ಸರ್ಕಾರದ ಮೇಲೆ ಹೈಕಮಾಂಡ್ ನಿಯಂತ್ರಣ, 2ನೇ ಅವಧಿಯಲ್ಲಿ ಸಿದ್ದರಾಮಯ್ಯ ವೀಕ್: ಬೊಮ್ಮಾಯಿ

Date:

  • ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಅವಮಾನ ಮಾಡುತ್ತಿದೆ
  • ಇಡೀ ಸಂಪುಟ ದೆಹಲಿಗೆ ಹೋಗಿ ಸಭೆ ನಡೆಸಿರುವುದು ಮೊದಲು

ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಯಿಂದ ನಿಯಂತ್ರಿಸುತ್ತಿದ್ದು, ಇದು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಿನ್ನೆ ದೆಹಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ, ಇಡೀ ಸಂಪುಟ ದೆಹಲಿಗೆ ಹೋಗಿ ಪಕ್ಷದ ಸಭೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲಿ ನಡೆದಿರಲಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದ್ದು, ಕಾಂಗ್ರೆಸ್ ‌ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ” ಎಂದರು.

ಎರಡನೇ ಅವಧಿಯಲ್ಲಿ ಸಿದ್ದರಾಮಯ್ಯ ವೀಕ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಎರಡನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಸಾಕಷ್ಟು ವ್ಯತ್ಯಾಸ ಇದೆ. ಈಗಿನ ಸಿಎಂ ಸಿದ್ದರಾಮಯ್ಯಗೆ ಆಡಳಿತದ ಮೇಲಿನ ಹಿಡಿತ ತಪ್ಪಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸರ್ಕಾರದ ಆರಂಭದಲ್ಲಿಯೇ ಇಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು” ಎಂದರು.

“ಶಾಸಕಾಂಗ ಸಭೆಯಲ್ಲಿಯೂ ಶಾಸಕರು ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟಿಲ್ಲ. ಟ್ರಾನ್ಸಫರ್ ದಂಧೆ, ಸ್ವಜನ ಪಕ್ಷಪಾತ ಅವ್ಯಾಹತವಾಗಿ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲದ ಸಂದರ್ಭದಲ್ಲಿ ಪ್ರವಾಹ, ಬರ ಇರುವ ಸಂದರ್ಭದಲ್ಲಿ ರಾಜ್ಯದಲ್ಲಿ ಆಡಳಿತ ವೈಫಲ್ಯತೆ ಕಾಣಿಸುತ್ತಿದೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಜೀವಕ್ಕೆ ಕಂಟಕ ತರುತ್ತಿರುವ ಜೀವಜಲ; ಆಡಳಿತಶಾಹಿಯೇ ಹೊಣೆ

“ಎರಡೇ ತಿಂಗಳಲ್ಲಿ ಮುಖ್ಯಮಂತ್ರಿಗಳು ಸಂಪುಟದ ಸಚಿವರನ್ನು ಕರೆದುಕೊಂಡು ದೆಹಲಿಗೆ ಹೋಗಿ ಸಭೆ ನಡೆಸಿರುವುದು ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಅಂತ ಗೊತ್ತಾಗಿದೆ. ಸಿದ್ದರಾಮಯ್ಯ 1ಗೂ, ಸಿದ್ದರಾಮಯ್ಯ 2ಗೂ ಬಹಳಷ್ಟು ವ್ಯತ್ಯಾಸವಾಗಿದೆ. ರಾಜಕೀಯ ಸ್ಥಿತಿಗತಿ ಆಗಿನಿಂದ ಈಗ ಬದಲಾಗಿದೆ. ಸಿದ್ದರಾಮಯ್ಯ ಅವರ ಆರೋಗ್ಯ ಚೆನ್ನಾಗಿದೆ. ಅವರು ಚೆನ್ನಾಗಿರಲಿ, ಆದರೆ, ಅವರು ಅಡಳಿತ ನಡೆಸುವಲ್ಲಿ ಮೊದಲಿನಷ್ಟು ಸ್ಟ್ರಾಂಗ್ ಇಲ್ಲ” ಎಂದು ಅಭಿಪ್ರಾಯಪಟ್ಟರು.

“ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಮಾತನಾಡುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿರುವ ಅವ್ಯವಹಾಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ ಈ ಬಗ್ಗೆ ಉತ್ತರ ನೀಡಲಿ. ನಮ್ಮ ಅವಧಿಯಲ್ಲಿ ಅಭಿವೃದ್ಧಿಗೆ ಬಿಡುಗಡೆಯಾದ ಹಣ ತಡೆ ಹಿಡಿದಿದ್ದಾರೆ. ಇದರಿಂದ ಯಾವುದೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ” ಎಂದರು.

ದಲಿತ ವಿರೋಧಿ ನೀತಿ

“ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ್ದು ಸರ್ಕಾರದ ದಲಿತ ವಿರೋಧಿ ನೀತಿ ತೋರಿಸುತ್ತದೆ. ಎಸ್ಸಿಪಿ ಟಿಎಸ್ ಪಿ ಯೋಜನೆಗೆ ಮೀಸಲಿಟ್ಟ 34 ಸಾವಿರ ಕೋಟಿ ರೂ. ಅನುದಾನದಲ್ಲಿ ಸುಮಾರು 13 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ದಲಿತರ ಅಭಿವೃದ್ಧಿಗೆ ಹೊಡೆತ ಬೀಳಲಿದೆ. ಇದು ಕಾಂಗ್ರೆಸ್‌ನ ದಲಿತ ವಿರೋಧಿ ನೀತಿ ತೋರಿಸುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...