ರಾಮನಗರ | ರಕ್ತದಾನ ಮಹಾ ಜೀವದಾನ : ಡಾ. ಮುತ್ತಣ್ಣ

Date:

ರಕ್ತದಾನ ಎಲ್ಲದ ದಾನಕ್ಕೂ ಶ್ರೇಷ್ಠ ಮತ್ತು ಮಹಾ ಜೀವದಾನವಾಗಿದೆ ಎಂದು ಸ್ಪಂದನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ಮುತ್ತಣ್ಣ ಹೇಳಿದರು.

IMG 20241230 WA0020

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನೇಗಿಲ ಯೋಗಿ ಸಮಾಜಸೇವಾ ಟ್ರಸ್ಟ್ ವತಿಯಿಂದ ನಗರದ ನಾರಾಯಣ ಆಸ್ವತ್ರೆಯ ಆವರಣದಲ್ಲಿ ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ಜನ್ಮದಿನೋತ್ಸವದ ಅಂಗವಾಗಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಅಪಘಾತ, ಎಲ್ಲರಲ್ಲೂ ಅನಾರೋಗ್ಯ ಕಾಡುತ್ತಿದ್ದು ರಕ್ತದ ಅವಶ್ಯಕತೆ ಹೆಚ್ಚಾಗಿದ್ದು, ಯುವಕರು ರಕ್ತದಾನ ಮಾಡುವ ಮೂಲಕ ಇನ್ನೊಬ್ಬರ ಪ್ರಾಣ ಉಳಿಸುವ ಕೆಲಸ ಮಾಡುವ ಮೂಲಕ ಸಮಾಜಮುಖಿಯಾಗಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಮಾತನಾಡಿ, ತಮ್ಮ ವಿಶ್ವ ಮಾನವ ತತ್ವಗಳನ್ನು ಮನುಕುಲಕ್ಕೆ ಸಾರಿದ ಅವರ ಆದರ್ಶ ಬದುಕು, ಬರಹಗಳು ಸರ್ವರಿಗೂ ದಾರಿ ದೀಪವಾಗುತ್ತದೆ. ತಮ್ಮ ಸಾಹಿತ್ಯದಲ್ಲಿ ವೈಚಾರಿಕತೆ ಹಾಗೂ ವೈಜ್ಞಾನಿಕ ಮನೋಭಾವ ತುಂಬುವ ವಿಚಾರ ಸ್ವಾತಂತ್ರ್ಯಕ್ಕೆ ಕರೆಕೊಟ್ಟ ಮಹಾಕವಿ ಕುವೆಂಪು ಒಂದು ದೈತ್ಯ ಪ್ರತಿಭೆ, ಹಲವು ಪ್ರಥಮತೆಗೆ ಬುನಾದಿ ಹಾಕಿ ಕನ್ನಡ ನಾಡು ಹಾಗೂ ನುಡಿ ಬಗೆಗೆ ಅಪಾರ ಪ್ರೇಮವನ್ನು ಹೊಂದಿದ್ದವರು, ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲು ಕೈಯಾಡಿಸಿದ ಅವರು ರೈತರನ್ನು ನೇಗಿಲಯೋಗಿ ಎಂದು ಕರೆದ ರಸಋಷಿ ಅವರ ಸಾಹಿತ್ಯವನ್ನು ಅಭ್ಯಾಸ ಮಾಡುತ್ತಾ ಅವರ ಆದರ್ಶಗಳನ್ನು ಜೀವನನುದ್ದಕ್ಕೂ ಅಳವಡಿಸಿಕೊಳ್ಳುವ ಮೂಲಕ ವಿಶ್ವಮಾನವರಾಗಿ ಬೆಳೆಯಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೇಗಿಲ ಯೋಗಿ ಸಮಾಜಸೇವಾ ಟ್ರಸ್ಟ್ ಜಿಲ್ಲಾಧ್ಯಕ್ಷ ಪಟೇಲ್ ಸಿ.ರಾಜು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಪ್ರತಿವರ್ಷ ಆಯೋಜಿಸುವ ಜನ ಸಾಮಾನ್ಯರಿಗೆ ಅವಶ್ಯಕವಿರುವ ರಕ್ತದಾನ ಶಿಬಿರಗಳು ಸದಾ ಕಾಲ ಕೈಜೋಡಿಸಿ, ಸಹಕಾರ ನೀಡುವುದಾಗಿ ತಿಳಿಸಿದರು.

ಜೀವಾಮೃತ ರಕ್ತ ನಿಧಿ ಮಾಲೀಕ ವಿ.ಸಿ.ಚಂದ್ರೇಗೌಡ ಮಾತನಾಡಿ, ಅಪಘಾತ ಮತ್ತು ಮಹಿಳೆಯರು ಹೆರಿಗೆ ಸಮಯದಲ್ಲಿ ರಕ್ತದ ಕೊರತೆಯಿಂದ ಹಲವರು ಪ್ರಾಣ ಕಳೆದುಕೊಂಡ ಸನ್ನಿವೇಶ ನೋಡಿ ಜೀವಾಮೃತ ರಕ್ತ ನಿಧಿ ಸ್ಥಾಪಿಸಿದ್ದು, ಸರಕಾರ ನಿಗಧಿ ಮಾಡಿರುವ ದರದಲ್ಲಿ ರಕ್ತ ನೀಡಲಾಗುತ್ತಿದ್ದು, ರಕ್ತ ನೀಡಿದ ದಾನಿಗಳಿಗೆ ತುರ್ತ ಸಮಯದಲ್ಲಿ ನಮ್ಮ ರಕ್ತ ನಿಧಿ ಉಚಿತವಾಗಿ ರಕ್ತ ನೀಡಲಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಾರಾಯಣ ಆಸ್ವತ್ರೆಯ ಮಾಲೀಕರಾದ ಡಾ.ಮಧಸೂದನ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ನಿರತರವಾಗಿ ನಡೆಸಿಕೊಂಡು ಬರುತ್ತಿರುವ ರಕ್ತದಾನ ಶಿಬಿರಗಳಿಗೆ ಪ್ರತಿ ಹಂತದಲ್ಲು ಎಲ್ಲ ರೀತಿಯಲ್ಲಿ ಸಹಕಾರ, ಸಹಾಯ ಮಾಡಲಾಗುತ್ತದೆ. ಎಂದ ಅವರು ಆಧುನಿಕ ಕಾಲದ ಮಹಾಕವಿ ಕುವೆಂಪು ಪ್ರಕಾಂಡ ಪಾಂಡಿತ್ಯವನ್ನು ಹೊಂದಿ ಕನ್ನಡ ನಾಡು, ನುಡಿಯನ್ನು ಮುಗಿಲೆತ್ತರಕ್ಕೆ ಕೊಂಡ್ಯೊಯ್ದ ಅಪ್ರತಿಮ ಕವಿ ಎಂದರು.

ಇದನ್ನು ಓದಿದ್ದೀರಾ? ಮದ್ದೂರು | ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು : ಹೆಚ್.ಹನುಮಂತರಾಯಪ್ಪ

ತಾಲ್ಲೂಕು ಅಧ್ಯಕ್ಷ ಬಿ.ಟಿ. ದಿನೇಶ್ ಮಾನತಾಡಿ, ಕಳೆದ ಎಂಟು ವರ್ಷಗಳಿಂದ ಡಾ.ಮಧಸೂದನರ ಸಹಕಾರದಿಂದ ರಕ್ತದಾನ ಶಿಬಿರಗಳನ್ನು ಕಸಾಪ ಹಮ್ಮಿಕೊಂಡು ಬರುತ್ತಿದ್ದು, ನೂರಾರೂ ಯುವಕ ತಮ್ಮ ರಕ್ತದಾನ ಮಾಡಿ ಹಲವಾರು ಜೀವ ಉಳಿಸುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಅತೀ ಹೆಚ್ಚು ರಕ್ತದಾನ ಮಾಡಿದ ದಾನಿ ಡೈರಿ ವೆಂಕಟೇಶ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿ ಬಿ.ಟಿ.ರಾಜೇಂದ್ರ, ಲಕ್ಕಸಂದ್ರ ಮಹದೇವ, ಸಮದ್, ಕರೀಗೌಡ, ಚೇತನ್ ಗುನ್ನೂರು, ಕಿರಣ್ ನಂದೀಶ್ ಮತ್ತು ಆಸ್ವತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇದನ್ನು ನೋಡಿದ್ದೀರಾ? ಮುಸ್ಲಿಂ ಮುಖಂಡನ ಮನೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳು!

ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಮೇಶ್ ಬಾಬು ರಕ್ತದಾನ ಮಾಡಿದರು. ಶಿಬಿರದಲ್ಲಿ ೫೮ ಮಂದಿ ರಕ್ತದಾನ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...