ಉಡುಪಿ | ಪತ್ರಿಕೋದ್ಯಮ ಫ್ಯಾಷನ್ ಆಗಿ ತೆಗೆದುಕೊಳ್ಳಬೇಡಿ, ವಿಷನ್ ಇರಲಿ – ಲಕ್ಷ್ಮೀ ಮಚ್ಚಿನ

Date:

ಯುವಜನಾಂಗ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದಬೇಕು. ಆದರೆ ಯಾವುದೋ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳು, ಕಾಲ್ಪನಿಕ ಕಥೆಗಳನ್ನು ನಂಬಿಕೊಂಡು ಕೆಟ್ಟ ಫ್ಯಾಷನ್‌ನೊಂದಿಗೆ ಈ ರಂಗಕ್ಕೆ ಬರುವುದಕ್ಕಿಂತ ಒಳ್ಳೆ ವಿಷನ್‌ನ್ನು ಇಟ್ಟುಕೊಂಡು ಉತ್ತಮ ವಿಚಾರಗಳನ್ನು ಮೈಗೂಡಿಸಿಕೊಂಡು ಪತ್ರಿಕೋದ್ಯಮಕ್ಕೆ ಬನ್ನಿ ಎಂದು ಉದಯವಾಣಿ ದಿನಪತ್ರಿಕೆ ಹಿರಿಯ ವರದಿಗಾರ ಲಕ್ಷ್ಮೀ ಮಚ್ಚಿನ ತಿಳಿಸಿದರು.

ಅವರು ಮಣೂರು-ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಇಂದು ನಡೆದ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನದ ಪುರಸ್ಕಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಇಂದು ಸಮಾಜದಲ್ಲಿ ಸುಳ್ಳು ಯಾವುದು ಸತ್ಯ ಯಾವುದು ಎನ್ನುವುದನ್ನು ಪತ್ತೆ ಹಚ್ಚುವುದು ಕಷ್ಟವಾಗುವ ಸ್ಥಿತಿ ಇದೆ ಹಾಗೂ ಒಳ್ಳೆತನವನ್ನು ಗೌರವಿಸುವವರ ಸಂಖ್ಯೆ ಕೂಡ ಕಡಿಮೆ ಇದೆ. ಆದರೆ ಇವೆಲ್ಲದರ ನಡುವೆ ನಾವು ಒಳ್ಳೆಯ ವಿಚಾರಗಳನ್ನು ಮೈಗೂಡಿಸಿಕೊಂಡರೆ ಅದನ್ನು ಗೌರವಿಸುವ ವರ್ಗವೂ ಇದ್ದು ಒಳ್ಳೆತನವನ್ನು ಮರೆಯಬೇಡಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1006385848

ಹಿರಿಯ ಪತ್ರಕರ್ತ ಯು.ಎಸ್. ಶೆಣೈ ಮಾತನಾಡಿ, ಪತ್ರಿಕೋದ್ಯಮದಲ್ಲಿ ಯುವಜನತೆಗೆ ಉತ್ತಮ ಅವಕಾಶವಿದೆ. ಆದರೆ ರಂಗದಲ್ಲಿ ಒಂದಷ್ಟು ಸವಾಲುಗಳಿರುವುದುರಿಂದ ಒಂದಷ್ಟು ಅಧ್ಯಯನ ಮಾಡಿ, ಒಳಿತು-ಕೆಡುಕುಗಳನ್ನು ತಿಳಿದು ಈ ಕ್ಷೇತ್ರ ಆಯ್ಕೆ ಮಾಡಿಕೊಳ್ಳಿ ಎಂದರು.

ಪಡುಕರೆ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡೆನ್ನಿಸ್ ಬಾಂಜ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಬ್ರಹ್ಮಾವರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಹಿರಿಯ ವರದಿಗಾರ, ಕಾರ್ಕಳ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪೇತ್ರಿ ಭಾಸ್ಕರ ರಾವ್ ಅವರಿಗೆ ಪತ್ರಿಕಾ ದಿನಾಚರಣೆ ಪುರಸ್ಕಾರ ನೀಡಿ ಗೌರವಿಸಲಾಯಿತು ಹಾಗೂ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಯು.ಎಸ್.ಶೆಣೈ ಅವರನ್ನು ಗೌರವಿಸಲಾಯಿತು.

ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ, ಬ್ರಹ್ಮಾವರ ತಾಲೂಕು ಕಾರ್ಯದರ್ಶಿ ಹರೀಶ್ ಕಿರಣ್ ತುಂಗ, ಸದಸ್ಯರಾದ ರವೀಂದ್ರ ಕೋಟ, ಪ್ರವೀಣ್ ಮುದ್ದೂರು, ಗಣೇಶ್ ಸಾಬ್ರಕಟ್ಟೆ, ಪ್ರವೀಣ್ ಕುಮಾರ್, ಇಬ್ರಾಹಿಂ ಸಾಹೇಬ್, ಉಪಸ್ಥಿತರಿದ್ದರು. ಸಂಘದ ಸದಸ್ಯ ಮೋಹನ್ ಉಡುಪ ಸ್ವಾಗತಿಸಿ, ಬಂಡೀಮಠ ಶಿವರಾಮ ಆಚಾರ್ಯ ಹಾಗೂ ಕೆ.ಜಿ.ವೈದ್ಯ ಸಮ್ಮಾನಿತರನ್ನು ಪರಿಚಯಿಸಿದರು. ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಹರೀಶ್ ಕಿರಣ್ ತುಂಗ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...