಕ್ಕೆ ಮುಂದಾದ ಡಿಕೆ ಶಿವಕುಮಾರ್:‌ ಯತ್ನಾಳ್‌ ಆರೋಪ

ಸರ್ಕಾರ ರಕ್ಷಣೆ ನೀಡಲಿ

“ರಾಷ್ಟ್ರೀಯ ಬಿಜೆಪಿ ನಾಯಕರು ಸುಮ್ಮನೆ ಕುಳಿತಿದ್ದಾರೆ. ಕಾಂಗ್ರೆಸ್‌ ಪಕ್ಷವು ವಿಧಾನಸಭಾ ಸ್ಪೀಕರ್‌ ಅವರಲ್ಲಿ ಮನವಿ ಮಾಡುತ್ತಿದ್ದು, ಶಾಸಕರಾದ ಪ್ರಭು ಚವ್ಹಾಣ್‌ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಮತ್ತು ನ್ಯಾಯಾಂಗ ತನಿಖೆಗೆ ಸೂಚಿಸಬೇಕು. ಭಗವಂತ ಖೂಬಾ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಬೀದರ್‌ ಜನತೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದರು.

ಶಿಕ್ಷಣದ ಹಕ್ಕು ರಾಜ್ಯಗಳ ಬಳಿಯೇ ಇರಬೇಕು

“ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ರದ್ದುಮಾಡಲಾಗುವುದು ಎಂದು ನಮ್ಮ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಅದರಂತೆ ನಾವು ನಮ್ಮ ಮಾತಿಗೆ ಬದ್ದರಾಗಿದ್ದೇವೆ. ಯಾವುದೇ ಕಾರಣಕ್ಕೂ ಶಿಕ್ಷವನ್ನು ರಾಜ್ಯ ಪಟ್ಟಿಯಿಂದ ತಗೆದು ಕೇಂದ್ರ ಪಟ್ಟಿಗೆ ಸೇರಿಸಬಾರದು. ಶಿಕ್ಷಣದ ಕುರಿತು ಕಾನೂನು ತೆಗೆದುಕೊಳ್ಳುವ ಹಕ್ಕು ರಾಜ್ಯಗಳ ಬಳಿಯೇ ಇರಬೇಕು” ಎಂದು ಹೇಳಿದರು.

“ಶಿಕ್ಷಣವನ್ನು ತಿರುಚುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನೂತನ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ತೀರ್ಮಾನ ತೆಗೆದುಕೊಳ್ಳುವ ಹಕ್ಕನ್ನು ರಾಜ್ಯಗಳಿಗೆ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದರು. ಅದನ್ನು ನಾವು ಸ್ವಾಗತಿಸುತ್ತೇವೆ. ಶೇ 30 ರಷ್ಟು ಶಿಕ್ಷಕರ ವರ್ಗಾವಣೆ ಅತ್ಯಂತ ಸುಲಲಿತವಾಗಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ನಡೆದಿದೆ. ಜೊತೆಗೆ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವ ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...