ಬಿಎಂಟಿಸಿ ಚಾಲಕ ಸಾವು ಪ್ರಕರಣ; ಪರಿಹಾರ ಆದೇಶ ರದ್ದು ಮಾಡಿದ ಹೈಕೋರ್ಟ್

Date:

ಬೆಂಗಳೂರಿನ ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಾಲಕನ ಸಾವು ಪ್ರಕರಣದಲ್ಲಿ ಮೃತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ನ್ಯಾಯಾಲಯದಲ್ಲಿ ಇರಿಸಲಾಗಿದ್ದ ಠೇವಣಿಯನ್ನೂ ಬಿಎಂಟಿಸಿಗೆ ಹಿಂದಿರುಗಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ನಗರದ ಪೀಣ್ಯ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಟಿ ಭೋಜರಾಜ 2008ರಲ್ಲಿ ಮೃತಪಟ್ಟಿದ್ದರು. ಅವರ ಸಾವಿಗೆ ಬಿಎಂಟಿಸಿ ಕೆಲಸದ ಒತ್ತಡ ಕಾರಣವೆಂದು ಪರಿಹಾರಕ್ಕಾಗಿ 2016ರಲ್ಲಿ ಮೃತನ ತಾಯಿ ವಿಚಾರಣಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

“ಕೆಲಸದ ಒತ್ತಡ ಮತ್ತು ಆಯಾಸದ ಪರಿಣಾಮ ಉಸಿರಾಟದ ತೊಂದರೆಯಿಂದ 21 ವರ್ಷದ ಭೋಜರಾಜ ಬಳಲುತ್ತಿದ್ದರು. ಅವರಿಗೆ ಉತ್ತಮ ಚಿಕಿತ್ಸೆ ನೀಡಿದರೂ, ಬದುಕುಳಿದಿಲ್ಲ. ಅವರ ಸಾವಿಗೆ ಕೆಲಸದ ಒತ್ತಡವೇ ಕಾರಣವಾಗಿದ್ದು, ಬಿಎಂಟಿಸಿ ಪರಿಹಾರ ಕೊಡಿಸಬೇಕು” ಎಂದು ದಾವೆಯಲ್ಲಿ ವರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಯ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ, ಅರ್ಜಿದಾರರಿಗೆ ಒಟ್ಟು 10,10,660 ರೂ. ಪರಿಹಾರ ಪಾವತಿಸಬೇಕೆಂದು ಬಿಎಂಟಿಸಿಗೆ ಆದೇಶಿಸಿತ್ತು.

ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದ ಬಿಎಂಟಿಸಿ, “ಚಾಲಕ ಮೃತಪಡುವ ಮುನ್ನ ಎರಡು ತಿಂಗಳಿಂದಲೂ ಉದ್ಯೋಗಕ್ಕೆ ಅನಧಿಕೃತವಾಗಿ ಗೈರಾಗಿದ್ದಾರೆ. ಅವರು ಸರಿಯಾಗಿ ಉದ್ಯೋಗಕ್ಕೆ ಹಾಜರಾಗದೇ ಇರುವುದಕ್ಕೆ ದಾಖಲೆಗಳಿವೆ. ಹಾಗಾಗಿ, ಪರಿಹಾರ ನೀಡುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಬೇಕು” ಎಂದು ಮನವಿ ಮಾಡಿತ್ತು.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು ಅಂದು-ಇಂದು – 1 | ಬದಲಾಗುತ್ತಿರುವ ಬೆಂದಕಾಳೂರು ಹಿಂದೆ ಹೇಗಿತ್ತು; ಇಲ್ಲಿ ನೋಡಿ!

ಬಿಎಂಟಿಸಿಯ ವಾದವನ್ನು ಆಲಿಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎನ್.ಎಸ್. ಸಂಜಯ ಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ, “ಚಾಲಕ ಭೋಜರಾಜ್ ಉದ್ಯೋಗಕ್ಕೆ ಸರಿಯಾಗಿ ಹಾಜರಾಗಿಲ್ಲ. ಹೀಗಾಗಿ, ಅವರು ಕೆಲಸದ ವೇಳೆ ಮೃತಪಟ್ಟಿದ್ದಾರೆ ಎಂಬುದನ್ನು ಪರಿಗಣಿಸಲಾಗದು” ಎಂದು ಹೇಳಿದ್ದು, ಪರಿಹಾರದ ಆದೇಶವನ್ನು ರದ್ದುಪಡಿಸಿದೆ. ಅಲ್ಲದೆ, ಠೇವಣಿ ಇರಿಸಲಾಗಿದ್ದ ಹಣವನ್ನು ಬಿಎಂಟಿಸಿಗೆ ಹಿಂದಿರುಗಿಸುವಂತೆ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...