ರಾಜ್ಯದ ಲೂಟಿ, ಜನರಿಗೆ ಅನ್ಯಾಯ, ಕಲಾಪದ ಸಮಯ ಹಾಳು ಮಾಡುವುದೇ ಬಿಜೆಪಿ ಕೆಲಸ: ಕೃಷ್ಣಭೈರೇಗೌಡ ಕಿಡಿ

Date:

  • ಪುನೀತ್ ಕೆರೆಹಳ್ಳಿ ದೇವರಿಗೆ ಕೈಮುಗಿಯಲು ಪೋಲಿಸರ ಅನುಮತಿ ಬೇಕಾ?
  • ಬಿಜೆಪಿಗರು ಗದ್ದಲ ಎಬ್ಬಿಸಿ ಕಲಾಪಕ್ಕೆ ಅಡ್ಡಿಪಡಿಸಬೇಡಿ: ಸಭಾಪತಿ ಹೊರಟ್ಟಿ

ರಾಜ್ಯವನ್ನು ಲೂಟಿ ಮಾಡುವುದು, ಜನಸಾಮಾನ್ಯರಿಗೆ ಅನ್ಯಾಯ ಮಾಡುವುದು ಹಾಗೂ ಅನವಶ್ಯಕ ಕೂಗಾಟಗಳ ಮೂಲಕ ಸದನ ಕಲಾಪದ ಸಮಯ ವ್ಯರ್ಥ ಮಾಡುವುದಷ್ಟೇ ಬಿಜೆಪಿ ನಾಯಕರ ಕೆಲಸ ಎಂದು ಸಚಿವ ಕೃಷ್ಣಭೈರೇಗೌಡ ಕಿಡಿ ಕಾರಿದರು.

ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಗೆ ಉಪ್ಪಾರಪೇಟೆ ಪೊಲೀಸ್ ಠಾಣಾ ಅಧಿಕಾರಿ ಇತ್ತೀಚೆಗೆ ನೋಟೀಸ್ ಜಾರಿ ಮಾಡಿದ್ದರು. ಆ ನೊಟೀಸ್‌ನಲ್ಲಿ ಮೆಜೆಸ್ಟಿಕ್ ಬಳಿ ಇರುವ ನಾಗರ ಕಟ್ಟಗೆ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯುವಂತೆ ಸೂಚಿಸಲಾಗಿತ್ತು.

ಬುಧವಾರ ವಿಧಾನ ಪರಿಷತ್ ಶೂನ್ಯ ವೇಳೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕರು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ್ದರು. ಅಲ್ಲದೆ, “ಪುನೀತ್ ಕೆರೆಹಳ್ಳಿ ಹಿಂದೂ ದೇವರಿಗೆ ಕೈಮುಗಿಯಲು ಪೋಲಿಸರ ಅನುಮತಿ ಪಡೆಯಬೇಕೆ?” ಎಂದು ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಸರ್ಕಾರದ ಪರವಾಗಿ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, “ಈ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ.‌ ಸಂಬಂಧಪಟ್ಟ ಅಧಿಕಾರಿಯಿಂದ ಮಾಹಿತಿ ಪಡೆದು ಎರಡು ದಿನಗಳಲ್ಲಿ ಸದನಕ್ಕೆ ಉತ್ತರ ನೀಡಲಾಗುವುದು” ಎಂದು ಸ್ಪಷ್ಟೀಕರಣ ನೀಡಿದರು.

ಆದರೆ ಇಷ್ಟಕ್ಕೆ ಸುಮ್ಮನಾಗದ ವಿರೋಧ ಪಕ್ಷದ ನಾಯಕರು ‘ಈಗಲೇ ಉತ್ತರ ಬೇಕು‌’ ಎಂದು ಪಟ್ಟುಹಿಡಿದರು. ಈ ವೇಳೆ ಸದನದ ನೀತಿ ನಿಯಮಗಳನ್ನು ಉಲ್ಲೇಖಿಸಿದ ಕೃಷ್ಣಭೈರೇಗೌಡ “ಸದನದ ನಿಯನ 51ಡಿ ಪ್ರಕಾರ ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಲು ಎರಡು ದಿನಗಳ ಅವಕಾಶ ಇದೆ. ವಿರೋಧ ಪಕ್ಷದ ನಾಯಕರು ದಯವಿಟ್ಟು ನಿಯಮಗಳ ಅನುಸಾರ ಕಲಾಪ ನಡೆಸಲು ಅನುವು ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯದಲ್ಲಿ ಮತ್ತೆ ಶುರುವಾಯಿತು ಹೆಣ ರಾಜಕಾರಣ

ಸಭಾಪತಿ ಬಸವರಾಜ ಹೊರಟ್ಟಿ ಸಹ ಸಚಿವ ಕೃಷ್ಣಭೈರೇಗೌಡ ಅವರ ಮಾತಿಗೆ ದನಿಗೂಡಿಸಿದರು. “ಬಿಜೆಪಿಗರು ಗದ್ದಲ ಎಬ್ಬಿಸಿ ಸದನದ ಕಲಾಪಕ್ಕೆ ಅಡ್ಡಿಪಡಿಸಬಾರದು” ಎಂದು ಸೂಚಿಸಿದರು.

ಸಭಾಪತಿಗಳ ಮಾತಿಗೂ ಕಿವಿಗೊಡದ ಬಿಜೆಪಿ ಸದಸ್ಯರು ಸದನದ ಭಾವಿಗಿಳಿದು ‘ಸಚಿವರು ಈಗಲೇ ಉತ್ತರ ನೀಡಬೇಕು’ ಎಂದು ಪಟ್ಟು ಹಿಡಿದರು. ಇದರಿಂದಾಗಿ ಸದನದಲ್ಲಿ ಗದ್ದಲ ಉಂಟಾಗಿತ್ತು.

ಈ ವೇಳೆ ವಿರೋಧ ಪಕ್ಷದ ಸದಸ್ಯರ ವರ್ತನೆಯ ವಿರುದ್ಧ ಕಿಡಿ ಕಾರಿದ ಸಚಿವ ಕೃಷ್ಣಭೈರೇಗೌಡ, “ನಿಮಯದ ಅನುಸಾರ ಎರಡು ದಿನಗಳಲ್ಲಿ ಉತ್ತರ ನೀಡುವುದಾಗಿ ಹೇಳಿದರೂ ವಿರೋಧ ಪಕ್ಷದ ನಾಯಕರು ಉದ್ದೇಶಪೂರ್ವಕವಾಗಿ ಸದನದ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಇವರಿಗೆ ಸದನ ನಡೆಯುವುದು ಬೇಕಾಗಿಲ್ಲ. ರಾಜ್ಯವನ್ನು ಲೂಟಿ ಮಾಡುವುದು, ಜನರಿಗೆ ಅನ್ಯಾಯ ಮಾಡುವುದೊಂದೇ ಇವರ ಗುರಿ. ಇವರು ಏನೇ ಗದ್ದಲ ಎಬ್ಬಿಸಿದರೂ ಸತ್ಯವೇನು ಎಂಬುದು ಜನರಿಗೆ ಗೊತ್ತು” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...