ಮಂಡ್ಯ | ಬಾಡೂಟ, ಬಾಡಿಲ್ಲದೂಟ ಎರಡೂ ಇರಲಿ

Date:

ಬಾಡೂಟ, ಬಾಡಿಲ್ಲದ ಊಟ ಎರಡೂ ಇರಲಿ. ಮಂಡ್ಯದಲ್ಲಿ ನಡೆಯುವ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆಗೆ ಮಾಂಸಾಹಾರವು ದೊರೆಯುಂತಾಗಬೇಕು, ಆ ಮೂಲಕ ಮಂಡ್ಯ ನೆಲ ಆಹಾರ ಸಂಸ್ಕೃತಿಯನ್ನು ಗೌರವಿಸುವ ಕೆಲಸವನ್ನು ಮಂಡ್ಯ ಜಿಲ್ಲಾಡಳಿತ, ರಾಜ್ಯ ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಗೌರವಿಸಬೇಕೆಂದು ವಿವಿಧ ಪ್ರಗತಿಪರ ಸಂಘಟನೆಗಳು ಒಕ್ಕೊರಲ ತೀರ್ಮಾನಕ್ಕೆ ಬಂದಿವೆ.

IMG 20241208 WA0049 1
ಪ್ರಗತಿಪರ ಸಂಘಟನೆಗಳ ಸಭೆ

ಭಾನುವಾರ ಸಂಜೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನವನದಲ್ಲಿ ಸಭೆ ಸೇರಿದ ಹಲವು ಸಂಘಟನೆಗಳ ಮುಖಂಡರು ಮಾಂಸಾಹಾರ ಬೇಕು ಎಂಬುದು ಕೇವಲ ಆಹಾರಕ್ಕಾಗಿಯಲ್ಲ, ಬಹುಜನರ ಆಹಾರ ಸಂಸ್ಕೃತಿಯನ್ನು ಎತ್ತಿ ಹಿಡಿಯುದಕ್ಕಾಗಿ ಎಂಬುದನ್ನು ಸಾಹಿತ್ಯ ಸಮ್ಮೇಳನದ ಸಂಘಟಕರು ಅರ್ಥ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದರು.

ಇದನ್ನು ನೋಡಿದ್ದೀರಾ? ಬಾಡೂಟದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದುವರೆಗೆ ನಡೆದ 86 ಸಮ್ಮೇಳನಗಳಲ್ಲಿ ಮಾಂಸಾಹಾರವನ್ನು ನೀಡದೇ ಬಹುಜನರ ಆಹಾರ ಸಂಸ್ಕೃತಿಯನ್ನು ಅವಮಾನಿಸಲಾಗಿದೆ, ಹಾಗಾಗಿ ಮಾಂಸಾಹಾರ ನಿಷೇಧವನ್ನು ವಾಪಸ್ ಪಡೆದು, ಮಾಂಸಾಹಾರ  ಆಹಾರ ಸಂಸ್ಕೃತಿಯನ್ನು ಗೌರವಿಸಬೇಕೆಂದು ಒತ್ತಾಯಿಸಿದರು.

ಬಾಡೂಟ, ಬಾಡಿಲ್ಲದ ಊಟ ಎರಡೂ ಇರಲಿ

ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬಾಡಿಲ್ಲದ ಊಟ ಎರಡೂ ಇರಲಿ. ಯಾವುನ್ನು ತಿನ್ನಬೇಕು ಎಂಬುದನ್ನು ಜನರ ವಿವೇಚನೆ ಬಿಡಬೇಕು. ಸಸ್ಯಹಾರವೇ ಶ್ರೇಷ್ಠ ಎಂಬ ಹಲವು ದಶಕಗಳ ಹೇರಿಕೆಯನ್ನು ಮಂಡ್ಯ ಸಮ್ಮೇಳನದಲ್ಲಿ ಸುಳ್ಳಾಗಿಸುವ ಮೂಲಕ ಮಾಂಸಾಹಾರಕ್ಕೂ ಅವಕಾಶ ನೀಡಬೇಕೆಂಬ ಅಭಿಪ್ರಾಯ ಕೇಳಿ ಬಂತು.

ನಾಳೆ ಜಿಲ್ಲಾಧಿಕಾರಿಗೆ ಮನವಿ

ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ನಾಳೆ (ಡಿ.9)ರಂದು ಮಂಡ್ಯ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲು ಸಭೆಯು ತೀರ್ಮಾನ ಕೈಗೊಂಡಿತು.

ಸಾಂಕೇತಿಕ ಬಾಡೂಟ

ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ  ಮಂಡ್ಯದ ನೆಲದಲ್ಲಿ ಬಾಡೂಟ ಇಲ್ಲದ ಮೇಲೆ! ಎಂತಹಾ ಅತಿಥಿ ಸತ್ಕಾರವಾದೀತು.ಮಾಂಸಾಹಾರದ ಆಯ್ಕೆ ಇರದಿದ್ದರೆ ಪರ್ಯಾಯವಾಗಿ ಬಾಡೂಟ ಪ್ರಿಯಯರಿಗೆ ಮಂಡ್ಯ ಶೈಲಿಯ ನಾಟಿ ಕೋಳಿ, ಬೋಟಿ ಗೊಜ್ಜು, ಮುದ್ದೆ ಊಟ ಆಯೋಜಿಸುವ ಕುರಿತು ವಿವಿಧ ಸಂಘಟನೆಗಳು ಚಿಂತನೆ ನಡೆಸಿವೆ.

ಇದನ್ನು ಓದಿದ್ದೀರಾ? ಕನಕಪುರ | ಉಪಮುಖ್ಯಮಂತ್ರಿಯ ಹಳ್ಳಿಯಲ್ಲಿಯೂ ಜನರು ತಿರುಗಾಡಲು ಬಸ್ ಸೌಲಭ್ಯವಿಲ್ಲ!

ಸಭೆಯಲ್ಲಿ ಸಿಪಿಐಎಂ ನ ಟಿ.ಎಲ್.ಕೃಷ್ಣೇಗೌಡ, ಸಿಐಟಿಯು ಕುಮಾರಿ, ದೇವರಾಜ ಅರಸು ಹಿಂದುಳಿದ ವೇದಿಕೆಯ ಎಲ್.ಸಂದೇಶ್, ಕರ್ನಾಟಕ ಜನಶಕ್ತಿಯ ಪೂರ್ಣಿಮ, ಗ್ರಾ.ಪಂ.ಸದಸ್ಯರ ಒಕ್ಕೂಟದ ನಾಗೇಶ್, ಕರುನಾಡ ಸೇವಕರು ಸಂಘಟನೆಯ ನಾಗಣ್ಣಗೌಡ, ಕ್ಷೀರಸಾಗರ ಮಿತ್ರಕೂಟದ ಕೀಲಾರ ಕೃಷ್ಣೇಗೌಡ, ಸುರೇಶ್, ಚಿತ್ರಕೂಟದ ಅರವಿಂದ ಪ್ರಭು, ಜಾಗೃತ ಕರ್ನಾಟಕದ ಸಂತೋಷ್, ನಗರಕೆರೆ ಜಗದೀಶ್, ನೆಲದನಿ ಬಳಗದ ಲಂಕೇಶ್, ಕರವೇ ಮುಖಂಡ ಹೆಚ್.ಡಿ.ಜಯರಾಂ, ಕರುನಾಡ ಸೇವಕರು ಸಂಘಟನೆಯ ನಾಗಣ್ಣಗೌಡ, ಸಮಾನ ಮನಸ್ಕರ ವೇದಿಕೆ ನರಸಿಂಹಮೂರ್ತಿ, ಟಿ.ಡಿ.ನಾಗರಾಜು, ಶೋಷಿತರ ಒಕ್ಕೂಟದ ಸುಂಡಹಳ್ಳಿ ಮಂಜುನಾಥ್, ಮುಖಂಡರಾದ ಚಿನಕುರಳಿ ರಮೇಶ್, ಸಿ.ಎಂ.ದ್ಯಾವಪ್ಪ, ತಿರುಮಲಾಪುರ ನಾರಾಯಣ್, ವಕೀಲ ಚೀರನಹಳ್ಳಿ ಲಕ್ಷ್ಮಣ್, ಜಿ.ಎನ್.ಕೆಂಪರಾಜು, ಸಬ್ಬನಹಳ್ಳಿ ಶಶಿಧರ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...