ಹಾಸನ l ಕಲ್ಲಹಳ್ಳಿಯ ಪ್ರಪಾತದಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ: ಕೊಲೆ ಶಂಕೆ

Date:

ಪ್ರಪಾತವೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ, ಯಸಳೂರು ಹೋಬಳಿಯ ಮಾಗೇರಿ ಸಮೀಪದ ಕಲ್ಲಹಳ್ಳಿ ಗ್ರಾಮದ ಬಳಿ ವರದಿಯಾಗಿದೆ.

ಪೊಲೀಸ್ ಮೂಲಗಳ ಮಾಹಿತಿಯ ಪ್ರಕಾರ, ಕೊಲೆಯಾದವರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕಕ್ಕೆಹೊಳೆ ಜಂಗ್ಲನ್ ನಿವಾಸಿ ಸಂಪತ್ ಅಲಿಯಾಸ್ ಶಂಭು. ಈತನು ತನ್ನ ಗೆಳೆಯನ ಕಾರು ಪಡೆದುಕೊಂಡು ಹೋಗಿದ್ದ. ಅಲ್ಲದೆ, ಕಳೆದ ಶನಿವಾರ ಯಸಳೂರು ಸಮೀಪದ ಪ್ರದೇಶದಲ್ಲಿ ರಕ್ತದ ಕಲೆಗಳಿರುವ ಕಾರು ಪತ್ತೆಯಾಗಿತ್ತು. ತನಿಖೆ ನಡೆಸಿದ ಪೊಲೀಸರು ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ಸಂಪತ್‌ನ ಶವವನ್ನು ಪತ್ತೆ ಹಚ್ಚಿದ್ದಾರೆ.

Screenshot 2025 05 14 20 16 45 82 40deb401b9ffe8e1df2f1cc5ba480b12

ಅಪರಿಚಿತರು ಸಂಪತ್‌ನನ್ನು ಬರ್ಬರವಾಗಿ ಕೊಚ್ಚಿ ಹತ್ಯೆಗೈದು, ಶವವನ್ನು ಕಾರಿನಲ್ಲಿ ತಂದು ಪ್ರಪಾತದಲ್ಲಿ ಬಿಸಾಡಿದ್ದಾರೆ. ಆತನು ಕೆಲ ತಿಂಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಕಾರು ಮೇಲೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಆರೋಪಿಯಾಗಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಏಪ್ರಿಲ್ 9 ರಂದು ಕುಶಾಲನಗರದ ಗೆಳೆಯನಿಂದ ಸಂಪತ್ ತೆಗೆದುಕೊಂಡು ಹೋಗಿದ್ದ ಕಾರು, ಮೇ 10ರಂದು ಕಲ್ಲಹಳ್ಳಿಯಲ್ಲಿ ಬಿಟ್ಟುಹೋಗಲಾಗಿತ್ತು. ಶನಿವಾರ ಬೆಳಿಗ್ಗೆ ಗ್ರಾಮಸ್ಥರು ಸಂಶಯಾಸ್ಪದವಾಗಿ ನಿಂತಿದ್ದ ಕಾರನ್ನು ಗಮನಿಸಿದ ಬಳಿಕ, ತೋಟದ ಕಾರ್ಮಿಕರನ್ನು ಕರೆತಂದ ಚಾಲಕನೊಬ್ಬ ಅದರಲ್ಲಿದ್ದ ರಕ್ತದ ಕಲೆಗಳ ಬಗ್ಗೆ ಮಾಹಿತಿ ನೀಡಿದ ನಂತರ, ಯಸಳೂರು ಠಾಣೆಗೆ ದೂರು ನೀಡಲಾಗಿತ್ತು.

ಘಟನೆ ನಡೆದ ಸ್ಥಳಕ್ಕೆ ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಎಸ್‌ಐ ಶ್ರೀನಿವಾಸ್ ನೇತೃತ್ವದ ಪೊಲೀಸ್ ತಂಡ, ಶ್ವಾನದಳ ಮತ್ತು ಬೆರಳಚ್ಚು ತಜ್ಞರೊಂದಿಗೆ ತೆರಳಿ ಮಹಜರು ಕೈಗೊಂಡಿತು. ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾದ ಕಾರು ಕುಶಾಲನಗರದ ವ್ಯಾಪಾರಿ ಜಾನ್ ಅವರದ್ದು ಎಂದು ಖಚಿತವಾಗಿದೆ. ಸಂಪತ್ ಅದನ್ನು ಶನಿವಾರ ತೆಗೆದುಕೊಂಡು ಹೋಗಿದ್ದನು. ಆ ನಂತರ ಸಂಪತ್‌ನ ಮೊಬೈಲ್ ಸ್ವಿಚ್‌ಆಫ್ ಆಗಿದ್ದು, ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ.

ಕುಶಾಲನಗರ ಠಾಣೆಯಲ್ಲಿ ಸಂಪತ್ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಇತ್ತ ಯಸಳೂರು ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದರು. ನಾಲ್ಕು ದಿನಗಳ ಶೋಧದ ಬಳಿಕ ಶವ ಪತ್ತೆಯಾಗಿದೆ. ಬೇರೆಡೆ ಕೊಲೆ ಮಾಡಿ ಮಲೆನಾಡು ಪ್ರದೇಶಕ್ಕೆ ಶವವನ್ನು ಬಿಸಾಕಿ ಹೋಗಿರಬಹುದು ಎಂದು  ಶಂಕಿಸಲಾಗಿದೆ.

ಇದನ್ನೂ ಓದಿದ್ದೀರಾ?ಹಾಸನ l ಜನವಸತಿ ಪ್ರದೇಶದಲ್ಲಿ ಅಪರಿಚಿತ ಕಾರು ಪತ್ತೆ 

ಈ ಹಿಂದೆ ಸಾಕಷ್ಟು ಗಲಾಟೆಗಳಲ್ಲಿ ಸಂಪತ್ ಭಾಗಿಯಾಗಿದ್ದನೆಂಬ ಮಾಹಿತಿಯ ಹಿನ್ನೆಲೆಯಲ್ಲಿ ಬಂಧಿತ ವ್ಯಕ್ತಿಗಳ ವಿಚಾರಣೆ ಕೈಗೊಂಡಿದ್ದರು. ಆದರೂ ನಿರ್ದಿಷ್ಟ ಸುಳಿವು ಸಿಗದ ಪರಿಸ್ಥಿತಿಯಲ್ಲಿ, ಈಗ ಶವ ಪತ್ತೆಯಾಗಿದ್ದು ಪ್ರಕರಣವು ಹೊಸ ತಿರುವು ಪಡೆದಿದೆ. ಮೃತದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣದ ಬಗ್ಗೆ ಪೊಲೀಸ್ ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...