ಮೀನುಗಾರ ಸಮುದಾಯಕ್ಕೆ ಟಿಕೆಟ್‌ ನೀಡದಿದ್ದರೆ ಚುನಾವಣೆ ಬಹಿಷ್ಕಾರ; ರಾಮಚಂದ್ರ ಬೈಕಂಪಾಡಿ

Date:

  • ಮೀನುಗಾರ ಸಮುದಾಯ 70 ಲಕ್ಷ ಮಂದಿ ಜನಸಂಖ್ಯೆ ಹೊಂದಿದೆ
  • ಹಿಂದುತ್ವದ ಆಧಾರದ ಮೇಲೆ ಬಿಜೆಪಿಗೆ ಮತ ಹಾಕಲಾಗುತ್ತಿತ್ತು

ಕಳೆದ 70 ವರ್ಷಗಳಿಂದ ಕರಾವಳಿ ಜಿಲ್ಲೆಗಳಲ್ಲಿ ವಾಸಿಸುವ ಮೀನುಗಾರ ಸಮುದಾಯವನ್ನು ನಿರ್ಲಕ್ಷಿಸಲಾಗಿದೆ. ಈ ಬಾರಿಯೂ ಸಮುದಾಯಕ್ಕೆ ಟಿಕೆಟ್ ನಿರಾಕರಿಸಿದರೆ ನಾವು ಚುನಾವಣೆಯನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ರಾಮಚಂದ್ರ ಬೈಕಂಪಾಡಿ ಹೇಳಿದರು.

ಬಿಜೆಪಿ ವಿಶೇಷ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಮೀನುಗಾರ ಸಮುದಾಯದ ಮುಖಂಡ ರಾಮಚಂದ್ರ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೊಗವೀರ ಸಮುದಾಯದ ಒಬ್ಬನೇ ಬಿಜೆಪಿ ಶಾಸಕ ಇರುವುದು” ಎಂದು ತಿಳಿಸಿದರು.

“ಹಿಂದುತ್ವದ ಆಧಾರದ ಮೇಲೆ ಸಮುದಾಯದ ಶೇ. 80ರಷ್ಟು ಮಂದಿ ಬಿಜೆಪಿಗೆ ಮತ ಹಾಕಿದ್ದಾರೆ. ಆದರೂ, ಈ ಸಮುದಾಯಕ್ಕೆ ಈವರೆಗೆ ಎಂಎಲ್‌ಸಿ ಅಥವಾ ಇತರ ಯಾವುದೇ ಟಿಕೆಟ್‌ಗಳನ್ನು ನೀಡಿಲ್ಲ” ಎಂದು ರಾಮಚಂದ್ರ ಬೈಕಂಪಾಡಿ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದ ಮೊಗವೀರ ಸಮುದಾಯ 70 ಲಕ್ಷ ಮಂದಿ ಜನಸಂಖ್ಯೆಯನ್ನು ಹೊಂದಿದ್ದು, ಒಳನಾಡು ಮತ್ತು ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದಾರೆ. ಈ ಸಮುದಾಯವನ್ನು ಬಿಜೆಪಿ ನಿರ್ಲಕ್ಷಿಸಿದರೆ ಸಮುದಾಯದ ಯಾರೊಬ್ಬರೂ ಸಚಿವರಾಗಲು ಸಾಧ್ಯವಿಲ್ಲ” ಎಂದು ವಿಷಾದಿಸಿದರು.

ಈ ಸುದ್ದಿ ಓದಿದ್ದೀರಾ? ಕತ್ತು ಕೊಯ್ದವರಿಂದ ನೀತಿ ಪಾಠ ಕಲಿಯುವ ಅಗತ್ಯ ಇಲ್ಲ: ನಾರಾಯಣಗೌಡ ವಿರುದ್ಧ ಎಚ್‌ಡಿಕೆ ಕಿಡಿ

“ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೊಗವೀರ ಸಮುದಾಯಕ್ಕೆ ಕನಿಷ್ಠ ಒಂದು ಸ್ಥಾನ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

“ಮೊಗವೀರ ಸಮುದಾಯದ ಕುಂದುಕೊರತೆಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ತಿಳಿಸಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...