ದಾವಣಗೆರೆಯಲ್ಲಿ ಇಂದು ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ ನಾಟಕ ಪ್ರದರ್ಶನ

Date:

ಸತೀಶ್ ಜಾರಕಿಹೊಳಿ ಟ್ರಸ್ಟ್ ಮತ್ತು ಮಾನವ ಬಂಧುತ್ವ ವೇದಿಕೆಯ ವತಿಯಿಂದ ದಾವಣಗೆರೆಯಲ್ಲಿ ಇಂದು ಸಾಮಾಜಿಕ ಸಂದೇಶ ಸಾರುವ ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಸೆಪ್ಟೆಂಬರ್ 27ರಂದು(ಶುಕ್ರವಾರ) ಸಂಜೆ 6ಕ್ಕೆ ದಾವಣಗೆರೆಯ ಜೆ.ಜೆ.ಎಂ. ಮೆಡಿಕಲ್ ಕಾಲೇಜ್‌ನ ಆವರಣದಲ್ಲಿರುವ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

‘ಗುರುತು’ ಅನ್ನುವುದು ಕೆಲವರಿಗೆ ಹೆಮ್ಮೆಯಾದರೆ, ಕೆಲವರಿಗದು ಅಸಹ್ಯ, ಹಿಂಸೆ, ಜೀವನದ್ದುದ್ದಕ್ಕೂ ಹೊತ್ತು ತಿರುಗಬೇಕಾದ ಹೆಣಭಾರದ ಚಾಕರಿ. ಹಲವು ಬಾರಿ ಉಳಿವಿಗಾಗಿ ಗುರುತುಗಳನ್ನು ಮುಚ್ಚಿಡುತ್ತಾ ಸಾಗುವುದೇ ಬದುಕು ಅನ್ನಿಸಿಕೊಂಡು ಹರಿಯುತ್ತಾ ಹಗುರಾಗುವುದು ಸಾಗದ ದಾರಿಯಾಗಿ ಕಂಡು ದಣಿವಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ನಾಟಕ 2

ದಣಿವಾಗುತ್ತದೆ ಎಂಬ ಕಾರಣಕ್ಕೆ ಹಾರಾಡುವ ಬಯಕೆಯನ್ನು ಬಿಡುವಂತೆಯೂ ಇರುವುದಿಲ್ಲ. ಕತ್ತಲ ದಾರಿಯಲ್ಲಿ ಮಿಂಚುಹುಳುಗಳಿಗಾಗಿ ಜೀವ ಕಾಯುತ್ತಾ ಆತುಕೊಳ್ಳಬೇಕಾಗುತ್ತದೆ. ಆಗ ಕತ್ತಲೊಂದು ರೀತಿಯ ಸಂಭ್ರಮ, ಬೆಳಕೊಂದು ರೀತಿಯ ಸಂಭ್ರಮ. ಹೀಗೆ ಗುರುತಿನ ಸುತ್ತ ಇರುವ ಹಲವು ಸಂಕೀರ್ಣ ವಿರೋಧಾಭಾಸಗಳನ್ನು ಎದುರುಗೊಳ್ಳುವ ಕಥನಗಳ ಗೊಂಚಲೇ “ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ” ನಾಟಕದ ಕಥಾಹಂದರ.

ಇಲ್ಲಿ. ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರ ‘Waiting for a Visa’ ಒಂದು ರೂಪಕವಾಗಿ ಕಂಡು, ಅವರು ನಿಜಕ್ಕೂ ಪ್ರವೇಶ ಕೇಳುತ್ತಿರುವುದು ಎಲ್ಲಿಗೆ? ಅನ್ನುವ ಪ್ರಶ್ನೆ ಮುಖ್ಯವಾಗುತ್ತದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್: ಮಹಿಳೆ ವಿರುದ್ಧ ಎಸ್‌ಡಿಪಿಐ ಮುಖಂಡನಿಂದ ದೂರು

ನಾಟಕದ ಪಠ್ಯ ಆಕರವನ್ನು ಕೆ.ಎನ್.ಹನುಮಂತಯ್ಯ, ಕೆ.ಚಂದ್ರಶೇಖರ್ ಮಾಡಿದ್ದರೆ, ಕೆ.ಪಿ.ಲಕ್ಷ್ಮಣ್ ನಾಟಕದ ರಚನೆ, ನಿರ್ದೇಶನ, ವಿನ್ಯಾಸ ಮಾಡಿದ್ದಾರೆ. ವಿ.ಎಲ್. ನರಸಿಂಹಮೂರ್ತಿ ಡ್ರಮ್ ಬರ್ಗ್ ನಿರ್ವಹಣೆ ಇರಲಿದೆ. ಮರಿಯಮ್ಮ ಚೂಡಿ, ಚಂದ್ರಶೇಖರ್ ಕೆ, ಶ್ವೇತಾರಾಣಿ ಹೆಚ್ ಕೆ, ಭರತ್ ಡಿಂಗ್ರಿ ನಟಿಸಲಿದ್ದಾರೆ. ಮಂಜು ನಾರಾಯಣ್ ಅವರು ‘ಬೆಳಕು’ ನೀಡಲಿದ್ದಾರೆ.

ಎಲ್ಲರಿಗೂ ಉಚಿತ ಪ್ರವೇಶವಿದ್ದು, ಸಾರ್ವಜನಿಕರು ಆಗಮಿಸಿ ನಾಟಕ ವೀಕ್ಷಿಸಿ ಯಶಸ್ವಿಗೊಳಿಸಲು ಹಾಗೂ ಸಾಮಾಜಿಕ ಸಂದೇಶ ಸಾರಲು ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರಾದ ಪ್ರೊ.ರಾಮಚಂದ್ರಪ್ಪ ಮತ್ತು ವೇದಿಕೆಯ ಕಾರ್ಯಕರ್ತರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

ಬಾಬ್ ಮಾರ್ಲಿ
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...