ಕೊಡಗು | ಶಿವಕುಮಾರ ಸ್ವಾಮೀಜಿ 118 ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ

Date:

ಕರ್ನಾಟಕ ರತ್ನ ಡಾ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನದ ಅಂಗವಾಗಿ ಕೊಡಗು ಜಿಲ್ಲೆ, ಸೋಮವಾರ ಪೇಟೆ ಮಹಿಳಾ ಸಮಾಜದಲ್ಲಿ ತಥಾಸ್ತು ಸಾತ್ವಿಕ ಸಂಸ್ಥೆ, ಅಬಕಾರಿ ಇಲಾಖೆ ಹಾಗೂ ಬಿಟಿಸಿಜಿ ಕಾಲೇಜು ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.

ತಹಶೀಲ್ದಾರ್ ಕೃಷ್ಣಮೂರ್ತಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ” ರಕ್ತದಾನ ಬಹಳ ಶ್ರೇಷ್ಠವಾದ ದಾನವಾಗಿದೆ, ರಕ್ತ ನೀಡುವ ಮೂಲಕ ಮತ್ತೊಂದು ಜೀವವನ್ನು ಉಳಿಸುವ ಮಹತ್ತರವಾದ ಕಾರ್ಯವಾಗಿದೆ. ಈ ಹಿಂದೆ ಅಪಘಾತ ಅಥವಾ ಶಸ್ತ್ರ ಚಿಕಿತ್ಸೆಯ ಸಂದರ್ಭ ರಕ್ತಕ್ಕಾಗಿ ಪರದಾಡಬೇಕಾಗಿತ್ತು. ಆದರೆ, ಇಂದು ಎಲ್ಲೆಡೆ ಬ್ಲಡ್ ಬ್ಯಾಂಕ್ ಇರುವುದರಿಂದ ಸಕಾಲದಲ್ಲಿ ಸಿಗುತ್ತದೆ. ಆದರೂ, ಕೆಲವೊಮ್ಮೆ ವಿಶೇಷ ಗ್ರೂಪಿನ ರಕ್ತ ಸಿಗದೇ ಪರದಾಡುವಂತಹ ಸ್ಥಿತಿ ಇದೆ. ಶಿವಕುಮಾರ ಸ್ವಾಮೀಜಿಗಳ ಸ್ಮರಣಾರ್ಥ ರಕ್ತದಾನ ಶಿಬಿರ ಮಾಡುತಿರುವುದು ಅಭಿನಂದನಾರ್ಹ “ಕಾರ್ಯವೆಂದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಕೊಡ್ಲಿಪೇಟೆ ಕಿರಿಕೂಡ್ಲಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿ ” ನೂರಾಹನ್ನೊಂದು ವರ್ಷಗಳ ಸಾರ್ಥಕ ಬದುಕು ಸವೆಸಿದ ಕಾಯಕಯೋಗಿ,ನಡೆದಾಡುವ ದೇವರು,ಕರ್ನಾಟಕ ರತ್ನ , ಡಾ ಶಿವಕುಮಾರ ಸ್ವಾಮೀಜಿ ಜಯಂತಿಯ ಸ್ಮರಣಾರ್ಥ ನಾಡಿನಾದ್ಯಂತ ರಕ್ತ ದಾನ ಶಿಬಿರ ಸೇರಿದಂತೆ ಹಲವು ಸಾಮಾಜಿಕ ಸೇವೆಗಳು, ಕಾರ್ಯಗಳು ನಡೆಯುತ್ತಿವೆ. ಮಹನಿಯರುಗಳ ಹೆಸರಿನಲ್ಲಿ ನಡೆಯುವ ಇಂತಹ ಶಿಬಿರಗಳು ಅವರ ಹೆಸರನ್ನು ಸಾರ್ಥಕಗೊಳಿಸುತ್ತದೆ. ಶಿವಕುಮಾರ ಸ್ವಾಮೀಜಿ ಮಕ್ಕಳಲ್ಲಿ ದೇವರನ್ನು ಕಂಡವರು.ಅವರಿಗೆ ಮಕ್ಕಳೆಂದರೆ ಬಹಳ ಪ್ರೀತಿ ಇಂದಿಗೂ ಮಠದಲ್ಲಿ ಸುಮಾರು ಹತ್ತು ಸಾವಿರಕ್ಕೂ ಅದಿಕ ಮಕ್ಕಳು ತ್ರಿವಿಧ ದಾಸೋಹ, ಆಶ್ರಯ ಪಡೆದಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ನಡೆಸುವ ಮೂಲಕ ಸ್ಮರಣೆಗೆ ಅವಕಾಶ ಕಲ್ಪಿಸಿದ ತಥಾಸ್ತು ಸಂಸ್ಥೆ ಹಾಗೂ ಅಬಕಾರಿ ಇಲಾಖೆಯ ಕಾರ್ಯ ” ಶ್ಲಾಘನೀಯವೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ದಲಿತ ಸಮುದಾಯದ ರೈತರ ಜಮೀನಿನಲ್ಲಿ ರಸ್ತೆ ನಿರ್ಮಾಣ; ತಹಶೀಲ್ದಾರ್ ನಡೆಗೆ ಖಂಡನೆ

ತಪೋ ಕ್ಷೇತ್ರ ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ,ಪಟ್ಟಣದ ವಿರಕ್ತ ಮಠದ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ, ಅಬಕಾರಿ ಇಲಾಖೆ ನಿರೀಕ್ಷಕ ಲೋಕೇಶ್,ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್, ತಥಾಸ್ತು ಸಂಸ್ಥೆಯ ಅಧ್ಯಕ್ಷ ಉದಯ್ ಮಾಲ್,ಮಡಿಕೇರಿ ರಕ್ತನಿಧಿ ಘಟಕದ ವೈದ್ಯ ಡಾ ಕರುಬಯ್ಯ, ಬಿಟಿಸಿಜಿ ಕಾಲೇಜು ಪ್ರಾಂಶುಪಾಲ ಹರ್ಷ, ಪತ್ರಕರ್ತ ಎಸ್ ಮಹೇಶ್, ಶಿವಕುಮಾರ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...