ಎನ್‌ಎಸ್‌ಯುಐ ಕಲಬುರಗಿ ಜಿಲ್ಲಾ ಘಟಕದಿಂದ ರಕ್ತದಾನ ಶಿಬಿರ

Date:

ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ವಿರೋಧ ಪಕ್ಷದ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಜನ್ಮದಿನದ ಪ್ರಯುಕ್ತ ಎನ್‌ಎಸ್‌ಯುಐ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ರಕ್ತದಾನ ಶಿಬಿರ ನಡೆಸಲಾಯಿತು.

ಒಬ್ಬ ವ್ಯಕ್ತಿ ರಕ್ತ ನೀಡುವುದರಿಂದ 3 ರೋಗಿಗಳ ಜೀವ ಉಳಿಸಬಹುದು, ಹೃದಯ ಸಂಬಂಧೀ ಕಾಯಿಲೆಯಿಂದ ದೂರ ಇರಬಹುದು, ಕ್ಯಾನ್ಸರ್ ಮತ್ತು ಬಿಪಿಯನ್ನು ನಿಯಂತ್ರಣದಲ್ಲಿಡಬಹುದು, ರೋಗ ನಿರೋಧಕ ಶಕ್ತಿ ಹೆಚ್ಚಿಸಬಹುದು, ದೇಹದ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು ಸೇರಿ ಅನೇಕ ರೀತಿ ಆರೋಗ್ಯ ಪ್ರಯೋಜನ ಪಡೆಯಬಹುದೆಂದು ದಾನಿಗಳಿಗೆ ಅರಿವು ಮೂಡಿಸಲಾಯಿತು.

ದಾನಿಗಳೇ ಸ್ವಯಂಪ್ರೇರಿತರಾಗಿ ನಿಸ್ವಾರ್ಥ ಮನೋಭಾವದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಖರ್ಗೆ ಅವರ 83ನೇ ಹುಟ್ಟು ಹಬ್ಬಕ್ಕೆ ವಿಶೇಷವಾದ ಉಡುಗೊರೆಯನ್ನು ನೀಡಲಾಗಿದೆ ಎಂದು ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಗೌತಮ ಕರಿಕಲ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 21 at 11.48.40 PM

ಇದನ್ನೂ ಓದಿ: ಕಲಬುರಗಿ | ಈಶಾನ್ಯ ವಲಯಕ್ಕೆ ಚಂದ್ರಗುಪ್ತ ನೂತನ ಐಜಿಪಿ

ಈ ಸಂದರ್ಭದಲ್ಲಿ ಎನ್ಎಸ್‌ಯುಐ ಕಲಬುರಗಿ ಜಿಲ್ಲೆಯ ಅಧ್ಯಕ್ಷ ಡಾ. ಗೌತಮ ಕರಿಕಲ್, ಜಿಡಿಎ ಅಧ್ಯಕ್ಷ ಮಜರ್ ಅಲಂ ಖಾನ್, ಹೆಚ್‌ಕೆಇ ಸೊಸೈಟಿಯ ಸದಸ್ಯ ಡಾ. ಕಿರಣ್ ದೇಶಮುಖ್, ಅಭಿಷೇಕ್ ಅಲ್ಲಮಪ್ರಭು ಪಾಟೀಲ್, ಮಹಿಳಾ ಅಧ್ಯಕ್ಷರಾದ ರೇಣುಕಾ ಸಿಂಗೆ, ಕಾಂಗ್ರೆಸ್ ಮುಖಂಡರಾದ ನೀಲಕಂಠರಾಯ ಮೂಲಗೆ, ಪ್ರವೀಣ ಪಾಟೀಲ್ ಹರವಾಳ, ಮಾಜಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಈರಣ್ಣ ಜಳಕಿ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಿ, ಡಾ. ಸತೀಶ್ ಬೆಲಗಟ್ಟಿ, ಕಾಂಗ್ರೆಸ್ ಮುಖಂಡ ಭೀಮರಾವ್ ಮೇಳಕುಂದ, ಯುವ ಕಾಂಗ್ರೆಸ್ ಅಧ್ಯಕ್ಷ ಶಕೀಲ್ ಸರಡಗಿ, ಕಾಂಗ್ರೆಸ್ ಯುವ ಮುಖಂಡ ಮಹೇಂದ್ರ ನಾಯ್ಡು, ಕಲಬುರಗಿ ದಕ್ಷಿಣ ಬ್ಲಾಕ್ ಯುವ ಅಧ್ಯಕ್ಷ ರಾಜು ಮಾಳಗೆ, ಎನ್‌ಎಸ್‌ಯುಐ ಉಪಾಧ್ಯಕ್ಷ ಸಂಪೂರ್ಣ ಪಾಟೀಲ್, ಕಾಂಗ್ರೇಸ್ ಮುಖಂಡ ಫಾರುಕ್ ಮನಿಯಾರ್, ಸಂಜಯ್ ಪಾಟೀಲ್, ಎನ್ಎಸ್‌ಯು ಚಿಂಚೋಳಿ ಅಧ್ಯಕ್ಷ ಅಂಕಿತಾ, ಎನ್‌ಎಸ್‌ಯುಐ ಜೇವರ್ಗಿ ಅಧ್ಯಕ್ಷ ಶ್ರೀಶೈಲ್, ಎನ್‌ಎಸ್‌ಯುಐ ಕಮಲಾಪುರ ಅಧ್ಯಕ್ಷ ನಾಗರಾಜ, ಡಾ. ಅತ್ತರ್, ಡಾ. ಐಶ್ವರ್ಯ, ಡಾ. ಅನೀಲ್, ಡಾ. ಸತೀಶ್ ಬೆಳಗಟ್ಟಿ, ಡಾ. ಅಬ್ದುಲ್ ಹಕಿಂ ಅತ್ತರ್, ಪ್ರದೀಪ್, ಹಾಗೂ ಇಎಸ್ಐಸಿ ಮೆಡಿಕಲ್ ಕಾಲೇಜಿನ ಸಿಬ್ಬಂದಿ ವರ್ಗದವರು, ಮುಖಂಡರು, ಸಮಾಜ ಸೇವಕರು, ಹೋರಾಟಗಾರರು, ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಅಭಿಮಾನಿಗಳು, ಕಾರ್ಯಕರ್ತರು, ಗುಲ್ಬರ್ಗಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಎನ್‌ಎಸ್‌ಯುಐ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...